ದೇವಾಲಯಗಳನ್ನು ವಶಕ್ಕೆ ತೆಗೆದುಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ಬಿಜೆಪಿಯಿಂದ ತೀವ್ರ ವಿರೋಧ

4:39 PM, Friday, May 24th, 2013
Share
1 Star2 Stars3 Stars4 Stars5 Stars
(No Ratings Yet)
Loading...

Nalin Kumar Kateelಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಡುಪಿ ಕೃಷ್ಣಮಠ ಹಾಗು ಗೋಕರ್ಣ ದೇವಾಲಯಗಳನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ ಎಂದು  ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಸಿದ್ದರಾಮಯ್ಯನವರ, ದೇವಾಲಯಗಳನ್ನು ಸರ್ಕಾರದ ವಶಕ್ಕೆ ಒಳಪಡಿಸುವ ನಿರ್ಧಾರ ಭಕ್ತರ ಧಾರ್ಮಿಕ ಭಾವನೆ ಮತ್ತು ಮಠದ ಪರಂಪರೆಗೆ ಧಕ್ಕೆಯುಂಟುಮಾಡುವಂತದ್ದಾಗಿದೆ. ಯಾರದೇ ಧಾರ್ಮಿಕ ಭಾವನೆಗಳಿಗೆ  ಮತ್ತು ಮಠದ ಪರಂಪರೆಗೆ ಧಕ್ಕೆ ತರುವ ಕೆಲಸಕ್ಕೆ ಸರ್ಕಾರ ಕೈ ಹಾಕಬಾರದು  ಒಂದು ವೇಳೆ ಸರ್ಕಾರ ಮುಂದಾದರೆ ಇದರ ವಿರುದ್ದ ಬಿಜೆಪಿ ಬೃಹತ್ ಹೋರಾಟ ಮಾಡುವುದು ಎಂದವರು ಎಚ್ಚರಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English