ಮಂಗಳೂರು: ಹಿಂದೂ ಯುವಸೇನೆ ಆಶ್ರಯದಲ್ಲಿ ನಗರದ ನೆಹರೂ ಮೈದಾನದಲ್ಲಿ 18ನೇ ವರ್ಷದ ಗಣೇಶೋತ್ಸವವನ್ನು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಉದ್ಘಾಟಿಸಿದರು.
ಉದ್ಘಾಟನೆ ಬಳಿಕ ಮಾತನಾಡಿದ ಅವರು, ಗಣೇಶೋತ್ಸವವು ಸದ್ವಿಚಾರಗಳಿಗೆ ಹಚ್ಚಿನ ಪ್ರೇರಣೆ ನೀಡಲಿ ಹಾಗೂ ಈ ಕಾರ್ಯಕ್ರಮವು ಸೌಹಾರ್ದತೆಗೆ ಮಾದರಿಯಾಗಲಿ ಎಂದು ಹೇಳಿದರು.
ಕರಾವಳಿ ಸಮೂಹ ಶಿಕ್ಷಣ ಸಂಸ್ಥೆ ಸ್ಥಾಪಕ ಅಧ್ಯಕ್ಷ ಗಣೇಶ್ ಎಸ್. ರಾವ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ ಫರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನರೇಂದ್ರ ಎಲ್ ನಾಯಕ್, ಗಣೇಶೋತ್ಸವ ಸಮಿತಿ ಗೌರವ ಅಧ್ಯಕ್ಷ ಭಾಸ್ಕರಚಂದ್ರ ಶೆಟ್ಟಿ ಅಧ್ಯಕ್ಷ ಶಶಿಕಾಂತ್ ನಾಗ್ವೇಕರ್, ಪ್ರಧಾನ ಕಾರ್ಯದರ್ಶಿ ಶ್ರೀ ರಾಮ ಚಂದ್ರ ಚೌಟ, ಹಿಂದೂ ಯುವಸೇನೆಯ ಅಧ್ಯಕ್ಷ ಯಶೋಧರ ಚೌಟ, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಜಿಲಕೇರಿ, ಜನಾರ್ದನ ಎಸ್ ಅರ್ಕುಳ, ಪದ್ಮನಾಭ ನಾವೂರು, ಮೋಹನ್ ಪಡೀಲ್ ಮೊದಲಾದವರು ಉಪಸ್ಥಿತರಿದ್ದರು. ದಿನಕರ ಶೆಟ್ಟಿ ಸ್ವಾಗತಿಸಿದರು. ಧರ್ಮೇಂದ್ರ ಎಂ.ಪಿ ಕಾರ್ಯಕ್ರಮ ನಿರೂಪಿಸಿದರು.
Click this button or press Ctrl+G to toggle between Kannada and English