ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಫೋನ್, ಗಾಂಜಾ ಪತ್ತೆ

Wednesday, May 18th, 2011
ಮಂಗಳೂರು ಜಿಲ್ಲಾ ಕಾರಾಗೃಹ

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳು ಅಕ್ರಮ ವ್ಯವಹಾರ ಹಾಗೂ  ಕ್ರಿಮಿನಲ್ ಚಟುವಟಿಕೆ ಗಳಲ್ಲಿ ತೊಡಗಿದ್ದಾರೆ ಎಂಬ ದೂರಿನ ಅನ್ವಯ ಎಸಿಪಿ ರವೀಂದ್ರ ಗಡಾದಿ ಅವರ ನೇತ್ರತ್ವದಲ್ಲಿ ಇಂದು ಮಧ್ಯಾಹ್ನ ಅನಿರೀಕ್ಷಿತ ದಾಳಿ ನಡೆಸಿದ ಪೊಲೀಸರು ಜೈಲಿನಲ್ಲಿದ್ದ ಖೈದಿಗಳಿಂದ ಸಿಮ್ ಕಾರ್ಡ್, ಎರಡು ಮೊಬೈಲ್ ಫೋನ್ ಹಾಗೂ ಎರಡು ಪ್ಯಾಕೇಟ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಖೈದಿಗಳಿಗೆ ಗಾಂಜಾ ಹಾಗೂ ಮೊಬೈಲ್ ಫೋನ್ ಸಿಗುವಲ್ಲಿ ಜೈಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗಿಯಾಗಿರುವ ಬಗ್ಗೆ ಸಂಶಯವಿದ್ದು ತನಿಖೆಯಿಂದ ತಿಳಿದು ಬರಬೇಕಿದೆ. […]

ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ರೈತಸಂಘಟನೆಗಳ ಪ್ರತಿಭಟನೆ

Tuesday, May 17th, 2011
ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ರೈತಸಂಘಟನೆಗಳ ಪ್ರತಿಭಟನೆ

ಮಂಗಳೂರು : ಭಾರತೀಯ ಕಿಸಾನ್ ಸಂಘ ಮತ್ತು ದ.ಕ ಜಿಲ್ಲಾ ಸಾವಯವ ಕೃಷಿ ಪರಿವಾರ ಇವರ ಜಂಟಿ ಆಶ್ರಯದಲ್ಲಿ ದಿನಾಂಕ ಇಂದು ಬೆಳಿಗ್ಗೆ 11-00 ರಿಂದ ಜಿಲ್ಲಾಧಿಕಾರಿ ಕಛೇರಿ ಎದುರುಗಡೆ ಎಂಡೋಸಲ್ಫಾನ್ ನಿಷೇಧ ಕೂಡಲೇ ಜಾರಿಗೆ ಆಗ್ರಹಿಸಿ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಾವಯವ ಕೃಷಿಕ ಸುಂದರ್ ರಾವ್ ಅವರು ಎಂಡೋಸಲ್ಫಾನ್ ಎಂಬ ಮಹಾಮಾರಿ ಕೀಟ ನಾಶಕವು ಸಂಪೂರ್ಣ ಜೀವ ಜಗತ್ತಿಗೇ ಮಾರಕವಾಗಿರುವುದು  ಇಂದು ಗುಟ್ಟಾಗಿ ಉಳಿದಿಲ್ಲ. ಜಗತ್ತಿನ 84 ದೇಶಗಳು ಈ ಮಾರಕ […]

