ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ, ಸಾಧನೆಗಳ ಸರಮಾಲೆ: ಸಿಎಂ

1:06 PM, Wednesday, February 26th, 2014
Share
1 Star2 Stars3 Stars4 Stars5 Stars
(4 rating, 6 votes)
Loading...

Siddaramaiahಬೆಂಗಳೂರು: ತಮ್ಮ ಬಜೆಟ್‌ನ್ನು ಸುಳ್ಳಿನ ಸರಮಾಲೆ ಎಂದಿದ್ದ ಪ್ರತಿಪಕ್ಷದ ನಾಯಕರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಸಾಧನೆಗಳ ಸರಮಾಲೆ ಎಂದು ಬುಧವಾರ ಹೇಳಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಸಿಎಂ, ನಮ್ಮದು ನಡಿದಂತೆ ನಡೆಯುವ ಸರ್ಕಾರ. ಮೊದಲು ನೀವು ಬಜೆಟ್ ನೋಡುವ ದೃಷ್ಟಿಕೋನವನ್ನು ಬದಲಾಯಿಸಿಕೊಳ್ಳಿ ಎಂದು ಪ್ರತಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಲಹೆ ನೀಡಿದರು.

ನನ್ನ ಬಜೆಟ್ ಸುಳ್ಳಿನ ಸರಮಾಲೆ ಅಲ್ಲ. ಚುನಾವಣೆ ವೇಳೆ ನಾವು ನೀಡಿದ್ದ 165 ಭರವಸೆಗಳ ಪೈಕಿ ಮೊದಲ ಬಜೆಟ್‌ನಲ್ಲೇ 65 ಭರವಸೆಗಳನ್ನು ಈಡೇರಿಸಿದ್ದೇವೆ. ಇನ್ನು ಎರಡನೇ ಬಜೆಟ್‌ನಲ್ಲಿ 30 ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸಿಎಂ ಸದನಕ್ಕೆ ಉತ್ತರ ನೀಡಿದರು.

ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದ 272 ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ ಮತ್ತು ಇದಕ್ಕೆ ಪೂರಕ ಅನುದಾನ ಸಹ ಒದಗಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English