ಮಲೇರಿಯಾ ಉತ್ಪತ್ತಿ ತಾಣಗಳಿಗೆ ಮಹಾನಗರ ಪಾಲಿಕೆಯ ವತಿಯಿಂದ ದಾಳಿ

Wednesday, July 5th, 2017
Malaria

ಮಂಗಳೂರು : ಮಹಾನಗರ ಪಾಲಿಕೆಯ ವತಿಯಿಂದ ಈಗಾಗಲೇ ಗುರುತಿಸಲಾಗಿರುವ ಮಲೇರಿಯಾ ಉತ್ಪತ್ತಿ ತಾಣಗಳಿಗೆ ದಾಳಿ ನಡೆಸಿ ದಂಡ ವಿಧಿಸುವುದು ಹಾಗೂ ಕಟ್ಟಡ ಪರವಾನಿಗೆ ರದ್ದು ಪಡಿಸುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಮೇಯರ್ ಕವಿತಾ ಸನಿಲ್ ಎಚ್ಚರಿಸಿದ್ದಾರೆ. ಪತ್ರಿಕಾ ಘೋಷ್ಟಿಯಲ್ಲಿ ಮಾತನಾಡಿದ ಮೇಯರ್ ಮಲೇರಿಯಾ ಹಾಗೂ ಡೆಂಗ್ಯೂ ನಂತಹ ಸಾಂಕ್ರಾಮಿಕ ರೋಗಗಳಿಂದ ಮಂಗಳೂರು ಮಹಾನಗರ ಪಾಲಿಕೆಯ ಜನರನ್ನು ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ ಎಂದು ಅವರು ಹೇಳಿದ್ದಾರೆ . ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಮಲೇರಿಯಾ ರೋಗ ಪ್ರಕರಣಗಳಲ್ಲಿ ಇಳಿಕೆ […]

ರಸ್ತೆ ಅಗಲೀಕರಣಕ್ಕಾಗಿ ಮನೆ ಕಳಕೊಂಡವರಿಗೆ ಪಾಲಿಕೆ ವತಿಯಿಂದ ಮನೆ ಹಸ್ತಾಂತರ

Wednesday, July 5th, 2017
Mcc House

ಮಂಗಳೂರು: ಸೂರ್ಯನಾರಾಯಣ ದೇವಸ್ಥಾನದ 37 ನೇ ವಾರ್ಡ್ ನಲ್ಲಿ ರಸ್ತೆ ಅಗಲೀಕರಣ ಸಂದರ್ಭದಲ್ಲಿ ಮನೆ ಸ್ಥಳಾಂತರಗೊಂಡ ಹಿನ್ನೆಲೆಯಲ್ಲಿ ಪರ್ಯಾಯವಾಗಿ ಮನೆಯನ್ನು ನಿರ್ಮಿಸಿ ಮಂಗಳೂರು ಮಹಾನಗರ ಪಾಲಿಕೆ ಹಸ್ತಾಂತರಿಸಿತು. ಶಾಸಕ ಜೆ.ಆರ್.ಲೋಬೊ ಅವರ ವಿಶೇಷ ಶಿಫಾರಸು ಮೇರೆಗೆ ಕಲ್ಯಾಣಿ ಅವರಿಗೆ 17 ಲಕ್ಷ ರೂಪಾಯಿ ವೆಚ್ಚದಲ್ಲಿ ನಗರಪಾಲಿಕೆ ಮನೆ ನಿರ್ಮಿಸಿ ಕೊಟ್ಟಿತು. ನೂತನ ಮನೆಯ ಕೀಲಿ ಕೈಯನ್ನು ಕಲ್ಯಾಣಿ ಅವರಿಗೆ ಶಾಸಕ ಜೆ.ಆರ್.ಲೋಬೊ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್, ನಗರಪಾಲಿಕೆ […]

ಬಿ.ಸಿ.ರೋಡ್ : ಹೆಲ್ಮೇಟ್ ಧರಿಸಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಲಾಂಡ್ರಿ ಮಾಲಕನಿಗೆ ಚೂರಿ ಇರಿತ

Wednesday, July 5th, 2017
Hindu Youth

ಬಿ.ಸಿ.ರೋಡ್ : ದುಷ್ಕರ್ಮಿಗಳ ತಂಡವೊಂದು ಬೈಕ್‌ನಲ್ಲಿ ಬಂದು ಯುವಕನೋರ್ವನಿಗೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಿ.ಸಿ.ರೋಡಿನಲ್ಲಿ ಮಂಗಳವಾರ ರಾತ್ರಿ 10 ಗಂಟೆಯ ಸುಮಾರಿಗೆ ನಡೆದಿದೆ. ಸಜಿಪ ಮುನ್ನೂರು ಗ್ರಾಮದ ಕಂದೂರು ನಿವಾಸಿ ತನಿಯಪ್ಪ ಎಂಬವರ ಪುತ್ರ ಶರತ್ (30) ದಾಳಿಯಿಂದ ಗಂಭೀರ ಗಾಯಗೊಂಡಿರುವ ಯುವಕ ಎಂದು ಗುರುತಿಸಲಾಗಿದೆ. ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿ.ಸಿ.ರೋಡಿ ನ ಉದಯ ಲಾಂಡ್ರಿ ಮಾಲಕ ಶರತ್ ಅಂಗಡಿಯಿಂದ ಹೊರಬರುತ್ತಿದ್ದ […]

