ಬೈಕ್ ಮತ್ತು ಲಾರಿ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

5:59 PM, Saturday, November 4th, 2017
Share
1 Star2 Stars3 Stars4 Stars5 Stars
(5 rating, 1 votes)
Loading...

accidentಕುಂದಾಪುರ: ಕೋಟ ಠಾಣಾ ವ್ಯಾಪ್ತಿಯ ಬಿದ್ಕಲ್ ಕಟ್ಟೆ ಸಮೀಪದ ಗಾವಳಿ ಎಂಬಲ್ಲಿ ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಹಾಲಾಡಿಯ ಶಂಕರ್ ಕುಲಾಲ್‌ ಎಂಬವರ ಪುತ್ರ ಶಬರೀಶ್ (20) ಎಂದು ಗುರುತಿಸಲಾಗಿದೆ.

accidentಇವರು ಇಂದು ಬೆಳಗ್ಗೆ ಮನೆಯಿಂದ ಮಣಿಪಾಲಕ್ಕೆ ವೈಯಕ್ತಿಕ ಕೆಲಸಕ್ಕೆ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಬಾರ್ಕೂರುನಿಂದ ಹಾಲಾಡಿಗೆ ಬರುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ, ಶಬರೀಶ್ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈತ ಇತ್ತೀಚೆಗೆ ಹೋಟೆಲ್ ಮ್ಯಾನೇಜ್‌ಮೆಂಟ್ ಶಿಕ್ಷಣ ಪೂರೈಸಿದ್ದರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English