ಹೆಚ್ಚಿನ ಚಿಕಿತ್ಸೆಗಾಗಿ ನಟ ಅಂಬರೀಷ್ ಸಿಂಗಾಪುರಕ್ಕೆ ಶಿಫ್ಟ್

11:34 AM, Saturday, March 1st, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Ambarishಬೆಂಗಳೂರು: ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಆದರೂ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸಿಂಗಾಪುರಕ್ಕೆ ಶನಿವಾರ ಸ್ಥಳಾಂತರಿಸಲಾಗಿದೆ.

ಅಂಬರೀಷ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕರೆದೊಯ್ಯಲು ಖ್ಯಾತ ನಟ ಚಿತ್ರನಟ ರಜನಿಕಾಂತ್ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಂಬರೀಷ್ ಅವರನ್ನು ಇಂದು ಬೆಳಗ್ಗೆ 6.45ರ ಸುಮಾರಿಗೆ ವಿಕ್ರಂ ಆಸ್ಪತ್ರೆಯಿಂದ ಸಿಂಗಾಪುರಕ್ಕೆ ಕರೆದೊಯ್ಯೂಲಾಗಿದೆ.

ಅಂಬರೀಷ್ ಅವರ ಜೊತೆಗೆ ಪತ್ನಿ ಸುಮಲತಾ, ಹಾಗೂ ವಿಕ್ರಂ ಆಸ್ಪತ್ರೆಯ ಇಬ್ಬರು ವೈದ್ಯರ ತಂಡ ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಸಿಂಗಪುರದ ಮೌಂಟ್ ಎಲಿಜಬತ್ ಆಸ್ಪತ್ರೆಗೆ ತೆರಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಟಿ ಸುಮಲತಾ ಅವರು, ಅಂಬರೀಷ್ ರ ಸಾವಿರಾರು ಅಭಿಮಾನಿಗಳ ಹಾರೈಕೆ ಮತ್ತು ಅವರು ಸಲ್ಲಿಸುತ್ತಿರುವ ಪೂಜೆಗಲ್ಲಿಂದಾಗಿ ಅವರು ಗುಣಮುಖರಾಗಿ ವಾಪಸ್ ಬರುತ್ತಾರೆ ಎಂಬ ನಂಬಿಕೆಯಿಂದ ತಾವು ಸಿಂಗಪುರಕ್ಕೆ ಅಂಬಿಯನ್ನು ಕರೆದೊಯ್ಯೂತ್ತಿರುವುದಾಗಿ ಹೇಳಿದರು. ಅಲ್ಲದೆ ಯಾವುದೇ ವದಂತಿಗಳಿಗೆ ಅಭಿಮಾನಿಗಳು ಕಿವಿಗೊಡಬೇಡಿ. ಅಭಿಮಾನಿಗಳು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.

ಅಂಬರೀಷ್ ಅವರನ್ನು ಈಗ ರೋಗಿಯಾಗಿ ಕರೆದುಕೊಂಡು ಹೋಗುತ್ತಿದ್ದು, ಬರುವಾಗ ಅವರು ನಿಮ್ಮೆಲ್ಲರ ನೆಚ್ಚಿನ ರೆಬಲ್‌ಸ್ಟಾರ್ ಆಗಿ ವಾಪಸ್ ಬರುತ್ತಾರೆ ಎಂದು ಸುಮಲತಾ ವಿಶ್ವಾಸ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English