ಕೆಲಸಕ್ಕಿದ್ದ ಮನೆಯಿಂದ ಎಟಿಎಂ ಕದ್ದು 3.59 ಲಕ್ಷ ಎಗರಿಸಿದ್ದ ದಂಪತಿ ಅರೆಸ್ಟ್‌‌‌

Tuesday, July 4th, 2017
Fathima Selvam

ಮಂಗಳೂರು : ಫಳ್ನೀರ್ ರಸ್ತೆಯ ಮನೆಯೊಂದರಲ್ಲಿ  ಕೆಲಸಕ್ಕಿದ್ದ  ತಮಿಳು ಮೂಲದ ಗಂಡ ಹೆಂಡತಿ ಎಟಿಎಂ ಹಾಗೂ ಪಾಸ್‌ವರ್ಡ್‌ ಬರೆದಿಟ್ಟಿದ್ದ ಡೈರಿ ಕದ್ದು ಸುಮಾರು 3.59 ಲಕ್ಷ ನಗದು ಡ್ರಾ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ ದಂಪತಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ವೆಲ್ಲೂರಿನ ಫಾತಿಮಾ (28) ಹಾಗೂ ಆಕೆಯ ಪತಿ ಸೆಲ್ವಂ (31) ಎಂದು ಗುರುತಿಸಲಾಗಿದೆ. ಬಂಧಿತರಿಂದ 2.20 ಲಕ್ಷ ನಗದು ಹಾಗೂ ಡ್ರಾ ಮಾಡಿದ ಹಣದಿಂದ ಖರೀದಿಸಿದ 20 ಗ್ರಾಂ ತೂಕದ ಚಿನ್ನದ ಸರವನ್ನು ವಶಕ್ಕೆ […]

ನೀಟ್: ಆಳ್ವಾಸ್ ಕಾಲೇಜಿನಿಂದ ಅತ್ಯುತ್ತಮ ಸಾಧನೆ  ಶೇ.93.70 ಫಲಿತಾಂಶ

Monday, July 3rd, 2017
Mohan Alva

ಮೂಡುಬಿದಿರೆ: ರಾಷ್ಟ್ರೀಯ ಮಟ್ಟದಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನಿಂದ 3241 ಮಂದಿ ಪರೀಕ್ಷೆ ಬರೆದಿದ್ದು, 3037 ಮಂದಿ ತೇರ್ಗಡೆಯಾಗಿ ಶೇ.93.70 ಫಲಿತಾಂಶ ಲಭಿಸಿದೆ. ರಾಜ್ಯಮಟ್ಟದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಾತಿ ಸೀಟು ಹಂಚಿಕೆಯಲ್ಲಿ ಸಾಮಾನ್ಯವರ್ಗ, ಎಸ್‍ಸಿ, ಎಸ್‍ಟಿ, ಒಬಿಸಿ, ಹೈದರಾಬಾದ್ ಕರ್ನಾಟಕ ಹಾಗೂ ಕನ್ನಡ ಮಾಧ್ಯಮ ಕೋಟಾದಡಿಯಲ್ಲಿ ಆಳ್ವಾಸ್‍ನ 500 ಮಂದಿ ವಿದ್ಯಾರ್ಥಿಗಳಿಗೆ ಪ್ರವೇಶ ಸಿಗುವುದು ಖಚಿತವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿ ತಿಳಿಸಿದ್ದಾರೆ. ನೀಟ್ […]

ನಗರದಲ್ಲಿ ಜುಲೈ 7 ರಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Monday, July 3rd, 2017
Rai

ಮಂಗಳೂರು : ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಜುಲೈ 7 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಬಲವರ್ಧನೆ ಮಾಡಬೇಕು ಎಂಬ ಉದ್ದೇಶದಿಂದ ಜು.7ರಂದು ಅಪರಾಹ್ನ 3 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿರುವ ಈ ಸಮಾವೇಶದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸುವರು ಎಂದವರು ಹೇಳಿದ್ದಾರೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, […]

ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ಇರುವ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಿ

Monday, July 3rd, 2017
Raita Sangha

ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ರಾಜ್ಯ ರೈತ ಸಂಘದ ಸತತ ಹೋರಾಟದ ಫಲವಾಗಿ ಸರಕಾರವು ರೈತರ ಬೆಲೆ ಸಾಲದಲ್ಲಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು […]

ಭರವಸೆ ಮುರಿದ ಶಾಸಕ ಮೊಯ್ದಿನ್ ಬಾವಾ ಮನೆಗೆ ಡಿವೈಎಫ್‌ಐ ವತಿಯಿಂದ “ಶಾಸಕರ ಮನೆಗೆ ಚಲೋ”

