ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

Saturday, October 2nd, 2010
ಮಂಗಳೂರಿನಾದ್ಯಂತ ಗಾಂಧೀ ಜಯಂತಿ ಆಚರಣೆ

ಮಂಗಳೂರು : ಭಾರತ ಸೇವಾದಳದ  ಜಿಲ್ಲಾ ಸಮಿತಿ ವತಿಯಿಂದ  ಪುರಭವನದಲ್ಲಿ  ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಜ್ಯೋತಿ ವೃತ್ತದಿಂದ ಮೆರವಣಿಗೆಯಲ್ಲಿ ಬಂದ ವಿದ್ಯಾರ್ಥಿಗಳು ಹಾಗೂ ಗಣ್ಯರು ಪುರಭವನದ ಮುಂಭಾಗದ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮೂಲಕ ಗೌರವ ಸಲ್ಲಿಸಿದರು. ಸಂಸದ ನಳಿನ್ ಕುಮಾರ್ ಕಟೀಲು, ಡಿ.ಸಿ ಪೊನ್ನುರಾಜ್, ಪೊಲೀಸ ಕಮಿಷನರ್ ಸೀಮಂತ ಕುಮಾರ ಸಿಂಗ್, ದ.ಕ ಎಸ್.ಪಿ,  ಶಾಸಕ ಯುಟಿ ಖಾದರ್,   ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಸುಧಾಕರ ರಾವ್ ಪೇಜಾವರ್ ಮತ್ತಿತರರುಗಾಂಧೀ ಪ್ರತಿಮೆಗೆ ಹಾರಾರ್ಪಣೆ ಗೈದು […]

ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ತೀರ್ಪು ಸೆಪ್ಟೆಂಬರ್ 30 ಕ್ಕೆ

Tuesday, September 28th, 2010
ರಾಮ ಜನ್ಮಭೂಮಿ - ಬಾಬ್ರಿ ಮಸೀದಿ

ನವದೆಹಲಿ : ಅಯೋಧ್ಯೆಯ ರಾಮ ಜನ್ಮಭೂಮಿ – ಬಾಬ್ರಿ ಮಸೀದಿ ತೀರ್ಪು ಮುಂದೂಡಲು ರಮೇಶ್ ಚಂದ್ರ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ತ್ರಿಸದಸ್ಯ ವಿಶೇಷ ಪೀಠವು ಸೆಪ್ಟೆಂಬರ್ 30ರಂದು ಗುರುವಾರ ತನ್ನ ಮಹತ್ವದ ತೀರ್ಪನ್ನು ಪ್ರಕಟಿಸಲಿದೆ. ಸೆಪ್ಟೆಂಬರ್ 24ರಂದು ಅಲಹಾಬಾದ್ ಹೈಕೋರ್ಟ್ ಪ್ರಕಟಿಸಬೇಕಿದ್ದ ತೀರ್ಪಿನ ತಾತ್ಕಾಲಿಕ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತೆರವುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ, ಅಫ್ತಾಬ್ ಆಲಂ ಮತ್ತು ಕೆ.ಎಸ್. ರಾಧಾಕೃಷ್ಣನ್ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ […]

