ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

9:06 PM, Sunday, June 15th, 2014
Share
1 Star2 Stars3 Stars4 Stars5 Stars
(4 rating, 5 votes)
Loading...

Ramakrishna school

ಮಂಗಳೂರು: ಬಂಟ್ಸ್ ಹಾಸ್ಟೆಲ್ನಲ್ಲಿರುವ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯಲ್ಲಿ 2013-14ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೇಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 34 ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಶಾಲಾ ವತಿಯಿಂದ ಪುರಸ್ಕರಿಸಲಾಯಿತು.

ಎ.ಬಿ.ಶೆಟ್ಟಿ ಸಭಾಂಗಣದಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ.ಅಜಿತ್ಕುಮಾರ್ ರೈ ಮಾಲಾಡಿ, ಕಾರ್ಯದರ್ಶಿಗಳಾದ ಮೇಘನಾಥ ಶೆಟ್ಟಿ, ಖಜಾಂಚಿ ಮನಮೋಹನ ಶೆಟ್ಟಿಯವರು ಆಗಮಿಸಿ, ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಸನ್ಮಾನಿಸಿದರು. ಹಾಗು ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಂತಿ ಚಿತ್ತರಂಜನ್ ಸಂಸ್ಥೆಯ ಸಂಚಾಲಕರಾದ ಬಿ.ಕೃಷ್ಣಪ್ರಸಾದ್ ರೈ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ.ಎಸ್. ಶೆಟ್ಟಿ ಹಾಗೂ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ.ಎಚ್.ಬಲ್ಲಾಳರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೂಪಾ ಹಾಗು ವಿಜಯಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English