ಕೊರೋನಾ ಮಹಾಮಾರಿ ಜಾಗತಿಕವಾಗಿ ಬಲಿ ಪಡೆದದ್ದು 39, 800 ಮಂದಿ ಅಮಾಯಕರನ್ನು

Tuesday, March 31st, 2020
Share

corona worldನವದೆಹಲಿ: ಚೀನಾ ದಿಂದ ಉಗಮವಾದ ಮಹಾಮಾರಿ ಕೊರೋನಾ ಇದೀಗ ಜಗತ್ತನ್ನೇ ತಲ್ಲಣಗೊಳಿಸಿದ್ದು ಸೋಂಕಿತರ ಸಂಖ್ಯೆ 8 ಲಕ್ಷ ದಾಟಿದ್ದು ಅದಾಗಲೇ 39, 800 ಮಂದಿ ಬಲಿಯಾಗಿದ್ದಾರೆ.

ಅಮೆರಿಕಾ, ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಲಕ್ಷ ದಾಟಿದ್ದರೆ ಸ್ಪೇನ್ ಸನಿಹದಲ್ಲಿದೆ. ಅಮೆರಿಕದಲ್ಲಿ 1,64,400 ಮಂದಿ ಸೋಂಕಿನಿಂದ ಬಳಲುತ್ತಿದ್ದು 3,173 ಮಂದಿ ಮೃತಪಟ್ಟಿದ್ದಾರೆ. ಇಟಲಿಯಲ್ಲಿ 1,02,000 ಸೋಂಕಿತರಿದ್ದು ಸಾವಿನ ಸಂಖ್ಯೆ ಮಾತ್ರ 11 ಸಾವಿರ ಗಡಿ ದಾಟಿದೆ.

ಇನ್ನು ಸ್ಪೇನ್ ನಲ್ಲೂ ಸಾವಿನ ಸಂಖ್ಯೆ ಏರಿಕೆಯಾಗುತ್ತದೆ. ಇಂದು ಒಂದೇ ದಿನ 473 ಮಂದಿ ಮೃತಪಟ್ಟಿದ್ದು 8,189 ಮಂದಿ ಬಲಿಯಾಗಿದ್ದಾರೆ. ಇನ್ನು 95 ಸಾವಿರ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಮಂಗಳವಾರ ಕೇರಳ, ಮಧ್ಯಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ. ಇನ್ನು 1400 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಕಾಬೂಲ್ ನಲ್ಲಿರುವ ಸಿಖ್ ಗುರುದ್ವಾರದ ಮೇಲೆ ಉಗ್ರರ ಗುಂಪು ದಾಳಿ, 27 ಮಂದಿ ಹತ್ಯೆ

Wednesday, March 25th, 2020
Share

Gurudwaraಕಾಬೂಲ್: ಭಾರೀ ಶಸ್ತ್ರ ಸಜ್ಜಿತ ಉಗ್ರರ ಗುಂಪು ಗುರುದ್ವಾರದ ಮೇಲೆ ಏಕಾಏಕಿ ದಾಳಿ ನಡೆಸಿ 27 ಮಂದಿಯನ್ನು ಹತ್ಯೆಗೈದಿರುವ ಘಟನೆ ಕಾಬೂಲ್ ನ ಶೋರ್ ಬಜಾರ್ ಪ್ರದೇಶದಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ. ಸಿಖ್ ಗುರುದ್ವಾರದ ಮೇಲೆ ದಾಳಿ ನಡೆಸಿರುವ ಘಟನೆಯನ್ನು ಭಾರತ ಖಂಡಿಸಿದೆ.

ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿರುವ ಕೇಂದ್ರ ಸರ್ಕಾರ ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದೆ. ಅಫ್ಘಾನಿಸ್ತಾನದಲ್ಲಿರುವ ಎಲ್ಲಾ ಹಿಂದೂ ಮತ್ತು ಸಿಖ್ ಸಮುದಾಯದ ಕುಟುಂಬಗಳಿಗೆ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ದವಾಗಿದೆ ಎಂದು ತಿಳಿಸಿದೆ.

ಕಾಬೂಲ್ ನಲ್ಲಿರುವ ಸಿಖ್ ಗುರುದ್ವಾರದ ಮೇಲೆ ನಡೆಸಿರುವ ದಾಳಿಯ ಹೊಣೆಯನ್ನು ಐಸಿಸ್ ಹೊತ್ತುಕೊಂಡಿರುವುದಾಗಿ ಎಸ್ ಐಟಿಇ ಇಂಟೆಲಿಜೆನ್ಸ್ ಗ್ರೂಪ್ ತಿಳಿಸಿದೆ. ಈ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್ ಐ ಕೈವಾಡ ಇದ್ದಿರಬಹುದು ಎಂದು ಭಾರತದ ಗುಪ್ತಚರ ಇಲಾಖೆ ಶಂಕೆ ವ್ಯಕ್ತಪಡಿಸಿದೆ.

ಮಹಾಮಾರಿ ಕೊರೋನಾ ವೈರಸ್​ಗೆ ಇಟಲಿಯಲ್ಲಿ ಒಂದೇ ದಿನಕ್ಕೆ 500 ಸಾವು

Thursday, March 19th, 2020
Share

itali

ಇಟಲಿ : ಮಹಾಮಾರಿ ಕೊರೋನಾ ವೈರಸ್ ಇಟಲಿ ದೇಶದಲ್ಲಿ ಅಟ್ಟಹಾಸ ಮುಂದುವರಿಸಿದೆ. ಬುಧವಾರ ಒಂದೇ ದಿನ ಇಟಲಿಯಲ್ಲಿ ಬರೋಬ್ಬರಿ 475 ಜನರು ಈ ವೈರಸ್ಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3,000 ಗಡಿ ತಲುಪಿದೆ.

