ನಿಡ್ಡೋಡಿ ಉಷ್ಣ ವಿದ್ಯುತ್ ಸ್ಥಾವರ ವಿರುದ್ಧ ದ ಹೋರಾಟಕ್ಕೆ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಬೆಂಬಲ

Saturday, March 2nd, 2013
Sri Vishwesha Theertha Swamiji

ಉಡುಪಿ : ಮೂಡುಬಿದಿರೆ ಸಮೀಪದ ನಿಡ್ಡೋಡಿಯಲ್ಲಿ ಸರ್ಕಾರ ಸ್ಥಾಪಿಸಲುದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿಯೇ ಶುಕ್ರವಾರ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ  ಸ್ಥಳೀಯ ಜನರ ಹೋರಾಟಕ್ಕೆ ತಾವು  ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಶುಕ್ರವಾರ ಪೇಜಾವರ ಮಠದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಸ್ಥಾಪನೆಯಾದ ವಿಶೇಷ ಆರ್ಥಿಕ ವಲಯದ ವಿರುದ್ಧ ಕೂಡ ನಾನು ದನಿಯೆತ್ತಿದ್ದೆ ಇದಕ್ಕೆ ಪ್ರತಿಯಾಗಿ ಕೆಲವು ರಾಜಕೀಯ ನಾಯಕರು ನನ್ನನ್ನು ಟೀಕಿಸಿದ್ದರು ಆದರೆ ನಾನು ಇವು ಯಾವುದರ […]

ಪೆಟ್ರೋಲು ಬೆಲೆ ಲೀಟರಿಗೆ 1.40 ರೂಪಾಯಿ ಏರಿಕೆ

Saturday, March 2nd, 2013
Petrol price hike

ಹೊಸದಿಲ್ಲಿ : ಪೆಟ್ರೋಲು ಬೆಲೆಯನ್ನು ಲೀಟರಿಗೆ 1.40 ರೂಪಾಯಿಯಂತೆ ಏರಿಸಲಾಗಿದ್ದು, ಇದು ಇತ್ತೀಚೆಗಿನ ಕೆಲವು ವಾರಗಳಲ್ಲಿ ಆಗಿರುವ ದೊಡ್ಡ ಮೊತ್ತದ ಹೆಚ್ಚಳ.ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆಯೇರಿಕೆ ಮತ್ತು ರೂಪಾಯಿ ಮೌಲ್ಯ ಕುಸಿತದಿಂದಾಗಿ ಶುಕ್ರವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲು ಬೆಲೆಯನ್ನು ರೂ. 1.40ರಂತೆ ಏರಿಸುವುದು ಅನಿವಾರ್ಯ ಎಂದು ಭಾರತೀಯ ತೈಲ ನಿಗಮ ಹೇಳಿದೆ. ಈ ಏರಿಕೆಯಲ್ಲಿ ಸ್ಥಳೀಯ ತೆರಿಗೆಗಳು ಒಳಗೊಂಡಿಲ್ಲ. ವ್ಯಾಟ್‌ ಸೇರಿಸಿದ ಬಳಿಕ ಏರಿಕೆ ಇನ್ನೂ ತುಸು ಹೆಚ್ಚಾಗಲಿದೆ. ಫೆ. 16ರಂದು ವ್ಯಾಟ್‌ ಸೇರಿಸದೆ ರೂಪಾಯಿ 1.50 […]

ಅಕ್ರಮ ಗಾಂಜಾ ಸಾಗಾಟ ನಾಲ್ವರು ಆರೋಪಿಗಳ ಸೆರೆ

Saturday, March 2nd, 2013
ganja seized at Sullia

ಸುಳ್ಯ : ಶುಕ್ರವಾರ ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೂಲಿ ಶೆಡ್ಡ್ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಜಿಲ್ಲಾ ಅಪರಾಧ ಪತ್ತೆ ದಳ ಮತ್ತು ಸುಳ್ಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿಯಲ್ಲಿದ್ದ 1.100 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರದ ಆಸುಪಾಸಿನ ಅವಿನಾಶ್‌(29), ಅರುಣ್‌ ಶೆಟ್ಟಿ(38), ನೆಲ್ಸನ್‌ ಡಿಸೋಜ(29) ಮತ್ತು ಪ್ರಥ್ವಿ ಆಳ್ವ(38) ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂಪಾಯಿ  35049 ನಗದು, 6 ಮೊಬೈಲ್‌, 1 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ […]

12ನೇ ದಿನಕ್ಕೆ ಕಾಲಿಟ್ಟ ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟದ ನಿರಾಹಾರ ಸತ್ಯಾಗ್ರಹ

