ದಕ್ಷಿಣ ಕನ್ನಡ : 300 ಕೋ.ರೂಪಾಯಿ ಅಧಿಕ ನಷ್ಟ ಸಂಭವಿಸಿದೆ
Wednesday, August 14th, 2019ಮಂಗಳೂರು : ಹಲವು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ 300 ಕೋ.ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ. ಇದು ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಅಧಿಕ ಎನ್ನಲಾಗಿದೆ. ಬೆಳ್ತಂಗಡಿ-ಬಂಟ್ವಾಳದಲ್ಲಿ ನಷ್ಟದ ಪ್ರಮಾಣ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ. ಸದ್ಯ ಜಿಲ್ಲಾಡಳಿತವು ವಿವಿಧ ಇಲಾಖೆಗಳಿಂದ ನಷ್ಟದ ವರದಿ ಸಿದ್ಧಪಡಿಸುತ್ತಿದೆ. ಅದರ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು 275 ಕೋ.ರೂ.ಗಳಷ್ಟು (ಕೃಷಿನಾಶ ಬಿಟ್ಟು) ನಷ್ಟ ಸಂಭವಿಸಿದೆ. ಅಂತಿಮ ನಷ್ಟದ ಅಂದಾಜು ಇನ್ನಷ್ಟೇ ಸಿಗಬೇಕಿದೆ. ಕಳೆದ ವರ್ಷ ಮಳೆಗೆ 238 […]