ಜನವರಿ ಅಂತ್ಯಕ್ಕೆ ಕೊರೋನಾ ವೈರಸ್ ಚೀನಾದಲ್ಲಿ ತನ್ನ ಪ್ರಭಾವ ಬೀರಲು ಆರಂಭಿಸಿತ್ತು. ಮೊದಲು 30 ಜನರು ಮೃತಪಟ್ಟಿದ್ದರು. ಈ ಸಂಖ್ಯೆ ಈಗ 3,245ಕ್ಕೆ ಏರಿಕೆ ಆಗಿದೆ. ನಂತರ ಈ ವೈರಸ್ ಇಟಲಿಗೂ ಹಬ್ಬಿದ್ದು, ಈ ಮಹಾಮಾರಿ ವೈರಸ್ನಿಂದ ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚುತ್ತಲೆ ಇದೆ.

ಬುಧವಾರ ಒಂದೇ ದಿನ 4,207 ಹೊಸ ಪ್ರಕರಣ ದಾಖಲಾಗಿವೆ. ಈ ಮೂಲಕ ಸೋಂಕು ತಗುಲಿದವರ ಸಂಖ್ಯೆ 35,000ಕ್ಕೆ ಏರಿಕೆ ಆಗಿದೆ. ಇದು ಇಟಲಿ ಜನತೆಯಲ್ಲಿ ಆತಂಕ ಹೆಚ್ಚಿಸಿದೆ. ಈ ದೇಶದಲ್ಲಿ ಮಾಸ್ಕ್ಗಳ ಕೊರತೆ ಎದುರಾಗಿದೆ. ಅಲ್ಲದೆ, ಕೆಲವೇ ದಿನಗಳಲ್ಲಿ ಸಾವಿನ ಸಂಖ್ಯೆಯಲ್ಲಿ ಚೀನಾವನ್ನು ಇಟಲಿ ಹಿಂದಿಕ್ಕುವ ಸಾಧ್ಯತೆ ಇದೆ.

ಇನ್ನು, ಚೀನಾದಲ್ಲಿ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಂದಿದೆ. ದಿನಕ್ಕೆ 10-15 ಹೊಸ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಸಾವಿನ ಸಂಖ್ಯೆಯಲ್ಲೂ ಗಣನೀಯ ಇಳಿಕೆ ಕಂಡಿದೆ. ಇನ್ನು, ಜರ್ಮನಿ, ಫ್ರಾನ್ಸ್ ಹೊಸ ಪ್ರಕರಣಗಳ ಸಂಖ್ಯೆ 700ರ ಗಡಿ ದಾಟಿದೆ.

ಇಟಲಿಯಲ್ಲಿ ಏಪ್ರಿಲ್ 5ರಿಂದ ಈಸ್ಟರ್ ವಾರವನ್ನು ಆಚರಣೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಆದರೆ, ಕೊರೋನಾ ವೈರಸ್ ಹಿನ್ನಲೆಯಲ್ಲಿ ಈ ಆಚರಣೆಯನ್ನು ರದ್ದು ಮಾಡಲಾಗಿದೆ. ಇಟಲಿಯಲ್ಲಿ ಕೊರೋನಾ ವೈರಸ್ ಬಾಧಿತ ರೊಗಿಗಳಿಗೆ ಚಿಕಿತ್ಸೆ ನೀಡಲು ಸಂಪನ್ಮೂಲ ಸಾಕಾಗುತ್ತಿಲ್ಲ. ಅಲ್ಲಿಯ ಆರೋಗ್ಯ ವ್ಯವಸ್ಥೆ ಬಹುತೇಕ ಕುಸಿದಿದೆ. ಮುಗಿಬೀಳುತ್ತಿರುವ ಕೊರೋನಾ ಶಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಇಟಲಿ ಸರ್ಕಾರ ಒಂದು ನಿರ್ದಯ ನಿರ್ಧಾರ ತೆಗೆದುಕೊಂಡಿದೆ. 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಕೊರೋನಾ ಚಿಕಿತ್ಸೆ ನೀಡುವುದನ್ನು ನಿಲ್ಲಿಸಿದೆ. ಆ ಸಂಪನ್ಮೂಲವನ್ನು ಬೇರೆ ಪ್ರಾಯದ ರೋಗಿಗಳಿಗೆ ಬಳಸಲು ನಿರ್ಧರಿಸಿದೆ.

 

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿಗೂ ತಗುಲಿದ ಕೊರೊನಾ ಸೋಂಕು

Friday, March 13th, 2020
Share

kenada

ಒಟ್ಟಾವ : ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿ ಸೋಫಿ ಗ್ರೆಗೊಯಿರ್ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಕೆನಡಾದ ಪ್ರಧಾನಿ ಕಾರ್ಯಾಲಯ ಪ್ರಕಟಣೆ ಹೊರಡಿಸಿ ಸ್ಪಷ್ಟಪಡಿಸಿದೆ.

