[1]ಬಂಟ್ವಾಳ : ಬಂಟ್ವಾಳ ನಗರ ಪೊಲೀಸರು ಬಿ.ಸಿ.ರೋಡು ಸಮೀಪದ ಕೈಕಂಬ ತಾಳಿಪಡ್ಪು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ದಾಳಿ ನಡೆಸಿ ಅಕ್ರಮ ಕಸಾಯಿಖಾನೆಯೊಂದನ್ನು ಪತ್ತೆ ಹಚ್ಚಿದ ಓರ್ವನನ್ನು ಬಂಧಿಸಿದ್ದಾರೆ.
ಮನೆಯೊಂದಕ್ಕೆ ಪೊಲೀಸರು ದಾಳಿ ನಡೆಸಿದಾಗ ಅಕ್ರಮ ಕಸಾಯಿಖಾನೆ ಪತ್ತೆಯಾಗಿದೆ. ಬಶೀರ್ ಎಂಬಾತನನ್ನು ಬಂಧಿಸಲಾಗಿದ್ದು ಉಳಿದ ಮೂರು ಮಂದಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಭಾರೀ ಪ್ರಮಾಣದ ದನದ ಮಾಂಸ ಹಾಗೂ ರುಂಡಗಳು ಪತ್ತೆಯಾಗಿದೆ. ಆರೋಪಿಗಳು ದನಗಳನ್ನು ಕಳ್ಳಸಾಗಣೆ ಮಾಡಿ ತಂದು , ಮಾಂಸ ಮಾಡಿ ಮಾರುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
[2]ಬಂಟ್ವಾಳ ವೃತ್ತ ನಿರೀಕ್ಷಕ ಅನಿಲ್ ಎಸ್ ಕುಲಕರ್ಣಿ ಮಾರ್ಗದರ್ಶನದಲ್ಲಿ ನಗರ ಠಾಣಾಧಿಕಾರಿ ಬಿ.ಶೇಖರ್ ದಾಳಿ ನಡೆಸಿದರು. ಅಕ್ರಮ ಕಸಾಯಿಖಾನೆ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ರಿಕ್ಷಾ ಹಾಗೂ ಪಿಕಪ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.
ಕಾಯಾಚರಣೆಯಲ್ಲಿ ಸಿಬ್ಬಂದಿಗಳಾದ ಪ್ರದೀಪ್, ರಾಜುಪೂಜರಿ, ಸಂಪತ್, ಧರ್ಮ, ಜಯರಾಮ ರೈ, ದಾಮೋದರ್, ರಮೇಶ್ ಮತ್ತಿತರರು ಪಾಲ್ಗೊಂಡಿದ್ದರು.