ವೈಶಾಲಿ ಕಾಸರವಳ್ಳಿ ಅಂತಿಮ ಯಾತ್ರೆ

Tuesday, September 28th, 2010
ವೈಶಾಲಿ ಕಾಸರವಳ್ಳಿ

ಬೆಂಗಳೂರು  : ಕನ್ನಡ ಚಿತ್ರರಂಗದಲ್ಲಿ ಬೆಳ್ಳಿ ಪರದೆ ಮತ್ತು  ಕಿರುತೆರೆ ಲೋಕಕ್ಕೆ ಅಪಾರ ಸೇವೆ ಸಲ್ಲಿಸಿದ ಹಿರಿಯ ನಟಿ  ವೈಶಾಲಿ ಕಾಸರವಳ್ಳಿ ಅವರ ಅಂತ್ಯಸಂಸ್ಕಾರ ಇಂದು ಸಂಜೆ ನಾಲ್ಕು ಗಂಟೆಗೆ ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ. ವೈಶಾಲಿ ಕಾಸರವಳ್ಳಿ ದೀರ್ಘ ಕಾಲದ ಅನಾರೋಗ್ಯದಿಂದ ಚೇತರಿಸದೆ ಸೋಮವಾರ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಬಹಳಷ್ಟು ಸಾಧನೆ ಮಾಡಿದ್ದ ವೈಶಾಲಿ ಕಾಸರವಳ್ಳಿ ನಿರ್ದೇಶಕಿ, ವಸ್ತ್ರವಿನ್ಯಾಸಕಿ ನಟಿಯೂ ಆಗಿದ್ದರು, ಪತಿ, ಖ್ಯಾತ ನಿರ್ದೇಶಕ ಗಿರೀಶ ಕಾಸರವಳ್ಳಿ, ಪುತ್ರಿ ಅನನ್ಯ ಹಾಗೂ ಪುತ್ರ ಅಪೂರ್ವ ಅವರನ್ನು ಅಗಲಿದ್ದಾರೆ. […]

ಮಂಗಳೂರಿನ ಬೀದಿಗಳಲ್ಲಿ ಮೈಸೂರು ದಸರಾ ಪ್ರಚಾರ

Monday, September 27th, 2010
ಮೈಸೂರು ದಸರಾ ಪ್ರಚಾರ

ಮಂಗಳೂರು: ಅಕ್ಟೋಬರ್ 8 ರಿಂದ ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ಐತಿಹಾಸಿಕ ಹಿನ್ನೆಲೆಯುಳ್ಳ ಮೈಸೂರು ದಸರಾದ ಪ್ರಚಾರ ಜಾಥಾವನ್ನು ಮಂಗಳೂರು  ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ ಚೆಂಡೆ ಬಡಿಯುವ ಮೂಲಕ ಉದ್ಘಾಟಿಸಿದರು. ಮೈಸೂರು ವಾರ್ತಾ ಇಲಾಖೆ ಹಾಗೂ ದಸರಾ ಮಹೋತ್ಸವದ ವಿಶೇಷ ಅಧಿಕಾರಿಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 1 ರವರೆಗೆ ಪ್ರಚಾರ ಜಾಥಾ ನಡೆಸಲಿದ್ದಾರೆ. ನಾಲ್ಕು ತಂಡಗಳಾದ ಚೈತನ್ಯ ಕಲಾತಂಡ, ಸ್ಪಂದನ ಮಹಿಳಾ ತಂಡ, ವಿವೇಕ ಕಲಾ ತಂಡ […]

`ವಿದ್ಯಾರ್ಥಿ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ’ ಕಾರ್ಯಗಾರ

Monday, September 27th, 2010
ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಕರ ಪಾತ್ರ ಕಾರ್ಯಗಾರ

ಮಂಗಳೂರು: ರಾಮಕೃಷ್ಣ ಮಠದ, ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಸೆಪ್ಟಂಬರ್ 27 ರಿಂದ 28 ರ ವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಯುವ ಶಿಕ್ಷಕರ ಕಾರ್ಯಗಾರವನ್ನು ಡಾ. ವಿಶ್ವನಾಥ್ ಉದ್ಘಾಟಿಸಿದರು. ಉದ್ಘಾಟನಾ ಬಳಿಕ ಮಾತನಾಡಿದ ಅವರು ದೇಶದ ಪ್ರಗತಿ ಆಗಬೇಕಿರುವುದು ಶಿಕ್ಷಕರಿಂದಲೇ ಅದಕ್ಕಾಗಿ ಇಂದಿನಿಂದಲೇ ತಯಾರಿ ಹೊಂದಬೇಕು. ಕೇವಲ ಮಾತೃ ಭಾಷೆಯಲ್ಲಿ ಮಾತ್ರ ಪಾಂಡಿತ್ಯ ಹೊಂದದೆ ಇತರ ಭಾಷೆಗಳಲ್ಲಿಯೂ ಹಿಡಿತವನ್ನು ಹೊಂದಿ ಯಾವುದೇ ಸನ್ನಿವೇಶಗಳನ್ನು ಎದುರಿಸುವ ಮನೋಭಾವ ಹೊಂದಿರಬೇಕು ಎಂದು ಅವರು ಹೇಳಿದರು. ಸ್ವಾಮಿ ಜಿತಕಾಮಾನಂದಜೀಯವರು `ಉತ್ತಮ […]

ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

Monday, September 27th, 2010
ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್  ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]

ಪತ್ರಿಕಾ ಮಾರಟಕ್ಕೆ ಅಡ್ಡಿ ಪಡಿಸಿ ಅಂಗಡಿ ಜಖಂಗೊಳಿಸಿದ ದುಷ್ಕರ್ಮಿಗಳು

Monday, September 27th, 2010
Paper stall

ಮಂಗಳೂರು :  ನಗರದ ಮಿಲಾಗ್ರಿಸ್ ಬಳಿ ಟೆಲಿಫೋನ್ ಬೂತ್ ಹಾಗೂ ಪೇಪರ್ ಸ್ಟಾಲ್ ಹೊಂದಿರುವ ಸಾಮಾಜಿಕ ಕಾರ್ಯಕರ್ತ ಮೆಲ್ವಿಲ್ ಪಿಂಟೋ ಎಂಬವರ ಅಂಗಡಿಗೆ ಭಾನುವಾರ ಸಂಜೆ ಆಗಮಿಸಿದ ದುಷ್ಕರ್ಮಿಗಳು ‘ಕರಾವಳಿ ಅಲೆ’ ಮಾರಾಟ ಮಾಡಬಾರದು ಎಂದು ಬೆದರಿಸಿ ಕಾಯಿನ್ ಬಾಕ್ಸ್ ಮತ್ತು ಕಪಾಟಿಗೆ ಹಾನಿ ಮಾಡಿ ‘ಕರಾವಳಿ ಅಲೆ’ಯ ಪ್ರತಿಗಳನ್ನು ಹರಿದು ಹಾಕಿರುವ ಘಟನೆ ನಡೆದಿದೆ. ಬೈಕ್‌ನಲ್ಲಿ ಮೂರು ಮಂದಿ ಬಂದಿದ್ದು ಒಬ್ಬಾತನ ಬಳಿ ಮಾರಕಾಯುಧ ಇತ್ತು ಎಂದು ಮೆಲ್ವಿಲ್ ಪಿಂಟೊ ತಿಳಿಸಿದ್ದಾರೆ. ಬಳಿಕ ಕಂಕನಾಡಿ ಆಸುಪಾಸಿನ […]

ಪಾಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಕಿಂಡಿ ಅಣೆಕಟ್ಟು ಮತ್ತು ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಬೇಕು : ಭಟ್

Saturday, September 25th, 2010
yogish Bhat

ಮಂಗಳೂರು : ಪಶ್ವಿಮವಾಹಿನಿ ಯೋಜನೆ ಕರಾವಳಿ ಜಿಲ್ಲೆಗಳಲ್ಲಿ ಹರಿಯುತ್ತಿರುವ 13 ನದಿಗಳಿಂದ ಸಮುದ್ರಕ್ಕೆ ಸುಮಾರು 2000 ಟಿ.ಎಂ.ಸಿ ಯಷ್ಟು ನೀರು ಪೋಲಾಗುವುದನ್ನು ತಪ್ಪಿಸಿ ಸದ್ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತಹ ಯೋಜನೆಗಾಗಿ 2010-11 ನೇ ಸಾಲಿನ ಅಯವ್ಯಯದಲ್ಲಿ ಅನುಷ್ಠಾನಗೊಳಿಸುಲು ಕೇಂದ್ರ ಸರಕಾರಕ್ಕೆ ವಿಶೇಷ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಮಂಗಳೂರು ಶಾಸಕ ಯೊಗೀಶ್ ಭಟ್ ಇಂದು ನರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರಿಗೆ ತಿಳಿಸಿದರು. ಕರಾವಳಿ ಜಿಲ್ಲೆಗಳಲ್ಲಿ ಪಶ್ಚಿಮಾಭಿಮುಖವಾಗಿ ಹರಿಯುವ ನದಿಗಳಿಗೆ ಅಡ್ಡಲಾಗಿ ಅಲ್ಲಲ್ಲಿ ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ನೀರಾವರಿ ಸೌಲಭ್ಯವನ್ನು […]