ಚೆನ್ನಪ್ಪಗೌಡ ಮಂಗಳೂರು ಡಿ.ಸಿಯಾಗಿ ಅಧಿಕಾರ ಸ್ವೀಕಾರ

Monday, May 16th, 2011
ಚೆನ್ನಪ್ಪಗೌಡ ಮಂಗಳೂರು ಡಿ.ಸಿಯಾಗಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ನೂತನ ಡಿ.ಸಿ ಯಾಗಿ ಚೆನ್ನಪ್ಪಗೌಡ ಇಂದು ಪ್ರಭಾರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮರಿಂದ ಅಧಿಕಾರ ವಹಿಸಿಕೊಂಡರು. 1982ರಲ್ಲಿ ಭಾರತ ಸೇವಾ ಆಯೋಗದಿಂದ ಅಧಿಕಾರ ವಹಿಸಿ ಮೊದಲ ಬಾರಿಗೆ ಭದಾವತಿಯಲ್ಲಿ ಮುನಿಸಿಪಲ್ ಕಮಿಷನರಾಗಿ ನೇಮಕಗೊಂಡು ನಂತರ ಬೆಂಗಳೂರು, ತುಮಕೂರಿನಲ್ಲಿ ಕಮಿಷನರ್ ಆಗಿ, ಮೈಸೂರು ಜಿಲ್ಲಾ ಪಂಚಾಯತ್ನಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ, ರಾಮನಗರದಲ್ಲಿ ವಿಶೇಷ ಅಧಿಕಾರಿಯಾಗಿ ಮಂಗಳೂರಿನಲ್ಲಿ ಮೂಡ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದಾರೆ. ಮೈಸೂರು, ಉತ್ತರ ಕನ್ನಡ, ರಾಮನಗರ ಹಾಗೂ ಚಿಕ್ಕಮಗಳೂರುಗಳಲ್ಲಿ ಜಿಲ್ಲಾಧಿಕಾರಿ ಸೇವೆ ಸಲ್ಲಿಸಿ […]

ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾ ವರ್ಗಾವಣೆ

Saturday, May 14th, 2011
ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾ

ಮಂಗಳೂರು : ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌  ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾರನ್ನು ಬೆಂಗಳೂರಿಗೆ ಹಾಗೂ ಪ್ರಸ್ತುತ ಚಿಕ್ಕಮಗಳೂರಿನ ಚೆನ್ನಪ್ಪ ಗೌಡರನ್ನು ಮಂಗಳೂರಿನ ಜಿಲ್ಲಾಧಿಕಾರಿಯಾಗಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಡಾ| ಎಂ.ಟಿ. ರೇಜು ಅವರನ್ನು ಉಡುಪಿ ಜಿಲ್ಲಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ. ದ.ಕ. ಜಿಲ್ಲಾಧಿಕಾರಿಯಾಗಿ 2010, ಅ.23 ರಂದು ಸುಬೋಧ್ ಯಾದವ್ ಅಧಿಕಾರ ಸ್ವೀಕರಿಸಿದ್ದರು.  ಕೇವಲ ಏಳು ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಗೊಂಡಿದ್ದಾರೆ. ಸರಕಾರಿ ಭೂಮಿ ಒತ್ತುವರಿ ಮಾಡುವವರ ವಿರುದ್ಧ […]

ದ.ಕ ಜಿಲ್ಲಾ ಬಿಜೆಪಿ ವತಿಯಿಂದ ಉಪಚುನಾವಣೆಯ ಗೆಲುವಿಗೆ ವಿಜಯೋತ್ಸವ

Friday, May 13th, 2011
ದ.ಕ ಜಿಲ್ಲಾ ಬಿಜೆಪಿ ವಿಜಯೋತ್ಸವ

ಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಇಂದು ಬೆಳಿಗ್ಗೆ ಚನ್ನಪಟ್ಟಣ, ಜಗಳೂರು, ಬಂಗಾರಪೇಟೆಯಲ್ಲಿ ಬಿ.ಜೆ.ಪಿ ಅಭ್ಯರ್ಥಿಗಳು ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ವಿಜಯೋತ್ಸವ ಆಚರಿಸಿತು. ಜಿಲ್ಲಾ ಬಿಜೆಪಿಯ ನಗರಾಧ್ಯಕ್ಷ ಶ್ರೀಕರ ಪ್ರಭು ಕಾರ್ಯಕರ್ತರಿಗೆ ಹಾಗೂ ಮನಪಾ ಮೇಯರ್ ಪ್ರವೀಣ್ ಅಂಚನ್ರಿಗೆ ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಬಳಿಕ ಕಾರ್ಯಕರ್ತರು ಬಿಜೆಪಿ ಪತಾಕೆಗಳನ್ನು ಹಿಡಿದು ನವಭಾರತ ಸರ್ಕಲ್ ವರೆಗೆ ವಿಜಯೋತ್ಸವ ಜಾಥಾ ನಡೆಸಿದರು. ವಿಜಯೋತ್ಸವದಲ್ಲಿ ಶ್ರೀಕರ ಪ್ರಭು ಮಂಗಳೂರು, ಮೇಯರ್ ಪ್ರವೀಣ್ ಅಂಚನ್, ಫಿಶರೀಶ್ ಫೆಡರೇಶನ್ನಿನ […]

