ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದ, ಸಿಎಂ ದೆಹಲಿಗೆ

Sunday, September 19th, 2010
ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದ, ಸಿಎಂ ದೆಹಲಿಗೆ

ಬೆಂಗಳೂರು : ರಾಜ್ಯ ಸಚಿವ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಸಿದ್ದಗೊಂಡಿದ್ದು, ಇಂದು ಸಿಎಂ ನಿವಾಸದಲ್ಲಿ ನಡೆದ ಸಭೆಯಲ್ಲಿ  ಅಂತಿಮ ಪಟ್ಟಿ ತಯಾರಿಸಲಾಗಿದೆ. ಇದೀಗ ದೆಹಲಿನಲ್ಲಿರುವ ಹೈಕಮಾಂಡ್ ಜತೆ ಚರ್ಚಿಸಲು ಮುಖ್ಯಮಂತ್ರಿ ಬಿ. ಎಸ್ ಯಡ್ಡಿಯೂರಪ್ಪ ದೆಹಲಿಗೆ ಪಯಾಣಿಸಿದ್ದಾರೆ. ಗೃಹ ಸಚಿವ ವಿ ಎಸ್ ಆಚಾರ್ಯ ಸಿಎಂ ಜತೆ  ದೆಹಲಿಗೆ ಪಯಾಣಿಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಜತೆ ನಡೆಯಲಿರುವ ಚರ್ಚೆ ಬಳಿಕ ಸಂಪುಟ ಪುನರಾಚನೆಯ ಅಂತಿಮ ಪಟ್ಟಿ ಬಿಡುಗಡೆ ಗೊಳ್ಳಲಿದೆ. ಸಿಎಂ ನಿವಾಸದಲ್ಲಿ  ಈಶ್ವರಪ್ಪ ಮತ್ತು ರಾಜ್ಯಸಭಾ ಸದಸ್ಯ […]

ಡಾ| ಪಂಡಿತ್ ಪುಟ್ಟರಾಜ ಗವಾಯಿ ಲಿಂಗೈಕ್ಯ

Friday, September 17th, 2010
ಡಾ| ಪಂಡಿತ್ ಪುಟ್ಟರಾಜ ಗವಾಯಿ ಲಿಂಗೈಕ್ಯ

ಗದಗ : ಪದ್ಮ ಭೂಷಣ ಪುರಷ್ಕ್ರುತ ಡಾ| ಪಂಡಿತ್ ಪುಟ್ಟರಾಜ ಗವಾಯಿ (97) ಶುಕ್ರವಾರ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಮಧ್ಯಾಹ್ನ 12-30ಕ್ಕೆ ಲಿಂಗೈಕ್ಯರಾದರು. ಹಿಂದೂಸ್ತಾನಿ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದ ಇವರು ಭಕ್ತರ ಪಾಲಿಗೆ ನಡೆದಾಡುವ ದೇವರಾಗಿದ್ದರು. 1914 ಮಾರ್ಚ್ 3ರಂದು ಹಾವೇರಿ ಜಿಲ್ಲೆಯ ಹಾನ ಗಲ್‌ನ ದೇವರ ಹೊಸಕೋಟೆ ಯಲ್ಲಿ ಜನಿಸಿದ ಪುಟ್ಟರಾಜ ಗವಾಯಿ  ಮೂಲ ಹೆಸರು ಪುಟ್ಟಯ್ಯಜ್ಜ ಎಂಬುದಾಗಿತ್ತು.  ಬಾಲ್ಯ ದಲ್ಲಿಯೇ ಗವಾಯಿ ದೃಷ್ಟಿ ಕಳಕೊಂಡಿದ್ದರು. ಮಾವ ಚಂದ್ರಶೇಖರ್  ಪುಟ್ಟಯ್ಯಜ್ಜನಿಗೆ ಬೆಳಕಾಗಿ ಅವರ […]

