- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಹಿಂದೂಗಳಿಗೆ ಅಭದ್ರತೆ: ಮಟ್ಟಾರು

Rathnakar-hegde [1]ಉಡುಪಿ: ಹಿಂದೂಗಳಿಗೆ ಕರ್ನಾಟಕದಲ್ಲಿ ಅಭದ್ರತೆ ಕಾಡುತ್ತಿದೆ. ಉಡುಪಿ, ದ.ಕ., ಉ.ಕ. ಜಿಲ್ಲೆಗಳಲ್ಲಿ ಕ್ಷೋಭೆ ಆವರಿಸಿದೆ. ಲವ್‌ ಜೆಹಾದ್‌ ಮೂಲಕ ಹಿಂದೂ ಯುವತಿ ಯ ರನ್ನೂ ದಾರಿ ತಪ್ಪಿಸುವ ಕಾರ್ಯವಾಗುತ್ತಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಂಗಳೂರಿನಲ್ಲಿ ಶಾಸಕ ಮೊದಿನ್‌ ಬಾವಾ ಅವರು ಆರೋಪಿಯ ಭಾವ ಕಾಪು ಬಿಜೆಪಿ ಕಾರ್ಯಕರ್ತನೆಂದು ಹೇಳಿದ್ದಾರೆ. ಇದು ಶುದ್ಧ ಸುಳ್ಳು. ಆರೋಪ ಕೇಳಿಬಂದಾಗ ಸ್ವತಃ ಪರಿಶೀಲಿಸಿದಾಗ ಕಾಪುವಿನಲ್ಲಿ ಅಂತಹ ಕಾರ್ಯ ಕರ್ತನೇ ಬಿಜೆಪಿಯಲ್ಲಿ ಇಲ್ಲವೆನ್ನುವ ಸತ್ಯ ಗೊತ್ತಾಗಿದೆ. ಬಾವಾ ಉದ್ದೇಶಪೂರ್ವಕವಾಗಿಯೇ ಸುಳ್ಳು ಹೇಳಿದ್ದಾರೆ ಎಂದು ಮಟ್ಟಾರು ಹೇಳಿದರು.

ಜಿಲ್ಲೆಯಲ್ಲಿ ಸಿಎಂ ಉಪಸ್ಥಿತಿ ಯಲ್ಲಿ ಕಾಂಗ್ರೆಸ್‌ ನಡೆಸುವ ಸಾಧನಾ ಸಮಾವೇಶ ದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ವೇದಿಕೆಯೇರದೆ ಬಹಿಷ್ಕರಿಸುವಂತೆ ಎಲ್ಲರಿಗೂ ಸೂಚನೆ ರವಾನಿಸಲಾಗಿದೆ ಎಂದು ರತ್ನಾಕರ ಹೆಗ್ಡೆ ಹೇಳಿದರು. ಸಾಧನಾ ಸಮಾವೇಶದ ಹೆಸರಿನಲ್ಲಿ ಅಧಿಕಾರಿಗಳು, ಯೋಜನೆಗಳ ಫ‌ಲಾನುಭವಿಗಳನ್ನು ಬಳಸಿಕೊಂಡು ಸರಕಾರಿ ಪ್ರಾಯೋಜಿತ ಕಾಂಗ್ರೆಸ್‌ ಸಮಾವೇಶ ನಡೆಸಲು ಸಿದ್ಧತೆ ಮಾಡಿ ಕೊಳ್ಳುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮುತು ವರ್ಜಿ ಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ಕಾಂಗ್ರೆಸ್‌ ದುರುಪಯೋಗ ಮಾಡಿಕೊಳ್ಳುತ್ತಲಿದೆ.

ಕಾರ್ಯ ಕ್ರಮದಲ್ಲಿ ರಾಜ್ಯದ ವಿಪಕ್ಷ, ಬಿಜೆಪಿ ನಾಯಕರು, ದೇಶದ ಪ್ರಧಾನಿಗಳ ವಿರುದ್ಧ ಸಿಎಂ ಮಾತನಾಡಿದರೆ ಬಿಜೆಪಿ ಕಾರ್ಯಕರ್ತರು ಪರವಾದ ಘೋಷಣೆ ಹಾಕಲಿದ್ದಾರೆ ಎಂದರು. ಶಾಸಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಕೆ. ರಘುಪತಿ ಭಟ್‌, ನಾಯರಾದ ದಿನಕರ ಬಾಬು, ಕಟಪಾಡಿ ಶಂಕರ ಪೂಜಾರಿ, ಕುತ್ಯಾರು ನವೀನ್‌ ಶೆಟ್ಟಿ, ಶ್ರೀಶ ನಾಯಕ್‌ ಅವರು ಪತ್ರಿಕಾಗೋಷ್ಠಿಯಲ್ಲಿದ್ದರು.