ಮುಖ್ಯ ಯೋಜನಾಧಿಕಾರಿ ತಾಕತ್ ರಾವ್ ಅವರಿಗೆ ಬೀಳ್ಕೊಡುಗೆ

Wednesday, May 11th, 2011
ಮುಖ್ಯ ಯೋಜನಾಧಿಕಾರಿ ತಾಕತ್ ರಾವ್ ಅವರಿಗೆ ಬೀಳ್ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ 12 ವರ್ಷ ಆರು ತಿಂಗಳ ಸೇವಾವಧಿಯಲ್ಲಿ ಸಹಕಾರ ನೀಡಿದ ಎಲ್ಲ ರಿಗೂ ಮುಖ್ಯ ಯೋಜನಾಧಿಕಾರಿ ಶ್ರೀ ಪಿ ತಾಕತ್ ರಾವ್ ಅವರು ಕೃತಜ್ಞತೆ ಸಲ್ಲಿಸಿದರು. ಇಂದು ಜಿಲ್ಲಾ ಪಂಚಾಯತ್ ನಲ್ಲಿ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಎಲ್ಲರ ನೆರವಿನಿಂದ ತಮ್ಮ ಕೆಲಸ ಸುಗಮವಾಗಿ ಸಾಗಿದ ಬಗ್ಗೆ ಸಂತೃಪ್ತಿ ವ್ಯಕ್ತಪಡಿಸಿದರು. ಸ್ವಚ್ಛತಾಂದೋಲನದಲ್ಲಿ ಜಿಲ್ಲೆಯ ಯಶೋಗಾಥೆ ಹಾಗೂ ಇದಕ್ಕೆ ಸಹಕಾರ ನೀಡಿದ ಎಲ್ಲರನ್ನೂ ಸ್ಮರಿಸಿದರು. ಮುಖ್ಯ ಯೋಜನಾಧಿಕಾರಿಗಳಾಗಿ ಅಧಿಕಾರ […]

ಪುತ್ತೂರು ರಾಮಕೃಷ್ಣ ಹತ್ಯಾ ಅರೋಪಿಗಳು ನ್ಯಾಯಾಂಗ ವಶಕ್ಕೆ

Monday, May 9th, 2011
ಅಲೋಕ್ ಮೋಹನ್ ಪತ್ರಿಕಾಗೋಷ್ಟಿ

ಮಂಗಳೂರು : ಎಪ್ರಿಲ್ 28ರಂದು ಸುಳ್ಯ ನಗರದಲ್ಲಿ ನಡೆದ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಶ್ರೀ ರಾಮಕೃಷ್ಣ ಎಂಬವರ ಹತ್ಯಾ ಪ್ರಕರಣದ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಇಂದು ಸಂಜೆ ಸುಳ್ಯದಲ್ಲಿ  ನ್ಯಾಯಾಂಗ ವಶಕ್ಕೆ ನೀಡಲಾಯಿತು ಎಂದು ಐಜಿಪಿ ಅಲೋಕ್ ಮೋಹನ್ ಇಂದು ಮಂಗಳೂರಿನಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಪುತ್ತೂರು  ಎಸ್ಪಿ ಯವರ ನೇತೃತ್ವದ ಡಿ.ಸಿ.ಐ.ಬಿ ತಂಡವನ್ನು ಒಳಗೊಂಡಂತೆ 5 ತಂಡವನ್ನು ರಚಿಸಿ, ನಿನ್ನೆ ಡಿ.ಸಿ.ಐ.ಬಿ.  ಪೊಲೀಸರಿಗೆ ಬಂದ ಮಾಹಿತೆಯಂತೆ […]

ಜಗತ್ತಿನ ಅತ್ಯಂತ ಕುಖ್ಯಾತ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್‌ ಹತ್ಯೆ

Monday, May 2nd, 2011
ಒಸಾಮಾ ಬಿನ್ ಲಾಡೆನ್‌ ಹತ್ಯೆ

ಇಸ್ಲಾಮಾಬಾದ್ : ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್‌ನನ್ನು ಅಮೆರಿಕ ಸೇನಾ ಪಡೆ ಪಾಕಿಸ್ತಾನದಲ್ಲಿ ಹತ್ಯೆಗೈಯುವ ಮೂಲಕ ಜಗತ್ತಿನ ಅತ್ಯಂತ ಕುಖ್ಯಾತ ಭಯೋತ್ಪಾದಕನ ಅದ್ಯಾಯಕ್ಕೆ ತೆರೆ ಎಳೆದಿದೆ.  ಲಾಡೆನ್ ಪಾಕ್ ಮಿಲಿಟರಿ ಬೇಸ್‌ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿಯೇ ವಾಸವಾಗಿದ್ದರೂ ಕೂಡ ಆತನ ಬಗ್ಗೆ ಯಾವುದೇ ಮಾಹಿತಿಗಳನ್ನು ಪಾಕ್ ಅಮೇರಿಕನ್ ಸೇನೆಗೆ ನೀಡಿರಲಿಲ್ಲ . ಅಮೆರಿಕ ನೇತೃತ್ವದ ಪಡೆ ಕಳೆದ ಹತ್ತು ವರ್ಷಗಳಿಂದ ಲಾಡೆನ್ ಬೇಟೆಯಲ್ಲಿ ತೊಡಗಿತ್ತು. ಆದರೆ ಪಾಕಿಸ್ತಾನ ಮಾತ್ರ ಲಾಡೆನ್ ಇರುವಿಕೆ ಬಗ್ಗೆ ಯಾವುದೇ ಸುಳಿವು […]