Friday, March 1st, 2013
Endosulfan santrastha janapara okkuta

ಕಾಸರಗೋಡು : ಕಳೆದ ಹಲವು ದಿನಗಳಿಂದ ಎಂಡೋಸಲ್ಫಾನ್ ಸಂತ್ರಸ್ಥ ಜನಪರ ಒಕ್ಕೂಟದ ನೇತೃತ್ವದಲ್ಲಿ ಕಾಸರಗೋಡಿನ ಹೊಸ ಬಸ್ಸು ನಿಲ್ದಾಣ ಪರಿಸರದ ಸಹಿ ವೃಕ್ಷದಡಿ ನಡೆಸುತ್ತಿರುವ ನಿರಾಹಾರ ಸತ್ಯಾಗ್ರಹ 12ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎನ್.ಎ.ನೆಲ್ಲಿಕುನ್ನು ಎಂಡೋಸಲ್ಫಾನ್ ಸಂತ್ರಸ್ತರ ಸಾಲ ಮನ್ನಾ ಮಾಡುವ ಕುರಿತು ಸಮಿತಿಯೊಂದನ್ನು ನೇಮಿಸಿ, ಮಾನವ ಹಕ್ಕು ಆಯೋಗ ನೀಡಿದ ಸಲಹೆಯಂತೆ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಆದರೆ ಶಾಶ್ವತ […]

ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ಒಪ್ಪಿದ ಸರ್ಕಾರ

Wednesday, February 27th, 2013
Ambedkar statue shifted

ಬೆಂಗಳೂರು : ಇಲ್ಲಿನ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲು ಸರ್ಕಾರ ಒಪ್ಪಿಕೊಂಡಿದ್ದು ಈ ಮೂಲಕ  ವಿವಾದದ ಸ್ವರೂಪ ಪಡೆದುಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದಕ್ಕೆ ಹೈಕೋರ್ಟ್ ಸೋಮವಾರ ಮಂಗಳ ಹಾಡಿದೆ. ಅಮರನಾಥನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ, `ಪ್ರತಿಮೆಯನ್ನು 15 ದಿನಗಳಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಬೇಕು’ ಎಂದು ಡಿಸೆಂಬರ್ 12ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಲವು ದಲಿತ ಸಂಘಟನೆಗಳು […]

ಪತ್ರಕರ್ತ ನವೀನ್ ಸೂರಿಂಜೆ ಆಸ್ಪತ್ರೆಗೆ ದಾಖಲು

Wednesday, December 26th, 2012
Naveen Soorinje

ಮಂಗಳೂರು :ಕಸ್ತೂರಿ ವಾಹಿನಿಯ ವರದಿಗಾರ, ಹೋಮ್ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನವೀನ್ ಸೂರಿಂಜೆ ಚಿಕನ್ ಪಾಕ್ಸ್ ಪೀಡಿತರಾಗಿದ್ದು ಈ ಹಿನ್ನೆಲೆಯಲ್ಲಿ ನಿನ್ನೆ ಮಧ್ಯಾಹ್ನನದ ನಂತರ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ನವೆಂಬರ್ 7ರಿಂದ ಸೂರಿಂಜೆ ಜೈಲಿನಲ್ಲಿದ್ದು ಡಿಸೆಂಬರ್ 26ರಂದು ಅವರ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ತನ್ನ ವಿರುದ್ಧದ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಸೂರಿಂಜೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಜೆಎಂಎಫ್ ಸಿ ಕೋರ್ಟ್ ಮತ್ತು ಸೆಶನ್ಸ್ ಕೋರ್ಟ್ ನಲ್ಲಿ ತನ್ನ ಜಾಮೀನು […]

