ಜೆಪ್ಪು ಮೋರ್ಗನ್ಸ್‌ಗೇಟ್ ರೈಲ್ವೆ ಸೇತುವೆ ಬಳಿ ಯುವಕನ ಮೃತ ದೇಹ ಪತ್ತೆ

8:32 PM, Tuesday, August 6th, 2013
Share
1 Star2 Stars3 Stars4 Stars5 Stars
(5 rating, 3 votes)
Loading...

Youth deadಮಂಗಳೂರು : ಜೆಪ್ಪು ಮೋರ್ಗನ್ಸ್‌ಗೇಟ್ ಸಮೀಪದ ರೈಲ್ವೆ ಸೇತುವೆ ಬಳಿ ಮಂಗಳವಾರ ಯುವಕನೊಬ್ಬನ ಮೃತ ದೇಹ  ಪತ್ತೆಯಾಗಿದ್ದು . ಮೃತ ವ್ಯಕ್ತಿಯನ್ನು ಶಾಂತಿಗುಡ್ಡೆ ನಿವಾಸಿ ವಿಕ್ರಾಂತ್ ಶೆಟ್ಟಿ (27) ಎಂದು ಗುರುತಿಸಲಾಗಿದೆ.

ಸೋಮವಾರ ಸುಮಾರು 11 ಗಂಟೆ ಸುಮಾರಿಗೆ ಜ್ಯೋತಿ ಸಮೀಪದ ರಿಕ್ರಿಯೇಶನ್ಸ್ ಕ್ಲಬ್ ನಿಂದ ಶಾಂತಿಗುಡ್ಡೆಯ ತನ್ನ ನಿವಾಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ  ಬಂದ ದುಷ್ಕರ್ಮಿಗಳ ತಂಡವೊಂದು ವಿಕ್ರಾಂತ್ ಶೆಟ್ಟಿಯ ವಾಹನಕ್ಕೆ ಡಿಕ್ಕಿ ಹೊಡೆಸಿ  ವಿಕ್ರಾಂತ್ ಶೆಟ್ಟಿ ಮೇಲೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಅಪಘಾತ ರೀತಿಯಲ್ಲಿ ವಿಕ್ರಾಂತ್ ಶೆಟ್ಟಿಯ ಶವ ಪತ್ತೆಯಾಗಿದ್ದು ದ್ವಿಚಕ್ರ ವಾಹನ ಶವದ ಪಕ್ಕದಲ್ಲೇ ಇತ್ತು. ಪೊಲೀಸರಿಗೆ ಲಭಿಸಿದ ಮಾಹಿತಿಯ ಪ್ರಕಾರ ಸೋಮವಾರ ರಾತ್ರಿ ದುಷ್ಕರ್ಮಿಗಳ ದಾಳಿಯಿಂದ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.

ಪಾಂಡೇಶ್ವರ ಪೊಲೀಸರು  ಕೇಸು ದಾಖಲಿಸಿದ್ದು, ಪ್ರಕರಣದ ತನಿಖೆ ಪ್ರಗತಿಯಲ್ಲಿದೆ.

ಸೋಮವಾರ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English