Monday, July 3rd, 2017
dyfi

ಮಂಗಳೂರು : ದ.ಕ. ಜಿಲ್ಲಾ ಡಿವೈಎಫ್‌ಐ  ವತಿಯಿಂದ ದ.ಕ.ಜಿಲ್ಲಾಧಿಕಾರಿ ಕಚೇರಿ ಎದುರಲ್ಲಿ  ಪಂಜಿಮೊಗರು ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ನೇಮಿಸಲ್ಪಟ್ಟ ‘ಸಿಐಡಿ’ ಬದಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿತು. ಪಂಜಿಮೊಗರು ಬಳಿ ತಾಯಿ ರಝಿಯಾ ಮತ್ತು ಮಗಳು ಫಾತಿಮಾ ಝುವಾ ಎಂಬವರನ್ನು 2011ರ ಜೂ.28ರಂದು ಈ ಕೊಲೆ ಮಾಡಲಾಗಿತ್ತು. ಪ್ರಕರಣ ನಡೆದು  5 ವರ್ಷವಾದರೂ ನೈಜ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಐದು ವರ್ಷದಿಂದ  ಡಿವೈಎಫ್‌ಐ ಸಾಕಷ್ಟು ಹೋರಾಟ […]

ಮಂಗಳೂರು ಪ್ರೆಸ್‌‌ ಕ್ಲಬ್‌‌ನಲ್ಲಿ ಪತ್ರಿಕಾ ದಿನಾಚರಣೆ

Saturday, July 1st, 2017
patrika dinacharane

ಮಂಗಳೂರು : ಮಂಗಳೂರಿನ ವರದಿಗಾರರು ರಾಜಧಾನಿಯ ವರದಿಗಾರರಿಗಿಂತ ಯಾವುದರಲ್ಲೂ ಕಡಿಮೆಯಿಲ್ಲ. ಇಲ್ಲಿನವರು ವಿಭಿನ್ನವಾಗಿ ಯೋಚಿಸುವ ಕೌಶಲ್ಯ ಹೊಂದಿದ್ದಾರೆ ಎಂದು ಬೆಂಗಳೂರು ಪ್ರೆಸ್‌‌ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮಂಗಳೂರು ಪ್ರೆಸ್‌‌ ಕ್ಲಬ್‌‌ನಲ್ಲಿ ಇಂದು ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವರದಿಗಾರರ ಬರಹ ಜನರ ಬದುಕಲ್ಲಿ ಪರಾರಿಣಾಮ ಬೀರುವಂತಿರಬೇಕು. ಸುದ್ದಿಯ ಸತ್ಯಾಸತ್ಯತೆಯನ್ನು ಅರಿತು ಜನರಿಗೆ ಅರ್ಥೈಸುವ ಕೆಲಸವವನ್ನು ವರದಿಗಾರರು ಮಾಡಬೇಕು ಎಂದು ಸಲಹೆ ನೀಡಿದರು. ಮಾಧ್ಯಮಗಳ ಹೊಸ ಆಯಾಮಗಳ ಬಗ್ಗೆ […]

ಅಶ್ರಫ್ ಕಲಾಯಿ ಕೊಲೆ‌ ಪ್ರಕರಣದ ಪ್ರಮುಖ ಆರೋಪಿ ಬಂಧನ

Saturday, July 1st, 2017
Bharath Kumdel

ಮಂಗಳೂರು:  ಬೆಂಜನಪದವು ಎಂಬಲ್ಲಿ  ಎಸ್‌‌‌ಡಿಪಿಐ ಮುಖಂಡ‌ ಅಶ್ರಫ್ ಕಲಾಯಿ ಕೊಲೆ‌ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಭರತ್ ಕುಮ್ಡೇಲ್ನನ್ನು  ಪೊಲೀಸರು ಬಂಧಿಸಿದ್ದಾರೆ. ಭಜರಂಗದಳ ಪುತ್ತೂರು ವಿಭಾಗದ ಸಹಸಂಚಾಲಕ ಭರತ್ ಕುಮ್ಡೇಲ್ ಕಲಾಯಿ ಕೊಲೆ‌ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿದ್ದು ಇದುವರೆಗೆ ಬಂಧನ ವಾಗಿರಲಿಲ್ಲ. ಈ ಪ್ರಕರಣದಲ್ಲಿ ಒಟ್ಟು  ಆರು ಜನ ಆರೋಪಿಗಳನ್ನು ಬಂಧನವಾಗಿತ್ತು. ಇದೀಗ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲ್‌ನ ಬಂಧನವಾಗಿದೆ. ಜೂನ್ 21ರಂದು ದ.ಕ ಜಿಲ್ಲೆಯ ಬೆಂಜನಪದವುನಲ್ಲಿ ಅಶ್ರಫ್ ಕೊಲೆ ನಡೆದಿತ್ತು.