ಸೋಫಿ ಗ್ರೆಗೊಯಿರ್ ಅವರ ದೇಹದಲ್ಲಿ ಜ್ವರ ತರಹದ ರೋಗಲಕ್ಷಣ ಕಾಣಿಸಿಕೊಂಡದ್ದರಿಂದ ಪರೀಕ್ಷೆಗೆ ಒಳಪಡಿಲಾಯ್ತು. ಈ ವೇಳೆ ಧನಾತ್ಮಕ ಫಲಿತಾಂಶ ಬಂದಿದೆ. ವೈದ್ಯಕೀಯ ಸಲಹೆಗಳನ್ನು ಅನುಸರಿಸಿ ಆಕೆಯನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ನಿಗಾ ಇಡಲಾಗಿದ್ದು, ಮುನ್ನೆಚ್ಚರಿಕೆ ವಹಿಸಲಾಗಿದೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದೆ ಎಂದು ಪ್ರಧಾನಿ ಕಾರ್ಯಾಲಯ ತನ್ನ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಬುಧವಾರ ಬ್ರಿಟನ್‌ನಿಂದ ಹಿಂತಿರುಗಿದ ಸೋಫಿ ಗ್ರೆಗೊಯಿರ್ ಅವರಲ್ಲಿ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಕೊರೊನಾ ತರಹದ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ ತಾನು ಪರೀಕ್ಷೆಗೆ ಒಳಗಾಗುತ್ತೇನೆ ಎಂದು ಅವರೇ ಹೇಳಿಕೊಂಡಿದ್ದರು. 14 ದಿನಗಳ ಕಾಲ ಸ್ವಯಂ-ನಿರ್ಬಂಧ , ಪ್ರತ್ಯೇಕತೆ ಹೊಂದಿ ಬೇರೆ ಆಗಿ ಇರುವುದಾಗಿ ಹೇಳಿಕೊಂಡಿದ್ದರು.

ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಗ್ಯದಲ್ಲಿ ಕೊರೊನಾದ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಅವರು ಆರೋಗ್ಯವಾಗಿದ್ದು, ವೈದ್ಯರ ಸಲಹೆಯನ್ನು ಅನುಸರಿಸಿ ಅವರ ಮೇಲೆ ಕೂಡ ಪ್ರತ್ಯೇಕ ನಿಗಾ ಇರಿಸಿ ಮುನ್ನೆಚ್ಚರಿಕೆವಹಿಸಲಾಗಿದೆ. ಮನೆಯಿಂದಲೇ ತಾನು ಕೆಲಸ ಮಾಡುವುದಾಗಿ ಹೇಳಿರುವ ಪ್ರಧಾನಿ ಇಂದು ಕೆನಡಾದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೋಫಿ ಗ್ರೆಗೊಯಿರ್ ಕೊರೊನಾ ಪೀಡಿತೆ ಆಗಿರುವುದರಿಂದ ಮೂವರು ಮಕ್ಕಳ ಮೇಲೆ ಕೂಡ ನಿಗಾ ಇಡಲಾಗಿದೆ.

ದೇಶದಲ್ಲಿ ಕೊರೊನ ಹೆಚ್ಚುತ್ತಿರುವುದಿಂದ ಒಟ್ಟಾವಾದಲ್ಲಿ ಕೆನಡಾದ ಪ್ರಾಂತೀಯ ಮತ್ತು ಪ್ರಾದೇಶಿಕ ನಾಯಕರೊಂದಿಗೆ ನಿರ್ಧರಿಸಲಾಗಿದ್ದ ಸಭೆಯನ್ನು ಪ್ರಧಾನಿ ಟ್ರುಡೊ ರದ್ದುಗೊಳಿಸಿದ್ದಾರೆ. ವರದಿ ಪ್ರಕಾರ ಕೆನಾಡದಲ್ಲಿ 140ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಓಬ್ಬರನ್ನು ಬಲಿ ಪಡೆದಿದೆ. 11 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

 

ತಾಲಿಬಾನಿಗಳ ಬಿಡುಗಡೆಗೆ ಅಫ್ಘನ್ ಅಧ್ಯಕ್ಷ ಅಶ್ರಫ್ ನಕಾರ

Monday, March 2nd, 2020
Share

kabul

ಕಾಬೂಲ್ : ಅಫ್ಘಾನಿಸ್ತಾನ ಸರ್ಕಾರದ ಬಂಧನದಲ್ಲಿರುವ ಐದು ಸಾವಿರ ತಾಲಿಬಾನಿಗಳನ್ನು ಬಿಡುಗಡೆ ಮಾಡಬೇಕೆಂಬ ಬೇಡಿಕೆಯನ್ನು ಆಫ್ಘನ್ ಅಧ್ಯಕ್ಷ ಅಶ್ರಫ್ ಘನಿ ಭಾನುವಾರ ತಿರಸ್ಕರಿಸಿದ್ದಾರೆ.

ಅಫ್ಘನ್ ಸರ್ಕಾರ ಮತ್ತು ಜನರೊಂದಿಗೆ ಮಾತುಕತೆ ನಡೆಸಬೇಕಾದರೆ ತನ್ನವರನ್ನು ಬಿಡುಗಡೆ ಮಾಡಬೇಕೆಂಬುದು ತಾಲಿಬಾನ್ ಷರತ್ತಾಗಿದೆ. ಆದರೆ, ಈ ಒತ್ತಾಯಕ್ಕೆ ಸೊಪ್ಪು ಹಾಕದಿರಲು ಸರ್ಕಾರ ನಿರ್ಧರಿಸಿರುವುದರಿಂದ ಶನಿವಾರವಷ್ಟೆ ಸಹಿ ಹಾಕಲಾಗಿರುವ ಒಪ್ಪಂದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಜೈಲಿನಲ್ಲಿರುವ ತಾಲಿಬಾನಿಗಳ ಬಿಡುಗಡೆಗೆ ಪ್ರತಿಯಾಗಿ ತಾಲಿಬಾನ್ ವಶದಲ್ಲಿರುವ ಅಫ್ಘನ್ ಸರ್ಕಾರದ ಸುಮಾರು 1 ಸಾವಿರ ಬಂಧಿಗಳನ್ನು ಬಿಡುಗಡೆ ಮಾಡಲಾಗುವುದೆಂದು ಒಪ್ಪಂದದಲ್ಲಿ ಹೇಳಲಾಗಿದೆ. ಆದರೆ, ಅಧ್ಯಕ್ಷ ಘನಿ ತಾಲಿಬಾನಿಗಳ ಬಿಡುಗಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಇದನ್ನು ನಿರ್ಧರಿಸುವ ಹಕ್ಕು ಅಮೆರಿಕಕ್ಕಿಲ್ಲ. ಅದು ಏನಿದ್ದರೂ ಮಧ್ಯವರ್ತಿ ಅಷ್ಟೆ’ ಎಂದು ಘನಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

