ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಕಾರ್ತಿಕ್ ರಾಜ್ ಚಿಕಿತ್ಸೆ ಫಲಕಾರಿಯಾಗದೆ ಸಾವು

3:25 PM, Monday, October 24th, 2016
Share
1 Star2 Stars3 Stars4 Stars5 Stars
(No Ratings Yet)
Loading...

karthikಮಂಗಳೂರು: ನಿನ್ನೆ ಬೆಳಗ್ಗೆ ಕೊಣಾಜೆ ಪೊಲೀಸ್ ಠಾಣೆಯ ಸಮೀಪ ದುಷ್ಕರ್ಮಿಗಳಿಂದ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಕಾರ್ತಿಕ್ ರಾಜ್ ಚಿಕಿತ್ಸೆ ಫಲಕಾರಿಯಾಗದೆ ಇಂದು ದೇರಳಕಟ್ಟೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಸುದರ್ಶನ್ ನಗರದ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಉಮೇಶ್ ಪೂಜಾರಿ ಅವರ ಪುತ್ರ ಕಾರ್ತಿಕ್ ರಾಜ್ (27) ಎಂದಿನಂತೆ ವಾಯು ವಿಹಾರಕ್ಕೆ ತೆರಳಿದ್ದರು. ಮರಳಿ ಕೊಣಾಜೆ ಪೊಲೀಸ್ ಠಾಣೆಯ ಹತ್ತಿರ ಬರುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್‌ನಿಂದ ನಡು ರಸ್ತೆಯಲ್ಲೇ ಕಾರ್ತಿಕ್ ಅವರನ್ನು ಕೊಚ್ಚಿ ಪರಾರಿಯಾಗಿದ್ದರು.

ತೀವ್ರವಾಗಿ ಗಾಯಗೊಂಡಿದ್ದ ಕಾರ್ತಿಕ್ ರಾಜ್‌ನನ್ನು ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಾಗಿಸಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English