ಹಿರಿಯ ಪತ್ರಕರ್ತ ಕೆಜೆ.ಶೆಟ್ಟಿ ಕಡಂದಲೆ ವಿಧಿ ವಶ

Thursday, September 16th, 2010
ಹಿರಿಯ ಪತ್ರಕರ್ತ ಕೆಜೆ.ಶೆಟ್ಟಿ ಕಡಂದಲೆ ವಿಧಿ ವಶ

ಮೂಡುಬಿದಿರೆ:  ಹಿರಿಯ ಪತ್ರಕರ್ತ ಕೆಜೆ.ಶೆಟ್ಟಿ ಕಡಂದಲೆ ಅವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಬುಧವಾರ ಸಂಜೆ ನಿಧನರಾದರು ಸ್ವ ಗೃಹದಲ್ಲಿ ನಿಧನರಾಗಿದ್ದಾರೆ. ಅವರು ಐವರು ಗಂಡು ಮತ್ತು ಐವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕ್ರಷಿಕರಾಗಿ ತಮ್ಮನ್ನು ತೊಡಗಿಸಿ ಕೊಂಡಿದ್ದ ಅಪ್ರತಿಮ ಸಾಧಕ ಕೆಜೆ.ಶೆಟ್ಟಿ ಕಡಂದಲೆ ಶಿಕ್ಷಕರಾಗಿ, ಸಾಹಿತಿಯಾಗಿ,  ಅಪ್ರತಿಮ ಹೋರಾಟಗಾರರಾಗಿ, ಹರಿತವಾದ ಬರಹಗಳಿಂದ ಜನರ ಮನ ಮುಟ್ಟಿದ್ದರು. ಕಡಂದಲೆಯಲ್ಲಿ ಶಿಕ್ಷಕ ವೃತ್ತಿಗೆ ರಾಜೀನಾಮೆ ಕೊಟ್ಟು.  ಸ್ವತಃ ತಾವೇ ಸಂಪಾದಕರಾಗಿ ಚಂದನ ಮಾಸ ಪತ್ರಿಕೆಯನ್ನು ನಡೆಸುತ್ತಿದ್ದರು. ಸ್ಥಳೀಯ ಪತ್ರಿಕೆಗಳಿಗೆ ಅಂಕಣ […]

ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಜಯಭೇರಿ

Thursday, September 16th, 2010
ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಗೆ ಜಯಭೇರಿ

ಗುಲ್ಬರ್ಗಾ : ಸೋಮವಾರ ಕಡೂರು ಮತ್ತು ಗುಲ್ಬರ್ಗಾ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮರು ಮತದಾನದ  ಮತಎಣಿಕೆ ಮುಕ್ತಾಯವಾಗಿದ್ದು ಆಡಳಿತ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. , ಪ್ರತಿಷ್ಠೆಯಮಾರ್ಪಟ್ಟಿದ್ದ , ಮೂರೂ ಪಕ್ಷಗಳಿಗೆ ಅಗ್ನಿಪರೀಕ್ಷೆಯ  ಕಣವಾಗಿದ್ದ   ಕಡೂರಿನಲ್ಲಿ ಬಿಜೆಪಿಯ ಡಾ. ವೈ.ಸಿ. ವಿಶ್ವನಾಥ್  ಗೆಲುವು ದಾಖಲಿಸಿದ್ದರೆ, ಜೆಡಿಎಸ್‌ನ ವೈ.ಎಸ್.ವಿ. ದತ್ತಾ ಅವರು ಸೋಲು ಅನುಭವಿಸಿದ್ದಾರೆ.  ಕಾಂಗ್ರೆಸ್‌ನ ಕೆಂಪರಾಜು ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಜೆಡಿಎಸ್‌ನ ಅರುಣಾ ಪಾಟೀಲ್ ರೇವೂರ […]

ರಂಗ ಕಲಾವಿದ ನವೀನ್ ಎಡಮಂಗಲ ವಿಧಿ ವಶ

Monday, September 13th, 2010
ರಂಗ ಕಲಾವಿದ ನವೀನ್ ಎಡಮಂಗಲ ವಿಧಿ ವಶ

ಬೆಳ್ತಂಗಡಿ : ವಿಶ್ವತುಳು ಸಮ್ಮೇಳನದ ತುಳುಗ್ರಾಮದಲ್ಲಿ ಗಾಂಧಿ ಪಾತ್ರಧಾರಿ, ಖ್ಯಾತ ರಂಗಕರ್ಮಿ, ನಾಟಕ ನಿರ್ದೇಶಕ ನವೀನ್ ಎಡಮಂಗಲ (27) ಪಂಜ-ಕಡಬ ರಸ್ತೆಯ ನೆಕ್ಕಿಲದಲ್ಲಿ ಸೆ.11ರಂದು ಬೆಳಿಗ್ಗೆ ಹಿಟಾಚಿ ಯಂತ್ರ ಹೇರಿಕೊಂಡು ಹೋಗುತ್ತಿದ್ದ ಟಿಪ್ಪರ್‌ ಲಾರಿ ಹಾಗೂ ಬೈಕ್  ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಣೇಶೋತ್ಸವ ನಿಮಿತ್ತ ಪಂಜದಲ್ಲಿ ನವೀನ್ ಎಡಮಂಗಲ ನಿರ್ದೇಶನದಲ್ಲಿ ಉಜಿರೆಯ ಎಸ್‌ಡಿ ಎಂ. ಕಾಲೇಜಿನ ರಂಗತರಬೇತಿ ಕೇಂದ್ರದವರಿಂದ ಸೆ.11ರಂದು ರಾತ್ರಿ ನಾಟಕ ನಡೆಯಲಿದ್ದು, ಅವರು ಸೆ.10ರಂದೇ ಪಂಜಕ್ಕೆ ಬಂದು ವೇದಿಕೆ, ರಂಗಸಜ್ಜಿಕೆ ನಿರ್ಮಿಸಿದ್ದರು. ಸೆ.11ರಂದು ಮುಂಜಾನೆ […]

ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

Monday, September 13th, 2010
ನಗರದ ಕೇಂದ್ರ ಮೈದಾನದಲ್ಲಿ ಹಿಂದೂ ಯುವಸೇನೆಯ 18 ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ

ಮಂಗಳೂರು:  ಹಿಂದೂ ಯುವಸೇನೆ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ  18ನೇ ವರ್ಷದ ಗಣೇಶೋತ್ಸವವನ್ನು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು, ಗಣೇಶೋತ್ಸವವು ಸದ್ವಿಚಾರಗಳಿಗೆ ಹಚ್ಚಿನ ಪ್ರೇರಣೆ ನೀಡಲಿ ಹಾಗೂ ಈ ಕಾರ್ಯಕ್ರಮವು ಸೌಹಾರ್ದತೆಗೆ ಮಾದರಿಯಾಗಲಿ ಎಂದು ಹೇಳಿದರು. ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ ಫರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್ ನಾಯಕ್, ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಭಾಸ್ಕರಚಂದ್ರ […]

ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

Sunday, September 12th, 2010
ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ರಾಜೀನಾಮೆ

ಬೆಂಗಳೂರು,  : ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡರು ಹಾಸನ ಹಾಗೂ ಮೈಸೂರು ಸರ್ಕಾರಿ ವೈದ್ಯಕೀಯ ಆಸ್ಪತ್ರೆಗಳ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಅಕ್ರಮ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ಸಲ್ಲಿಸಿದ್ದಾರೆ  ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ರಾಮಚಂದ್ರಗೌಡರು ಅವರ ನಿರ್ಣಯವನ್ನು ಸ್ವಾಗತಿಸಿದ್ದಾರೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ಅವ್ಯವಹಾರ್ ನಡೆದಿಲ್ಲ ಎಂದು ರಾಜ್ಯ ಹೈಕೋರ್ಟ್  ಗೆ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರು. ಆದರೆ ಆಸ್ಪತ್ರೆಗಳ ಗವರ್ನಿಂಗ್ ಕೌನ್ಸಿಲ್ ಅಧ್ಯಕ್ಷರೂ ಆಗಿರುವ ಸಚಿವ ರಾಚಂಗೌಡ ಅವರ ಅಫಿಡವಿಟ್ ಅನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಸಿಎಂ ಯಡಿಯೂರಪ್ಪ […]

ಯು.ಎಸ್ ಓಪನ್ ಕೂಟದಲ್ಲಿ ಬೋಪಣ್ಣ-ಕುರೇಶಿ ಸೆಮಿಫೈನಲಿಗೆ.

Thursday, September 9th, 2010
ಯು.ಎಸ್ ಓಪನ್ ಕೂಟದಲ್ಲಿ ಬೋಪಣ್ಣ-ಕುರೇಶಿ ಸೆಮಿಫೈನಲಿಗೆ.

ನ್ಯೂಯಾರ್ಕ್: ಯು.ಎಸ್ ಓಪನ್ ಕೂಟದ ಪುರುಷರ ಡಬಲ್ಸ್ ವಿಭಾಗದಲ್ಲಿ ಕರ್ನಾಟಕದ ರೋಹನ್ ಬೋಪಣ್ಣ ಅವರು ಪಾಕಿಸ್ಥಾನದ ಐಸಾಮ್ ಉಲ್ ಹಕ್ ಕುರೇಶಿ ಜತೆಗೂಡಿ ಸೆಮಿಫೈನಲ್ ಹಂತಕ್ಕೇರಿದ್ದಾರೆ.  ಬೋಪಣ್ಣ ಮೊದಲ ಬಾರಿಗೆ ಗ್ರ್ಯಾನ್ ಸ್ಲಾಮ್ ಉಪಾಂತ್ಯ ತಲುಪಿದ ಸಾಧನೆಯಾಗಿದೆ. ಯು.ಎಸ್ ಓಪನ್ ಕೂಟದ 16ನೇ ಶ್ರೇಯಾಂಕಿತರಾದ ಬೋಪಣ್ಣ – ಕುರೇಶಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ 10ನೇ ಶ್ರೇಯಾಂಕದ ದಕ್ಷಿಣ ಆಫ್ರಿಕಾದ ವೆಸ್ಲೆ ಮೂಡಿ ಮತ್ತು ಬೆಲ್ಜಿಯಂನ ಡಿಕ್ ನಾರ್ಮನ್ ವಿರುದ್ಧ 7-5, 7-6 ಅಂತರದಿಂದ ಜಯ ದಾಖಲಿಸಿದರು. ಈ […]