18 ವರ್ಷಗಳ ಯುದ್ಧವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಕತಾರ್ನಲ್ಲಿ ತಾಲಿಬಾನ್ಗಳ ಜತೆ ಶನಿವಾರ ಒಪ್ಪಂದಕ್ಕೆ ಸಹಿ ಹಾಕಿದೆ. ಕತಾರ್ನಲ್ಲಿನ ಭಾರತದ ರಾಯಭಾರಿ ಪಿ. ಕುಮಾರನ್ ವೀಕ್ಷಕರಾಗಿ ಭಾಗವಹಿಸಿ ಅದಕ್ಕೆ ಸಾಕ್ಷಿಯಾಗಿದ್ದರು. ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪಾಂಪಿಯೊ ಉಪಸ್ಥಿತರಿದ್ದರು.

 

ಅಪ್ರಾಪ್ತ ಹಿಂದೂ ಯುವತಿಯ ಬಲವಂತದ ಮದುವೆ ರದ್ದುಗೊಳಿಸಿದ ಪಾಕಿಸ್ಥಾನ ಕೋರ್ಟ್‌

Saturday, February 22nd, 2020
Share

sindh

ಇಸ್ಲಾಮಾಬಾದ್: ಇಸ್ಲಾಂಗೆ ಮತಾಂತರಗೊಂಡು , ದೇಶದ ಸಿಂಧ್ ಪ್ರಾಂತ್ಯದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಅಪ್ರಾಪ್ತ ಹಿಂದೂ ಹುಡುಗಿಯ ಮದುವೆಯನ್ನು ಪಾಕಿಸ್ತಾನ ನ್ಯಾಯಾಲಯವು ರದ್ದುಪಡಿಸಿದೆ.

ಒಂಬತ್ತನೇ ತರಗತಿಯಯಲ್ಲಿ ಓದುತಿದ್ದ ವಿದ್ಯಾರ್ಥಿನಿಯನ್ನು ಕಳೆದ ಜನವರಿ 15 ರಂದು ಜಾಕೋಬಾದ್ ಜಿಲ್ಲೆಯಿಂದ ಅಲಿ ರಾಜಾ ಸೋಲಂಗಿ ಎಂಬಾತ ಅಪಹರಿಸಿ, ಬಲವಂತವಾಗಿ ಮದುವೆಯಾಗಿದ್ದಾನೆ ಎಂದು ಆಕೆಯ ತಂದೆ ಎಫ್‌ಐಆರ್ ದಾಖಲಿಸಿದ್ದಾರೆ. ಅಪಹರಣಕ್ಕೊಳಗಾದಾಗ ಮಗಳಿಗೆ 15 ವರ್ಷ ವಯಸ್ಸಾಗಿತ್ತು ಎಂದು ಅವರು ಹೇಳಿದರು.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ ನ್ಯಾಯಾಧೀಶ ಗುಲಾಮ್ ಅಲಿ ಖಸ್ರೊ ಅವರು ತೀರ್ಪು ನೀಡಿ ಯುವತಿಯು ಅಪ್ರಾಪ್ತೆ ಆಗಿರುವುದರಿಂದ ವಿವಾಹವು ಸಿಂಧುವಲ್ಲ ಎಂದು ತೀರ್ಪಿತ್ತಿದ್ದಾರೆ. ಸೋಲಂಗಿಯನ್ನು ಮದುವೆಯಾಗಲು ಯುವತಿಯು ಇಸ್ಲಾಂ ಗೆ ಮತಾಂತರವಾಗಿ ಅಲಿಜ ಎಂದು ಹೆಸರನ್ನಿಟ್ಟುಕೊಂಡಿದ್ದಳು ಎಂದು ಹೇಳಲಾಗಿತ್ತು.

ಅಪಹರಣಕಾರ ಸೋಲಂಗಿಯು ಯುವತಿಯು ಸ್ವ ಇಚ್ಚೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ವಾದಿಸಿದ್ದ.
ಸಾಕ್ಷಿ ಮತ್ತು ದಾಖಲೆಗಳನ್ನು ಉಲ್ಲೇಖಿಸಿ ನ್ಯಾಯಾಧೀಶರು ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿದ್ದು ಮತ್ತು ಸಿಂಧ್ ಬಾಲ್ಯ ವಿವಾಹ ನಿರ್ಬಂಧ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಪ್ರಕಾರ ಮದುವೆಗೆ ಸೂಕ್ತವಲ್ಲ ಎಂದು ತೀರ್ಪು ನೀಡಿದರು.

ಬಾಲ್ಯ ವಿವಾಹವನ್ನು ನಡೆಸಲು, ಸುಗಮಗೊಳಿಸಲು ಮತ್ತು ಸಹಾಯ ಮಾಡಲು ತೊಡಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಲರ್ಕಾನಾದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಲಾರ್ಕಾನಾದ ಮಹಿಳಾ ಆಶ್ರಯ ಮನೆಯಿಂದ ಬಾಲಕಿಯನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.
ಸ್ಥಳೀಯ ಹಿಂದೂ ಮತ್ತು ಮುಸ್ಲಿಂ ಮುಖಂಡರು ಪಟ್ಟಣದಲ್ಲಿ ಜಮಾವಣೆಗೊಂಡಿದ್ದುದರಿಂದ ವಿಚಾರಣೆ ನ್ಯಾಯಾಲಯದಲ್ಲಿ ಮತ್ತು ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಹಿಂದೂಗಳು ಪಾಕಿಸ್ತಾನದ ಅತಿದೊಡ್ಡ ಅಲ್ಪಸಂಖ್ಯಾತ ಸಮುದಾಯವಾಗಿದೆ.

