ಫಾದರ್ ಮುಲ್ಲರ್ ಕಾಲೇಜಿನ ವಿದ್ಯಾರ್ಥಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ

4:25 PM, Tuesday, August 1st, 2017
Share
1 Star2 Stars3 Stars4 Stars5 Stars
(5 rating, 1 votes)
Loading...

Fr  Mullers Student ಮಂಗಳೂರು : ಮಂಗಳೂರಿನ ಫಾದರ್ ಮುಲ್ಲರ್ ಕಾಲೇಜಿನ ಅಂತಿಮ ವರ್ಷದ ಎಂಡಿ ವಿದ್ಯಾರ್ಥಿ ಎಚ್.ಕೆ.ಪ್ರಸಾದ್(28) ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಜುಲೈ 29, ಶನಿವಾರ ನಡೆದಿರಬಹುದೆಂದು ಶಂಕಿಸಲಾಗಿದೆ.

ಹಾಸ್ಟೆಲ್ ಕೊಠಡಿಯಲ್ಲಿ ಒಬ್ಬನೇ ವಾಸಿಸುತ್ತಿದ್ದ ದಾವಣಗೆರೆ ಮೂಲದ ಪ್ರಸಾದ್, ಜುಲೈ 29 ರ ರಾತ್ರಿ ಬ್ಲೇಡಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಶಂಕಿಸಲಾಗಿದೆ. ಜುಲೈ 30 ರ ಬೆಳಿಗ್ಗೆ ಆತನ ತಂದೆ-ತಾಯಿ ಹಲವು ಬಾರಿ ಫೋನ್ ಮಾಡಿದರೂ ಆತ ಫೋನ್ ರಿಸೀವ್ ಮಾಡದಿದ್ದಾಗ ಭಯಗೊಂಡ ತಂದೆ ತಾಯಿ ಕಾಲೇಜಿಗೇ ಫೋನ್ ಮಾಡಿ ವಿಚಾರಿಸಿದ್ದಾರೆ. ಕಾಲೇಜಿನ ಸಿಬ್ಬಂದಿ ಹಾಸ್ಟೇಲಿಗೆ ಹೋಗಿ ನೋಡಿದಾಗ ಆತ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಪ್ರಸಾದ್ ಇತ್ತೀಚೆಗೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳಿನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂದಿರುವ ಪಾಂಡೇಶ್ವರ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English