11 ಮರಳು ಸಾಗಣೆ ಲಾರಿ ವಶ

9:50 PM, Thursday, April 7th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಮರಳು ಸಾಗಣೆ ಲಾರಿ ವಶ  ಮಂಗಳೂರು : ಮಂಗಳೂರು ತಾಲೂಕು ವ್ಯಾಪ್ತಿಯ ಅಡ್ಯಾರ್, ಉಳಾಯಿಬೆಟ್ಟು ಮತ್ತು ಬಂಟ್ವಾಳ ತಾಲೂಕಿನ ಪೊಳಲಿ, ಬರಿಮಾರ್ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ನಡೆಸುತ್ತಿದ್ದ 11 ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
5 ಮರಳು ತುಂಬಿದ ಲಾರಿಗಳು ಮತ್ತು 6 ಖಾಲಿ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಕಂದಾಯ ಇಲಾಖೆ ಈ ದಾಳಿಯ ನೇತೃತ್ವ ವಹಿಸಿತ್ತು. ಗಣಿ ಇಲಾಖೆ ಅಧಿಕಾರಿಗಳು ಬಳಿಕ ಘಟನಾ ಸ್ಥಳಕ್ಕೆ ತಲುಪಿ ಕಾನೂನು ಕ್ರಮಕೈಗೊಂಡಿದ್ದಾರೆ. 420, 379 ನಿಯಮಗಳಡಿ ಎಫ್ ಐ ಆರ್ ದಾಖಲಿಸಿದ್ದು, ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಅಕ್ರಮ ಮರಳುಗಾರಿಕೆ ನಡೆಸಿದವರ ವಿರುದ್ಧ ಕಾನೂನಿನಡಿಯಲ್ಲಿ ಕಠಿಣ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸುಬೋಧ್ ಯಾದವ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English