ಪಾಕಿಸ್ತಾನದ ಹಿಂದೂಗಳು ಬಹುಪಾಲು ವಾಸಿಸುವ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಮಹಿಳೆಯರ ಅಪಹರಣ ಮತ್ತು ಮತಾಂತರ ಪ್ರಮುಖ ವಿಷಯವಾಗಿದೆ. ಪ್ರತೀ ವರ್ಷವೂ ಸಾವಿರಾರು ಹಿಂದೂ ಹಾಗೂ ಕ್ರಿಶ್ಚಿಯನ್‌ ಹೆಣ್ಣು ಮಕ್ಕಳನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಿಸಿ ಮುಸ್ಲಿಂ ಯುವಕರ ಜತೆಗೆ ಮದುವೆ ಮಾಡಿಸಲಾಗುತ್ತಿದೆ. ಈ ಕುರಿತು ಅಲ್ಲಿನ ಪೋಲೀಸರಾಗಲೀ , ನ್ಯಾಯಾಲಯಗಳಾಗಲೀ ಅಲ್ಪ ಸಂಖ್ಯಾತ ಸಮುದಾಯದವರಿಗೆ ರಕ್ಷಣೆ ನೀಡುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಕಳೆದ ತಿಂಗಳಷ್ಟೆ ೯ ನೇ ತರಗತಿ ಓದುತಿದ್ದ ಕ್ರಿಶ್ಚಿಯನ್‌ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಬಲವಂತದ ಮದುವೆ ಕುರಿತು ತೀರ್ಪು ನೀಡಿದ್ದ ಪಾಕಿಸ್ಥಾನದ ಹೈ ಕೋರ್ಟ್‌ ಷರಿಯ ಕಾನೂನಿನ ಪ್ರಕಾರ ಮೈ ನೆರೆದ ಯುವತಿಯರು ಮದುವೆ ಹಾಗೂ ಮತಾಂತರಕ್ಕೆ ಅರ್ಹರು ಎಂದು ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ದ ಮಾನವ ಹಕ್ಕು ಸಂಘಟನೆಗಳು ಪ್ರತಿಭಟನೆ ವ್ಯಕ್ತಪಡಿಸಿದ್ದವು.

 

ಜರ್ಮನಿಯ ಹನೌನಗರದಲ್ಲಿ 2 ಹುಕ್ಕಾಬಾರ್​​ಗಳ ಮೇಲೆ ಗುಂಡಿನ ದಾಳಿ : 8 ಜನರ ಸಾವು

Thursday, February 20th, 2020
Share

jurmani

ಜರ್ಮನಿ : ಜರ್ಮನಿಯ ಹನೌನಗರದಲ್ಲಿ ಎರಡು ಹುಕ್ಕಾಬಾರ್ಗಳ ಮೇಲೆ ಗುಂಡಿನ ದಾಳಿ ನಡೆದು 8 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 10 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಹುಕ್ಕಾ ಬಾರ್ಗಳನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ನಡೆದ 3 ಗಂಟೆಗಳ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ನಗರದ ಮಧ್ಯಭಾಗದಲ್ಲಿ ಹುಕ್ಕಾ ಬಾರ್ನಲ್ಲಿ ಗುಂಡಿನ ದಾಳಿ ನಡೆದಿದ್ದು, 8 ಜನರು ಸಾವನ್ನಪ್ಪಿದ್ದಾರೆ ಎಂದು ಪ್ರಾದೇಶಿಕ ಸಾರ್ವಜನಿಕ ಬ್ರಾಡ್ಕಾಸ್ಟರ್ ಹೆಸಿಸ್ಚೆರ್ ರುಂಡ್ಫಂಕ್ ತಿಳಿಸಿದ್ದಾರೆ.

ನೈರುತ್ಯ ಜರ್ಮನಿಯಲ್ಲಿರುವ ಹನೌನಗರ ಫ್ರಾಂಕ್ಫರ್ಟ್ನಿಂದ 20 ಕಿ.ಮೀ. ದೂರದಲ್ಲಿದೆ. ನಗರದಲ್ಲಿ ಒಂದು ಲಕ್ಷ ಜನಸಂಖ್ಯೆ ಇದೆ.

 

