ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗನಿಂದ ಪಾಕ್ ಪರ ಘೋಷಣೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪ್ರತಿಭಟನೆ

Wednesday, February 28th, 2024
BJP-gherao

ಮಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟದ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿಯ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು […]

ಕೃಷ್ಣ ಜೆ ಪಾಲೆಮಾರ್, ಡಾ. ಎಂ ಎನ್ ರಾಜೇಂದ್ರ ಕುಮಾರ್ ಸಹಿತ ಏಳು ಮಂದಿಗೆ ಜಾನಪದ ಕಡಲೋತ್ಸವ ಗೌರವ ಪ್ರಶಸ್ತಿ

Monday, February 26th, 2024
ಕೃಷ್ಣ ಜೆ ಪಾಲೆಮಾರ್, ಡಾ. ಎಂ ಎನ್ ರಾಜೇಂದ್ರ ಕುಮಾರ್ ಸಹಿತ ಏಳು ಮಂದಿಗೆ ಜಾನಪದ ಕಡಲೋತ್ಸವ ಗೌರವ ಪ್ರಶಸ್ತಿ

ಮಂಗಳೂರು : ಮಾರ್ಚ್ 1 ರಿಂದ 3ರವರೆಗೆ ಪಣಂಬೂರು ಬೀಚಿನಲ್ಲಿ ನಡೆಯುವ ನಡೆಯುವ ಜಾನಪದ ಕಡಲು ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಅಧಾನಿ ಗ್ರೂಪ್‌ನ ಅಧ್ಯಕ್ಷರಾದ ಕಿಶೋರ್ ಆಳ್ವ, ಹೇರಂಬ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬಯಿಯ ಅಧ್ಯಕ್ಷರಾದ ಶ್ರೀ ಸದಾಶಿವ ಶೆಟ್ಟಿ ಕನ್ಯಾನ, ರೋಹನ್ ಕಾರ್ಪೊರೇಶನ್ ಸಂಸ್ಥಾಪಕರಾದ ರೋಹನ್ ಮೊಂತೆರೋ, ದಿವ್ಯರೂಪ ಕನ್ಸ್ಟ್ರಕ್ಷನ್ ಮಾಲಕರಾದ ಯಾದವ ಕೋಟ್ಯಾನ್ ಪೆರ್ಮುದೆ. ದೈವ ನರ್ತಕರಾದ ಮುಖೇಶ್ […]

ರಾಜ್ಯದ ಬೊಕ್ಕಸ ತುಂಬಿಸಿಕೊಳ್ಳಲು ಹಿಂದೂ ದೇವಾಲಯಗಳ ಆದಾಯ : ಶಾಸಕ ವೇದವ್ಯಾಸ್ ಕಾಮತ್

Monday, February 26th, 2024
Vedavyas-kamath

ಮಂಗಳೂರು : ರಾಜ್ಯದಲ್ಲಿ ಹಳಿ ತಪ್ಪಿದ ಆಡಳಿತ ನಿರ್ವಹಣೆಯಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ವರ್ಷ ತುಂಬುವುದರೊಳಗೆ ಮತದಾರ ಪ್ರಭುಗಳು ತೀವ್ರ ಹತಾಶಗೊಂಡಿದ್ದಾರೆ. ಈಗ ಆಡಳಿತ ನಿರ್ವಹಿಸುತ್ತಿರುವುದು ಕಾಂಗ್ರೆಸ್ಸೋ ಅಥವಾ ಸರ್ಕಾರಿ ಅಧಿಕಾರಿಗಳೋ ಎಂಬುದರ ಬಗ್ಗೆಯಂತೂ ಪ್ರತಿಯೊಬ್ಬರಿಗೂ ಸಂದೇಹವುಂಟಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಶಾಲೆಗಳ ಪ್ರವೇಶ ದ್ವಾರದಲ್ಲಿದ್ದ ರಾಷ್ಟ್ರಕವಿ ಕುವೆಂಪು ಅವರ “ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ” ಎಂಬ ಸಾಲುಗಳನ್ನು “ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು” ಎಂದು ಬದಲಾವಣೆ ಮಾಡಿದ್ದನ್ನು ರಾಜ್ಯದ ಜನರೇ […]

ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

Monday, February 26th, 2024
ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ : ಡಾ. ಪುರುಷೋತ್ತಮ ಬಿಳಿಮಲೆ

ಮಂಗಳೂರು : ಈ ದೇಶವನ್ನು ಮುಸ್ಲಿಮರು 600 ವರ್ಷಗಳ ಕಾಲ ಆಳಿದ್ದಾರೆ. ಅವರು ಮರಣವಪ್ಪಿದ್ದು ಕೂಡಾ ಇಲ್ಲೇ. ಹಾಗಾಗಿ ಅವರು ದೋಚಲಿಲ್ಲ. ಈ ದೇಶದ ಹಿಂದುಗಳು ಶೇಕಡಾ 24ರಷ್ಟು ಹಿಂದುಳಿದಿದ್ದರೆ ಮುಸ್ಲಿಮರು ಶೇ.38ರಷ್ಟು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅವರು ದೋಚಿದ್ದರೆ ಹಿಂದುಗಳಿಗಿಂತ ಶ್ರೀಮಂತರಾಗಬೇಕಿತ್ತು. ಈ ಕಹಿಸತ್ಯವನ್ನು ಜಗತ್ತಿಗೆ ತಿಳಿಸುವುದಕ್ಕಾಗಿಯಾದರೂ ಮುಸ್ಲಿಮರು ಬರವಣಿಗೆಯಲ್ಲಿ ಸಕ್ರಿಯವಾಗಬೇಕು ಎಂದು ಜೆಎನ್‌ಯು ನಿವೃತ್ತ ಪ್ರಾಧ್ಯಾಪಕರಾದ ಡಾ. ಪುರುಷೋತ್ತಮ ಬಿಳಿಮಲೆಯವರು ಅಭಿಪ್ರಾಯಪಟ್ಟಿದ್ದಾರೆ. ಉಡುಗೊರೆ ಪ್ರಕಾಶನ ಪ್ರಕಟಿಸಿದ ಕವಯಿತ್ರಿ ಫಾತಿಮಾ ರಲಿಯಾ ಅವರ ‘ಅವಳ ಕಾಲು ಸೋಲದಿರಲಿ’ […]

ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ರಾಜು ಮೊಗವೀರ ನೇಮಕ

Monday, February 26th, 2024
ಮಂಗಳೂರು ವಿಶ್ವವಿದ್ಯಾಲಯದ ನೂತನ  ಕುಲಸಚಿವರಾಗಿ ಕೆ.ರಾಜು ಮೊಗವೀರ ನೇಮಕ

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ಎ.ಎಸ್(ಆಯ್ಕೆ ಶ್ರೇಣಿ)ಅಧಿಕಾರಿ ಕೆ.ರಾಜು ಮೊಗವೀರ ಅವರು ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ಬೀಕರಿಸಿದರು. ಈ ಸಂದರ್ಭ ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ ಅವರು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪಂಚಾಯತಿಯಲ್ಲಿ ಉಪಕಾರ್ಯದರ್ಶಿಯಾಗಿ‌ ಕಾರ್ಯನಿರ್ವಹಿಸುತ್ತಿದ್ದ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ(ಆಡಳಿತ)ರಾಗಿ ನೇಮಕಗೊಳಿಸಲಾಗಿದೆ. ರಾಜು ಮೋಗವೀರ ಅವರು ಕೆಲವು ವರ್ಷದ‌ ಹಿಂದೆ ಮಂಗಳೂರು ವಿವಿಯ ಕುಲಸಚಿವರಾಗಿ ಕಾರ್ಯನಿರ್ವಹಿಸಿ ಬಳಿಕ ಬೇರೆ ಇಲಾಖೆಗೆ ವರ್ಗಾವಣೆಗೊಂಡಿದ್ದರು.