ತಣ್ಣೀರು ಬಾವಿ ಬೀಚ್ ನಲ್ಲಿ ‘ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ’

Saturday, September 25th, 2010
ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ

ಮಂಗಳೂರು : ಕರಾವಳಿ ಕಾವಲು ಪೊಲೀಸ್ ಠಾಣೆ ಮತ್ತು ಕೋಸ್ಟ್ ಗಾರ್ಡ್ ಮಂಗಳೂರುರವರು ಜಂಟಿಯಾಗಿ ತಣ್ಣೀರು ಬಾವಿ ಬೀಚ್ ನಲ್ಲಿ ‘ಅಂತರರಾಷ್ಟ್ರೀಯ ಬೀಚ್ ಕ್ಲೀನ್ ಡೇ’ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದ ಅದ್ಯಕ್ಷತೆಯನ್ನು ಶ್ರೀ. ಎಸ್.ಸಿ ಪಟ್ನಾಯಕ್, ಕಮಾಂಡೆಂಟ್, ಕೋಸ್ಟ್ ಗಾರ್ಡ್ ರವರು ವಹಿಸಿದ್ದು, ಹಾಗೂ ಶ್ರೀ ಅರುಣ್ ಕುಮಾರ್, ಕಮಾಂಡೆಂಟ್, ಕೋಸ್ಟ್ ಗಾರ್ಡ್, ಶ್ರೀ ಅಮಾನುಲ್ಲಾ. ಎ, ಪೊಲೀಸ್ ಉಪನಿರೀಕ್ಷಕರು, ಶ್ರೀ ಶ್ರೀಧರ್.ಎಸ್.ಆರ್, ಪೊಲೀಸ್ ಉಪನಿರೀಕ್ಷಕರು, ಹಾಗೂ ಠಾಣೆಯ ಎಲ್ಲಾ ಸಿಬ್ಬಂದಿಗಳು ಮತ್ತು ಕೋಸ್ಟ್ ಗಾರ್ಡ್ […]

ಅನಿರೀಕ್ಷಿತ ಮಳೆಗೆ ಜಿಲ್ಲೆಯಲ್ಲಿ ಮನೆಕುಸಿತ, ವಿದ್ಯುತ್ ವತ್ಯಯ

Saturday, September 25th, 2010
ಅತ್ತಾವರದಲ್ಲಿ ಮಳೆಗೆ ಕುಸಿದ ಮನೆ

ಮಂಗಳೂರು : ಮುಂಗಾರು ಮಳೆ ಕಡಿಮೆಯಾಗಿ ಜನರು ಸ್ವಲ್ಪ ಮಟ್ಟಿಗೆ ಓಡಾಟ ಅರಂಭಿಸುತ್ತಿರುವಾಗಲೇ ಮತ್ತೆ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಪಾರ ನಷ್ಟ, ಹಾನಿ ಸಂಭವಿಸಿದೆ. ಮಂಗಳೂರಿನ ಪಾಂಡೇಶ್ವರದಲ್ಲಿ ರುಕ್ಮಯ ಎಂಬವರ ಮನೆ, ಪಂಪ್ವೆಲ್ ಸಮೀಪ ಒಂದು ಮನೆ ಅರ್ಧದಷ್ಟು ಕುಸಿದಿದೆ, ಬೆಂದೂರುವೆಲ್ ಸಮೀಪ ಆವರಣಗೋಡೆಯೊಂದು ಕುಸಿದು ಬಿದ್ದಿದೆ.  ಅತ್ತಾವರ ಕೆಎಂಸಿ ಆಸ್ಪತ್ರೆ ಎದುರಿನಲ್ಲಿ ಹಳೆಯ ಹಂಚಿನ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಸುರತ್ಕಲ್  ಪರಿಸರದಲ್ಲಿ ಹಾನಿಯಾದ ಪ್ರದೇಶಗಳಿಗೆ […]