ದಯವಿಟ್ಟು ನಿಮ್ಮ ಹಣ ತೆಗೆದುಕೊಂಡುಬಿಡಿ : ವಿಜಯ್ ಮಲ್ಯ

Saturday, February 15th, 2020
Share

vijay

ಲಂಡನ್ : ವಿವಿಧ ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂ ಸಾಲದ ಬಾಕಿ ಉಳಿಸಿಕೊಂಡು ಬ್ರಿಟನ್ ದೇಶಕ್ಕೆ ಹೋಗಿ ನೆಲಸಿರುವ ವಿಜಯ್ ಮಲ್ಯ ಈಗ ಬ್ಯಾಂಕುಗಳಿಗೆ ಹಣ ವಾಪಸ್ ಕೊಡುವುದಾಗಿ ಮತ್ತೊಮ್ಮೆ ಹೇಳಿದ್ಧಾರೆ. ವಿಜಯ್ ಮಲ್ಯ ಈ ಹಿಂದೆಯೂ ತಾನು ಬ್ಯಾಂಕುಗಳ ಬಾಕಿ ಹಣ ಹಿಂದಿರುಗಿಸುತ್ತೇನೆ ಎಂದು ಕೆಲ ಬಾರಿ ಹೇಳಿದ್ದುಂಟು. ನಿನ್ನೆ ಅವರು ಬ್ರಿಟನ್ ಉಚ್ಚ ನ್ಯಾಯಾಲಯದ ಬಳಿ ಈ ವಿಚಾರವನ್ನು ಅರಿಕೆ ಮಾಡಿಕೊಂಡಿದ್ದಾರೆ. ಭಾರತಕ್ಕೆ ಹಸ್ತಾಂತರಿಸಬೇಡಿ ಎಂದು ಅವರು ಬ್ರಿಟಿಷ್ ಹೈಕರ್ಟ್ಗೆ ಮನವಿ ಮಾಡಿಕೊಂಡಿದ್ದರು. ಅವರ ಅರ್ಜಿಯ ವಿಚಾರಣೆ 3 ದಿನ ನಡೆಯಿತು. ವಿಚಾರಣೆಯ ಅಂತ್ಯದಲ್ಲಿ ವಿಜಯ್ ಮಲ್ಯ ಭಾರತೀಯ ಬ್ಯಾಂಕುಗಳಿಗೆ ತಾನು ನೀಡಬೇಕಾದ ಅಸಲು ಹಣವನ್ನು ಕೊಟ್ಟುಬಿಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

“ಬ್ಯಾಂಕುಗಳಿಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ದಯವಿಟ್ಟು ಈಗಲೇ ನಿಮ್ಮ ಎಲ್ಲಾ ಅಸಲಿ ಹಣವನ್ನು ತೆಗೆದುಕೊಂಡುಬಿಡಿ” ಎಂದು ನ್ಯಾಯಾಲಯದ ಹೊರಗೆ ಮನವಿ ಮಾಡಿಕೊಂಡಿದ್ದಾರೆ.

ಮದ್ಯದ ದೊರೆ ಹಾಗೂ ಕಿಂಗ್ಫಿಶರ್ ಏರ್ಲೈನ್ಸ್ನ ಮಾಜಿ ಮುಖ್ಯಸ್ಥ ವಿಜಯ್ ಮಲ್ಯ ಭಾರತದ ವಿವಿಧ ಬ್ಯಾಂಕುಗಳಿಂದ ಸಾಲ ಪಡೆದು ಮರುಪಾವತಿ ಮಾಡಿರಲಿಲ್ಲ. ಎಲ್ಲವೂ ಸೇರಿ ಒಟ್ಟು 9,000 ಕೋಟಿಯಷ್ಟು ಹಣ ಬಾಕಿ ಬರುವುದಿತ್ತು ಎಂಬ ಅಂದಾಜಿದೆ. ಬ್ಯಾಂಕುಗಳು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಮುಂದಾತ್ತಿದ್ದಂತೆಯೇ ವಿಜಯ್ ಮಲ್ಯ ಭಾರತ ಬಿಟ್ಟು ಬ್ರಿಟನ್ಗೆ ಬಂದರು. ಅವರ ವಿರುದ್ಧ ಭಾರತದಲ್ಲಿ ವಿವಿಧ ವಂಚನೆ ಪ್ರಕರಣಗಳು ದಾಖಲಾದವು. ಸಿಬಿಐ ಮತ್ತು ಇಡಿ ಸಂಸ್ಥೆಗಳು ಈ ಪ್ರಕರಣಗಳ ತನಿಖೆ ನಡೆಸುತ್ತಿವೆ. ಮಲ್ಯ ಅವರ ಆಸ್ತಿಗಳನ್ನ ಮುಟ್ಟುಗೋಲು ಹಾಕಿಕೊಂಡು ಅದನ್ನು ಹರಾಜು ಹಾಕಲು ಮುಂದಾಗಿವೆ.

ಮಲ್ಯ ಈ ಹಿಂದೆಯೂ ಬ್ಯಾಂಕುಗಳಿಂದ ತಾನು ಪಡೆದಿದ್ದ ಸಾಲದ ಅಸಲು ಹಣವನ್ನು ಹಿಂದಿರುಗಿಸುವುದಾಗಿ ಹೇಳಿದ್ದರು. ಆದರೂ ತನಿಖಾ ಸಂಸ್ಥೆಗಳು ಕಾನೂನು ಪ್ರಕಾರವಾಗಿಯೇ ಮುಂದುವರಿಯಲು ನಿರ್ಧರಿಸಿವೆ.

“ಬ್ಯಾಂಕುಗಳು ನೀಡಿದ ದೂರಿನ ಮೇರೆಗೆ ಜಾರಿ ನಿರ್ದೇಶನಾಲಯವು ನನ್ನ ಆಸ್ತಿಗಳನ್ನ ಮುಟ್ಟುಗೋಲು ಹಾಕಿಕೊಂಡಿದೆ. ಹಣ ಅವ್ಯವಹಾರದ ಪಿಎಂಎಲ್ ಕಾಯ್ದೆ ಅಡಿಯಲ್ಲಿ ನಾನು ಯಾವುದೇ ಅಪರಾಧ ಎಸಗಿಲ್ಲ. ಆದರೂ ನನ್ನ ಆಸ್ತಿಯನ್ನು ಇಡಿ ಅಟ್ಯಾಚ್ ಮಾಡಿಕೊಂಡಿದೆ” ಎಂದು ವಿಜಯ್ ಮಲ್ಯ ಬೇಸರ ವ್ಯಕ್ತಪಡಿಸಿದ್ದಾರೆ.