ಕೆಥೋಲಿಕ್ ಸಮಾಜ ಬಾಂಧವರ ಸಾಂಸ್ಕೃತಿಕ ಹಬ್ಬ, ಮೊಂತಿ ಫೆಸ್ತ್.

Wednesday, September 8th, 2010
ಕೆಥೋಲಿಕ್ ಸಮಾಜ ಬಾಂಧವರ ಸಾಂಸ್ಕೃತಿಕ ಹಬ್ಬ, ಮೊಂತಿ ಫೆಸ್ತ್.

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಕೊಂಕಣಿ ಕೆಥೋಲಿಕ್ ಸಮಾಜ ಬಾಂಧವರು ಮಾತೆ ಮೇರಿಯ ಜನ್ಮ ದಿನವನ್ನು ತೆನೆ ಹಬ್ಬವಾಗಿ ಆಚರಿಸಿದರು. ಇಂದು (ಸೆ. 8) ಮಾತೆ ಮೇರಿಯ ಜನ್ಮ ದಿನ ಮೊಂತಿ ಹಬ್ಬವನ್ನು ಕುಟುಂಬದ ಎಲ್ಲಾ ಸದಸ್ಯರು ಜತೆಯಾಗಿ ಒಗ್ಗಟ್ಟಿನಿಂದ ಆಚರಿಸುತ್ತಾರೆ. ಈ ದಿನದಂದು ಮೇರಿಯನ್ನು ಅದ್ಬುತ ಪವಾಡ ಮತ್ತು ಭಕ್ತಾಧಿಗಳ ಬೇಡಿಕೆಗಳನ್ನು ಈಡೇರಿಸಿದ ಪ್ರತೀಕವಾಗಿ ಹಲವು ನಾಮಗಳಿಂದ ಕರೆಯಲಾಗುತ್ತದೆ. ಮೊಂತಿ ಫೆಸ್ತ್ ಎಂದರೆ ಪರ್ವತದ ಮೇಲಿನ ಮಾತೆಯ ಹಬ್ಬ ಎಂದು ಅರ್ಥೈಸಿಕೊಳ್ಳಲಾಗಿದೆ. ಸರಿಸುಮಾರು […]

ಚಿತ್ರ ನಟ ಮುರಳಿ ಇನ್ನಿಲ್ಲ

Wednesday, September 8th, 2010
ಚಿತ್ರ ನಟ ಮುರಳಿ ಇನ್ನಿಲ್ಲ

ಚೆನ್ನೈ : ಕನ್ನಡ ಚಿತ್ರರಂಗದಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿಮಿಂಚಿದ ನಟ ಮುರಳಿ (46) ಚೆನ್ನೈನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ಅಜಯ್ ವಿಜಯ್, ಪ್ರೇಮ ಪರ್ವ, ಪ್ರೇಮ ಪ್ರೇಮ ಪ್ರೇಮ ಮತ್ತಿತರ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ.ಮಂಗಳವಾರ  ಮಗಳ ನಿಶ್ಚಿತಾರ್ಥ ಮುಗಿಸಿ ಮಲಗಿದ್ದ ಮುರಳಿ ಬೆಳಗ್ಗೆ ಏಳದ್ದನ್ನು ನೋಡಿ ಮನೆಯವರು ಎಬ್ಬಿಸಲು ಹೋದಾಗ ಅವರು ತೀರಿಕೊಂಡ ವಿಚಾರ ಬೆಳಕಿಗೆ ಬಂದಿದೆ ಮುರಳಿ ಪತ್ನಿ ಶೋಭಾ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಕನ್ನಡದಲ್ಲಿ ಹಲವು ಜನಪ್ರಿಯ ಹಾಡುಗಳಲ್ಲಿ […]