ಪುತ್ತೂರು ಮೂಲದ ಪಿಎಚ್ ಡಿ ವಿದ್ಯಾರ್ಥಿನಿ ಡ್ರಗ್ಸ್ ಜಾಲದಲ್ಲಿ ಸಿಲುಕಿ ನಾಪತ್ತೆ

Saturday, February 24th, 2024
chaitra-hebbar

ಮಂಗಳೂರು: ಪಿಎಚ್ ಡಿ ವಿದ್ಯಾರ್ಥಿನಿಯೋರ್ವಳು ಡ್ರಗ್ಸ್ ಜಾಲದಲ್ಲಿ ಸಿಲುಕಿ ನಾಪತ್ತೆಯಾದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಪುತ್ತೂರಿನ ಪುರುಷರ ಕಟ್ಟೆಯ ವಿದ್ಯಾರ್ಥಿನಿ ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದು, ಪ್ರಕರಣದ ಹಿಂದೆ ಡ್ರಗ್ಸ್ ಮಾಫಿಯಾದ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಆಕೆಯ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಚೈತ್ರಾ ಹೆಬ್ಬಾರ್(27) ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪುತ್ತೂರು ಮೂಲದ ಮುಸ್ಲಿಂ ಯುವಕ ಶಾರೂಕ್ ಶೇಕ್ ಎಂಬಾತನ ಜೊತೆಗೆ ತೆರಳಿರುವ ಅನುಮಾನ ದಟ್ಟವಾಗಿದೆ. ವಿದ್ಯಾರ್ಥಿನಿಯ ತಂದೆ ಸಾವನ್ನಪ್ಪಿದ್ದು, ಮಂಗಳೂರಿನ ಕದ್ರಿಯಲ್ಲಿರುವ […]

ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

Saturday, February 24th, 2024
ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

ಮಂಗಳೂರು : ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಶ್ರೀಮತಿ ಗೀತಾ ಡಿ. ರವರು 2023 ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ. ಸದ್ರಿಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.02.2024 ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತೆ ಶ್ರೀಮತಿ ಗೀತಾ ಡಿ. ಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಸದ್ರಿಯವರು ತಮ್ಮ ಪದವಿ […]

ಜೈನಧರ್ಮವನ್ನು ಉಳಿಸುವುದಕ್ಕಿಂತ ಪಾಲಿಸುವ ಪ್ರಯತ್ನ ಮಾಡಬೇಕು : ದೇವೇಂದ್ರಕೀರ್ತಿ ಭಟ್ಠಾರಕ ಸ್ವಾಮೀಜಿ

Saturday, February 24th, 2024
venuru

ವೇಣೂರು: ಜೈನಧರ್ಮವನ್ನು ಉಳಿಸುವುದಕ್ಕಿಂತ ಅದರ ತತ್ವ –ಸಿದ್ಧಾಂತಗಳನ್ನು ನಿತ್ಯವೂ ಮನ,ವಚನ ಮತ್ತು ಕಾಯದಿಂದ ತ್ರಿಕರಣಪೂರ್ವಕವಾಗಿ ಪಾಲಿಸುವ ಪ್ರಯತ್ನ ಮಾಡಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಶನಿವಾರ ವೇಣೂರಿನಲ್ಲಿ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅಯೋಜಿಸಿದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ತೀರ್ಥಂಕರರು ಜೈನಧರ್ಮ ಪ್ರಚಾರಕರಲ್ಲ, ಧರ್ಮ ಪ್ರಭಾವಕರು ಎಂದು ಅವರು ಸ್ಪಷ್ಟಪಡಿಸಿದರು. ಅಂತರಂಗದಲ್ಲಿಯೂ, ಬಹಿರಂಗದಲ್ಲಿಯೂ ಅಹಿಂಸಾಧರ್ಮದ ಪಾಲನೆ ಮಾಡಬೆಕು. ಮಹಾವೀರ ತೀರ್ಥಂಕರರು ಉಪದೇಶ ಮಾಡಿದ ಸರ್ವೋದಯ ತೀರ್ಥವನ್ನು ಯಾರು ನಿತ್ಯವೂ ಪಾಲನೆ […]

