- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜೆ.ಆರ್ ಲೋಬೊ ರಿಂದ ಮತದಾರರಿಗೆ ಕೃತಜ್ಗ್ಯತೆ ಸಲ್ಲಿಸುವ ವಿಜಯೋತ್ಸವ ಮೆರವಣಿಗೆ

J R Lobo Vijayotsava rally [1]ಮಂಗಳೂರು : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ತಮ್ಮ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ನತೆ ಸಲ್ಲಿಸುವ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.  ಮೆರವಣಿಗೆಯು ಸಿಗ್ನಲ್ ವೃತ್ತದ ಮೂಲಕ ಬಲ್ಮಠ ಮಾರ್ಗವಾಗಿ ಕದ್ರಿ, ನಂತೂರು ಮೂಲಕ ಸಾಗಿ ಕುಲಶೇಖರ ಕೋರ್ಡಲ್ ಚರ್ಚ್ ಹಾಲ್ ನಲ್ಲಿ ಸಮಾಪನಗೊಂಡಿತು.

ಮೆರವಣಿಗೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು. ಗೊಂಬೆ ಕುಣಿತ, ವೈವಿಧ್ಯ ವೇಷಧಾರಿಗಳು ಮೆರವಣಿಗೆಗೆ ಮೆರುಗು ನೀಡಿದವು. ಕಾಂಗ್ರೆಸ್ ಮುಖಂಡರಾದ ವಿಜಯಕುಮಾರ್ ಶೆಟ್ಟಿ, ಐವನ್ ಡಿಸೋಜ, ಕಳ್ಳಿಗೆ ತಾರಾನಾಥ ಶೆಟ್ಟಿ, ಡೆನ್ನಿಸ್ ಡಿಸೋಜಾ ಮೊದಲಾದವರು ಉಪಸ್ಥಿತರಿದ್ದರು.