ಜನರಲ್ಲಿ ಕಾನೂನು ಬಗ್ಗೆ ಅರಿವು ಮೂಡಿಸಿ ಜಾಗೃತಿ ಮೂಡಿಸಬೇಕು

Saturday, April 30th, 2011
ನ್ಯಾಯಾಲಯ ಹಾಗೂ ನ್ಯಾಯಾಂಗ ಅಧಿಕಾರಿಗಳ ವಸತಿಗೃಹಕ್ಕೆ ಶಂಕುಸ್ಥಾಪನೆ

ಮಂಗಳೂರು : ತನ್ನ ಸುತ್ತ ನಡೆಯುತ್ತಿರುವ  ಅನ್ಯಾಯ ಶೋಷಣೆ,ಭ್ರಷ್ಠಾಚಾರ,ಕೊಲೆಸುಲಿಗೆಗಳು ನಿಲ್ಲಬೇಕಾದರೆ ಪ್ರತಿಯೊಬ್ಬರೂ ಕಾನೂನಿನ ಅರಿವನ್ನು ಹೊಂದಬೇಕು.ಆಗ ಮಾತ್ರ ಭ್ರಷ್ಠಾಚಾರಿಗಳು,ಸ್ವಜನ ಪಕ್ಷಪಾತಿಗಳು,ಕೊಲೆಗಡುಕರು ಮುಂತಾದವರು ಸಮಾಜದಿಂದ ದೂರ ಹೋಗುತ್ತಾರೆ.ಇದರಿಂದ ಸಮಾಜದಲ್ಲಿ ನೆಮ್ಮದಿ ಶಾಂತಿ ಸೌಹಾರ್ಧತೆ ಮೂಡಿ ಜನರ ಜೀವನ ಸುಖಮಯವೂ,ಪ್ರಗತಿದಾಯಕವೂ ಆಗಿರುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ದ.ಕ. ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಶ್ರೀ ಎಚ್.ಎನ್.ನಾಗಮೋಹನದಾಸ್ ಅವರು ತಿಳಿಸಿದ್ದಾರೆ. ಅವರು ಇಂದು ಮೂಡಬಿದ್ರೆಯಲ್ಲಿ ರೂ.4ಕೋಟಿ ವೆಚ್ಚದಲ್ಲಿ ನಿರ್ಮಿಸಲಿರುವ ಸಿವಿಲ್ ಹಾಗೂ ಪ್ರಥಮ ದರ್ಜೆ ನ್ಯಾಯಿಕದಂಡಾಧಿಕಾರಿಗಳ ನ್ಯಾಯಾಲಯ ಹಾಗೂ […]

ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

Friday, April 29th, 2011
ಕಾನೂನು ಸಚಿವ ಎಂ.ವೀರಪ್ಪ ಮೊಲಿಯವರಿಂದ ನೂತನ ಆರೋಗ್ಯ ಕೇಂದ್ರದ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು : ಮಂಜನಾಡಿ ಗ್ರಾಮದ ನಾಟೆಕಲ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಮಂಜನಾಡಿ, ರಕ್ಷಾ ಸಮಿತಿ ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್ ಇಲ್ಲಿ ಸುಮಾರು 1ಕೋಟಿ. ರೂ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಕಟ್ಟಡಕ್ಕೆ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಲಿ ಶಂಕುಸ್ಥಾಪನೆಗೈದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ಸಮುದ್ರ ಸೇರುವ ನದಿ ನೀರಿಗೆ ಅಲ್ಲಲ್ಲಿ ಅಣೆಕಟ್ಟು ನಿರ್ಮಿಸಿ, ಸಂಗ್ರಹವಾದ ನೀರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು. ವ್ಯರ್ಥವಾಗಿ ಪೋಲಾಗುವ ನದಿ ನೀರನ್ನು […]