ಬೆಂಗಳೂರಿನಲ್ಲಿ ವಿಶ್ವದ ಮೊದಲ ಮಲ್ಟಿಓಮಿಕ್ಸ್‌ ಲ್ಯಾಬ್‌ ಸ್ಥಾಪನೆ: ವಿಜ್ಹಿ ಸಿಇಓ ಡಾ ವಿಷ್ಣುವರ್ಧನ್‌

Saturday, February 24th, 2024
ಬೆಂಗಳೂರಿನಲ್ಲಿ ವಿಶ್ವದ ಮೊದಲ ಮಲ್ಟಿಓಮಿಕ್ಸ್‌ ಲ್ಯಾಬ್‌ ಸ್ಥಾಪನೆ: ವಿಜ್ಹಿ ಸಿಇಓ ಡಾ ವಿಷ್ಣುವರ್ಧನ್‌

ಬೆಂಗಳೂರು : ಮೆಟಬಾಲಿಕ್‌ ಡಿಸ್‌ಆರ್ಡರ್‌ಗಳ ನಿರ್ವಹಣೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವಾಗಿರುವ ಮಲ್ಟಿಓಮಿಕ್ಸ್‌ ನ ವಿಶ್ವದ ಮೊದಲ ಲ್ಯಾಬ್‌ ಅನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುವುದು ಎಂದು ವಿಜ್ಹಿ ಸಂಸ್ಥೆಯ ಸಂಸ್ಥಾಪಕರು “ಸ್ವದೇಶಿ ಜಿಪಿಟಿ ಹನೂಮಾನ್”‌ ನ ನಿರ್ಮಾತೃಗಳಾದ ಡಾ. ವಿಷ್ಣುವರ್ಧನ್‌ ತಿಳಿಸಿದರು. ಅಮೇರಿಕಾದ ಇಲಿಯಾನ್ಸ್‌ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರಗಳ ಮೂಲಕ ಆವಿಷ್ಕಾರಗೊಳಿಸಲಾಗಿರುವ ಈ ನೂತನ ತಂತ್ರಜ್ಞಾನ ಮೆಟಬಾಲಿಕ್‌ ಡಿಸ್‌ ಆರ್ಡರ್‌ಗಳ ನಿರ್ವಹಣೆಯಲ್ಲಿ ಹೊಸದೊಂದು ಮೈಲಿಗಲ್ಲನ್ನು ಸ್ಥಾಪಿಸಲಿದೆ. ಮೆಟಬಾಲಿಕ್‌ ಕಾಯಿಲೆಗಳ ಸಂಕೀರ್ಣತೆಗಳನ್ನು ಅರ್ಥೈಸಿಕೊಳ್ಳುವಲ್ಲಿ ಮಲ್ಟಿಓಮಿಕ್ಸ್‌ ತಂತ್ರಜ್ಞಾನ ಬಹಳ ಸಮರ್ಥವಾಗಿದೆ. ಇಲಿಯಾನ್ಸ್‌ ವಿಶ್ವವಿದ್ಯಾಲಯ, ಐಐಟಿ […]

ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

Friday, February 23rd, 2024
ದುಬೈನಲ್ಲಿ ರಸ್ತೆ ಅಪಘಾತ ಮಂಗಳೂರಿನ ಯುವತಿ ಸಾವು

ಮಂಗಳೂರು : ದುಬೈನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಉಳ್ಳಾಲ ಮೂಲದ ಯುವತಿ ಸಾವನ್ನಪ್ಪಿದ್ದಾರೆ. ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಕೆಂಪುಮಣ್ಣು ನಿವಾಸಿ ವಿದಿಶಾ (28) ವಿಧಿವಶರಾದ ದುರ್ದೈವಿ. ಇವರು ಮಂಗಳೂರು ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷೆ ಬಿಜೆಪಿ ಮುಖಂಡೆ ರಾಜೀವಿ ಹಾಗೂ ವಿಠಲ ಕುಲಾಲ್ ದಂಪತಿಯ ಏಕೈಕ ಪುತ್ರಿ. ಮಂಗಳೂರಿನ ಸಹ್ಯಾದ್ರಿ ಕಾಲೇಜಿನಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಬಳಿಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು. ಬಳಿಕ […]