ಕರ್ನಾಟಕ ಚುನಾವಣೆ: ದಿಲ್ಲಿಯಲ್ಲಿಂದು ಮೋದಿ, ಅಮಿತ್‌ ಶಾ ಭೇಟಿ

11:55 AM, Thursday, January 11th, 2018
Share
1 Star2 Stars3 Stars4 Stars5 Stars
(5 rating, 1 votes)
Loading...

narendra-modiಹೊಸದಿಲ್ಲಿ : ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಚುನಾವಣೆಯನ್ನು ಲಕ್ಷಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ಸಂಜೆ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ನಾಯಕರುಗಳನ್ನು ಭೇಟಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅವರು ಸಹೋದ್ಯೋಗಿಗಳಿಗೆ ಭೋಜನ ಕೂಟವೊಂದನ್ನು ಏರ್ಪಡಿಸಲಿದ್ದಾರೆ.

ಕರ್ನಾಟಕ ಮಾತ್ರವಲ್ಲದೆ ಈ ವರ್ಷ ಮೇಘಾಲಯ, ನಾಗಾಲ್ಯಾಂಡ್‌, ಮಿಜೋರಾ,, ಮಧ್ಯ ಪ್ರದೇಶ, ರಾಜಸ್ಥಾನ, ತ್ರಿಪುರ ಮತ್ತು ಛತ್ತೀಸ್‌ಗಢ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ. ಅದಕ್ಕೆ ಈಗಲೇ ಕಾರ್ಯ ತಂತ್ರ ರೂಪಿಸುವ ಇಚ್ಛೆ ಪ್ರಧಾನಿ ಮೋದಿಯದ್ದಾಗಿದೆ.

ತ್ರಿಪುರ ಮತ್ತು ಮೇಘಾಲಯಕ್ಕೆ ಫೆಬ್ರವರಿ ತಿಂಗಳಲ್ಲಿ ಚುನಾವಣೆ ನಡೆಯಲಿದೆಯಾದರೆ ಕರ್ನಾಟಕದಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ.

ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಪಕ್ಷದ ಉನ್ನತ ಪದಾಧಿಕಾರಿಗಳೊಂದಿಗೆ ಆಯಾ ರಾಜ್ಯಗಳ ರಾಜಕೀಯ ಸ್ಥಿತಿಗತಿಯನ್ನು ಚರ್ಚಿಸಲಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English