ಸಚಿವ ಮೇಟಿ ಪ್ರಕರಣ ಅವರ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ: ದಿನೇಶ್ ಗುಂಡೂರಾವ್

11:49 AM, Friday, December 16th, 2016
Share
1 Star2 Stars3 Stars4 Stars5 Stars
(No Ratings Yet)
Loading...

Dinesh-gundu-raoಮಂಗಳೂರು: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಮೇಟಿಯವರ ವೈಯಕ್ತಿಕ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಚಿವ ಬಿ.ರಮಾನಾಥ ರೈ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಮೇಟಿಯವರಿಂದ ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಸರ್ಕಾರದ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಂಬರುವ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಈಗಾಗಲೇ ತಯಾರಿ ನಡೆಯುತ್ತಿದೆ. ವಿವಿಧೆಡೆಗಳಲ್ಲಿ ಸಮಾವೇಶಗಳನ್ನು ಸಂಘಟಿಸಲಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಸಾಧನೆಗಳ ಕುರಿತು ಪ್ರಚಾರ ನಡೆಸುವುದು ಸಮಾವೇಶದ ಉದ್ದೇಶವಾಗಿದೆ.

ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಅವುಗಳಿಗೆ ಸಾಕಷ್ಟು ಪ್ರಚಾರ ದೊರೆತಿಲ್ಲ. ಕಾಂಗ್ರೆಸ್‌‌ನ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಹುರುಳಿಲ್ಲ ಎಂದವರು ಅಸಮಾಧಾನ ವ್ಯಕ್ತಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English