ಮಂಗಳೂರು :ನೂತನ ಪ್ರವಾಸಿ ತಾಣ “ಕುಡ್ಲ ಕುದ್ರು” ಉದ್ಘಾಟನೆ

Monday, November 26th, 2012
Kudla Kudru island

ಮಂಗಳೂರು :ಶಾಸಕ ಕೃಷ್ಣ ಜೆ ಪಾಲೆಮಾರ್ ರವರು ನಗರದ ಬೊಕ್ಕಪಟ್ಟಣದ ನಡುಕುದ್ರುವಿನಲ್ಲಿ ನೂತನ ಪ್ರವಾಸಿ ತಾಣ ‘ಕುಡ್ಲ ಕುದ್ರುವನ್ನು’ ವನ್ನು ರವಿವಾರ ಸಂಜೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರಾವಳಿ ಜನತೆಯ ಆಧ್ಯತೆಯ ಮೇರೆಗೆ ಇಲ್ಲಿ ಪ್ರವಾಸಿ ತಾಣಗಳು ರೂಪುಗೊಳ್ಳುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದ್ದು ಈ ಪ್ರವಾಸಿ ತಾಣವು ಕರಾವಳಿ ಪ್ರವಾಸೋಧ್ಯಮಕ್ಕೆ ಹೊಸ ಮುನ್ನುಡಿ ಎಂದವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದಾನಸಭಾ ಉಪಸಭಾಪತಿ ಎನ್ ಯೋಗೀಶ್ ಭಟ್ ವಹಿಸಿದ್ದರು. ಮಂಗಳೂರು ಮೇಯರ್ ಗುಲ್ಜಾರ್ ಬಾನು, ಉಪ ಮೇಯರ್ […]

ಕುದ್ರೋಳಿ: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರಿಂದ ನೂತನ ಸಭಾಭವನದ ಉದ್ಘಾಟನೆ

Saturday, November 17th, 2012
ಕುದ್ರೋಳಿ: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರಿಂದ ನೂತನ ಸಭಾಭವನದ ಉದ್ಘಾಟನೆ

ಮಂಗಳೂರು :ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಜೀರ್ಣೋದ್ದಾರ ಕಾರ್ಯದ ರೂವಾರಿ ಹಾಗು ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಶ್ರೀ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಲಾದ ಜಯ ಸಿ. ಸುವರ್ಣ ಸಭಾಭವನ ಹಾಗೂ ರಾಘವೇಂದ್ರ ಕೆ. ಭೋಜನ ಶಾಲೆಯ ಉದ್ಘಾಟನೆಯನ್ನು ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಈ ಹಿಂದೆ ಮೊದಲ ಸಭಾ ಭವನ ನಿರ್ಮಾಣ ಕಾರ್ಯ ಪ್ರಾರಂಭಿಸಿದಾಗ ಹೆಚ್ಚಿನ ಆರ್ಥಿಕ ಸಮಸ್ಯೆ ಇದ್ದರೂ ಸಹ ಸಭಾ ಭವನದ ನಿರ್ಮಾಣ ಕಾರ್ಯ ಯಶಸ್ವಿಯಾಗಿ ನೆರವೇರಿತ್ತು. ಈಗ ಶ್ರೀ ಕ್ಷೇತ್ರದಲ್ಲಿ  ಒಟ್ಟು […]

ಪಟ್ಟಿಯಲ್ಲಿ ಹೆಸರು, ಫೋಟೋ ಇಲ್ವಾ? ಓಟು ಹಾಕಲು ಅಸಾಧ್ಯ ಗೊತ್ತಾ?

Saturday, October 20th, 2012
Vote for election

ಮಂಗಳೂರು: ಭಾರತದ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಮತದಾರರ ಪಟ್ಟಿಯಲ್ಲಿ ಭಾವಚಿತ್ರ ಸಮೇತ ಹೆಸರು ಸೇರ್ಪಡೆಗೆ ಇದೀಗ ದ.ಕ. ಜಿಲ್ಲಾಡಳಿತ ಮತ್ತೊಮ್ಮೆ ಅವಕಾಶ ಕಲ್ಪಿಸಿದೆ. ಒಂದು ವೇಳೆ ಅಕ್ಟೋಬರ್ 31ರೊಳಗೆ ನಿಮ್ಮ ಹೆಸರನ್ನು ನೊಂದಾಯಿಸದಿದ್ದರೆ 2013ರಲ್ಲಿ ನಡೆಯುವ ರಾಜ್ಯ ವಿಧಾನ ಸಭೆ ಅಥವಾ ಲೋಕಸಭಾ ಚುನಾವಣೆಯಲ್ಲಿ ಓಟು ಹಾಕಲು ನಿಮಗೆ ಸಾಧ್ಯವಿಲ್ಲ. ನಿಮ್ಮ ನಿಮ್ಮ ಮತ ಚಲಾಯಿಸುವ ಹಕ್ಕನ್ನು ಕೈಯಾರೆ ಕಳಕೊಳ್ಳುವಿರಿ. 2013ರ ಜನವರಿ 1ಕ್ಕೆ ಅನ್ವಯವಾಗುವಂತೆ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಮತದಾರರ ಪಟ್ಟಿಗಳ […]

ನಗರದಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನಕ್ಕೆ ಚಾಲನೆ

Sunday, June 3rd, 2012
kanoon Saksharata Ratha

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಜಿಲ್ಲಾ ಪಂಚಾಯತ್‌, ಮಂಗಳೂರು ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನವನ್ನು ಅವರು ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಅಶೋಕ್‌ […]