10 ರೂ.ಗೆ ಸಿಗುತ್ತೆ ಅನ್ನ, ಎರಡು ಚಪಾತಿ, ಸ್ವೀಟ್; ಶಿವ ಭೋಜನ ಯೋಜನೆಗೆ ಭಾರೀ ಮೆಚ್ಚುಗೆ“ನಿಮ್ಮ ಹಣ ತೆಗೆದುಕೊಳ್ಳಿ ಎಂದು ನಾನು ಬ್ಯಾಂಕುಗಳಿಗೆ ಹೇಳುತ್ತಿದ್ದೇನೆ. ಆದರೆ, ಜಾರಿ ನಿರ್ದೇಶನಾಲಯದವರು ಇದಕ್ಕೆ ಒಪ್ಪುತ್ತಿಲ್ಲ. ಈ ಆಸ್ತಿಗಳ ಮೇಲೆ ನಮಗೆ ಹಕ್ಕಿದೆ ಎನ್ನುತ್ತಿದ್ದಾರೆ. ಅದೇ ಆಸ್ತಿಗಳ ಮೇಲೆ ಇಡಿ ಮತ್ತು ಬ್ಯಾಂಕುಗಳು ಜಗಳ ಆಡುತ್ತಿವೆ” ಎಂದು ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತಕ್ಕೆ ವಾಪಸ್ ಹೋಗುವ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಮಲ್ಯ, “ನನ್ನ ಕುಟುಂಬ ಮತ್ತು ನನ್ನ ಹಿತಾಸಕ್ತಿ ಎಲ್ಲಿರುತ್ತೋ ನಾನು ಅಲ್ಲಿರಬೇಕಾಗುತ್ತದೆ. ಸಿಬಿಐ ಮತ್ತು ಇಡಿ ಪ್ರಾಮಾಣಿಕವಾಗಿದ್ದರೆ ಅದರ ಕಥೆ ಬೇರೆ. ಕಳೆದ ನಾಲ್ಕು ವರ್ಷದಲ್ಲಿ ಇವುಗಳು ನನಗೆ ಮಾಡುತ್ತಿರುವುದು ಪ್ರಾಮಾಣಿಕವಾಗಿಲ್ಲ” ಎಂದು ತಿಳಿಸಿದ್ದಾರೆ.

ಇನ್ನು, ಭಾರತಕ್ಕೆ ಹಸ್ತಾಂತರಗೊಳಿಸಬೇಡಿ ಎಂದು ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದ್ವಿಸದಸ್ಯ ಹೈಕೋರ್ಟ್ ಪೀಠವು ಮುಂದಿನ ದಿನಗಳಲ್ಲಿ ತೀರ್ಪು ನೀಡುವುದಾಗಿ ತಿಳಿಸಿದೆ.

 

ಮಾರಣಾಂತಿಕ ಕೊರೊನಾ ವೈರಸ್ ​ಗೆ ಹುಬೈ​ನಲ್ಲಿ ಒಂದೇ ದಿನ 242 ಸಾವು

Thursday, February 13th, 2020
Share

virus

ಬೀಜಿಂಗ್ : ಚೀನಾದಲ್ಲಿ ಮಾರಣಾಂತಿಕ ಕೊರೊನಾ ವೈರಸ್ ಭೀತಿ ಮುಂದುವರೆದಿದೆ. ಇಲ್ಲಿನ ಹುಬೈ ನಗರವೊಂದರಲ್ಲೇ ಬುಧವಾರ ಒಂದೇ ದಿನ 242 ಜನರು ಸಾವನ್ನಪ್ಪಿರುವುದು ಇನ್ನಷ್ಟು ಆತಂಕ ಸೃಷ್ಟಿಸಿದೆ. ಹಾಗೇ, ಸಾವಿನ ಭೀತಿ ಎದುರಿಸುತ್ತಿರುವ ಚೀನಾದಲ್ಲಿ 14,840 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಚೀನಾದಲ್ಲಿ ಒಟ್ಟು ಸಾವಿನ ಸಂಖ್ಯೆ 1,355ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ನಿಂದಾಗಿ ಚೀನಾದಲ್ಲಿ ಪ್ರತಿದಿನ ನೂರಾರು ಜನ ಸಾವಿಗೀಡಾಗುತ್ತಿದ್ದಾರೆ. ಚೀನಾದಲ್ಲಿ ಇದುವರೆಗೂ 60,000 ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಚೀನಾ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದರೂ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಪ್ರತಿನಿತ್ಯ ಸಾವಿನ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವುದರಿಂದ ಚೀನಾ ದೇಶಾದ್ಯಂತ ಸಾವಿನ ಆತಂಕ ಎದುರಾಗಿದೆ.

ಕೇವಲ ಚೀನಾ ಮಾತ್ರವಲ್ಲದೆ, 20 ಇತರೆ ದೇಶಗಳಲ್ಲೂ ಕೊರೊನಾ ವೈರಸ್ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಚೀನಾದಿಂದ ಬರುವ ಪ್ರಯಾಣಿಕರು ಮತ್ತು ಚೀನಾಗೆ ತೆರಳುವ ಪ್ರಯಾಣಿಕರ ಮೇಲೂ ನಿರ್ಬಂಧ ವಿಧಿಸಲಾಗಿದೆ. ಹಾಗಿದ್ದರೂ ಕೇರಳದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ದಾಖಲಾಗಿವೆ.

ಕಳೆದ ಬುಧವಾರ ಜಪಾನಿನ ಡೈಮಂಡ್ ಪ್ರಿನ್ಸೆಸ್ ಹಡಗಿನಲ್ಲಿ ಪ್ರಯಾಣಿಸುತ್ತಿದ್ದವರ ಪೈಕಿ 10 ಮಂದಿಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿತ್ತು. ಈಗ ಆ ಸಂಖ್ಯೆ ಏರಿಕೆಯಾಗಿದ್ದು, 174ಕ್ಕೂ ಅಧಿಕ ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. . ಈ ಹಡಗಿನಲ್ಲಿ 3700 ಪ್ರಯಾಣಿಕರಿದ್ದರು. ಆ ಹಡಗಿನಲ್ಲಿರುವ ಇಬ್ಬರು ಭಾರತೀಯರಿಗೆ ಕೂಡ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭಾರತೀಯರು ನೌಕೆಯಲ್ಲಿದ್ದರು. ನೌಕೆಯಲ್ಲಿ ಪ್ರಯಾಣಿಸುವವರಲ್ಲಿ ಮಾರಕ ಕೊರೊನಾ ವೈರಸ್ ತಗುಲಿರುವ ಬಗ್ಗೆ ಅನುಮಾನಗೊಂಡು ಅವರನ್ನೆಲ್ಲಾ ಪರೀಕ್ಷೆಗೆ ಒಳಪಡಿಸಲಾಗಿದೆ. ಫೆಬ್ರವರಿ 19ರವರೆಗೆ ಜಪಾನ್ ಅಧಿಕಾರಿಗಳು ನೌಕೆಯನ್ನು ನಿರ್ಬಂಧಿಸಿದ್ದಾರೆ ಎಂದು ರಾಯಭಾರ ಕಚೇರಿಯ ಹೇಳಿಕೆಯಲ್ಲಿ ತಿಳಿಸಿದೆ.

 

ತಾಲಿಬಾನ್ ಉಗ್ರ ಇಹ್ಸಾನುಲ್ಲಾ ಇಹ್ಸಾನ್ ಪಾಕ್ ಜೈಲಿನಿಂದ ಪರಾರಿ

Saturday, February 8th, 2020
Share

ugra

ಇಸ್ಲಾಮಾಬಾದ್ : 2012ರಲ್ಲಿ ಮಲಾಲಾ ಯುಸುಫ್ ಝೈ ಅವರ ಮೇಲೆ ಗುಂಡಿ ಹಾರಿಸಿದ್ದ ಮತ್ತು 2014ರಲ್ಲಿ ಪೇಶಾವರದ ಸೈನಿಕ ಶಾಲೆ ಮೇಲೆ ದಾಳಿ ನಡೆಸಿ 132 ವಿದ್ಯಾರ್ಥಿಗಳ ಸಾವಿಗೆ ಕಾರಣವಾಗಿದ್ದ ತಾಲಿಬಾನ್ ಉಗ್ರ ಇಹ್ಸಾನುಲ್ಲಾ ಇಹ್ಸಾನ್ ಪಾಕ್ ಜೈಲಿನಿಂದ ಪರಾರಿಯಾಗಿದ್ದಾನೆಂದು ವರದಿಗಳು ತಿಳಿಸಿವೆ.

ಜೈಲಿನಿಂದ ತಪ್ಪಿಸಿಕೊಂಡ ಬಳಿಕ ಉಗ್ರ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಈ ಆಡಿಯೋ ಕ್ಲಿಪ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ತಾನಿರುವ ಸ್ಥಳದ ಮಾಹಿತಿ ನೀಡದ ಉಗ್ರ, ದೇವರ ಸಹಾಯದಿಂದ ನಾನು ಭದ್ರತಾ ಪಡೆಗಳ ಬಂಧನದಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ತಾನು ಬಂಧನಕ್ಕೊಳಗಾಗಿದ್ದ ದಿನಗಳ ಕುರಿತು ಮತ್ತು ತನ್ನ ಮುಂದಿನ ಯೋಜನೆಗಳ ಬಗ್ಗೆ ವಿವರವಾಗಿ ಹೇಳಿಕೆ ನೀಡುವುದಾಗಿ ಆಡಿಯೋದಲ್ಲಿ ತಿಳಿಸಿದ್ದಾನೆ.

ಫೆಬ್ರವರಿ 5 2017ರಂದು ಒಪ್ಪಂದದ ಅಡಿಯಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳಿಗೆ ಶರಣಾಗಿದ್ದೆ. ಆದರೆ, ಶರಣಾಗತಿಗೆ ಮುಂದೆ ನೀಡಿದ್ದ ಮಾತನ್ನು ಉಳಿಸಿಕೊಳ್ಳುವಲ್ಲಿ ಭದ್ರತಾ ಪಡೆಗಳು ವಿಫಲವಾಗಿದೆ. ನಾನು ಸುಮಾರು 3 ವರ್ಷಗಳಿಂದಲೂ ಒಪ್ಪಂದವನ್ನು ಪಾಲಿಸಿದ್ದಾನೆ. ಆದರೆ, ಈ ಚಾಣಾಕ್ಷ ಭದ್ರತಾ ಸಂಸ್ಥೆಗಳು ನನ್ನೊಂದಿಗಿನ ಒಪ್ಪಂದವನ್ನು ಉಲ್ಲಂಘಿಸಿದ್ದೂ ಅಲ್ಲದೆ, ನನ್ನ ಮಕ್ಕಳೊಂದಿಗೆ ನನ್ನನ್ನು ಜೈಲಿನಲ್ಲಿ ಬಂಧಿಸಿತ್ತು. ಹೀಗಾಗಿಯೇ ನಾನು ಕೊನೆಗೆ ಜೈಲಿನಿಂದ ತಪ್ಪಿಸಿಕೊಳ್ಳಲು ನಿರ್ಧರಿಸಿದೆ. ಇದರಂತೆ ಜನವರಿ 11 ರಂದು ಜೈಲಿನಿಂದ ತಪ್ಪಿಸಿಕೊಂಡಿದ್ದೇನೆಂದು ತಿಳಿಸಿದ್ದಾನೆ.

ಉಗ್ರನ ಈ ಆಡಿಯೋ ಕುರಿತು ಪಾಕಿಸ್ತಾನ ಸೇನೆ ಅಥವಾ ಅಲ್ಲಿನ ಸರ್ಕಾರ ಯಾವುದೇ ಮಾಹಿತಿಗಳನ್ನೂ ನೀಡಿಲ್ಲ.