[1]ಬೆಂಗಳೂರು: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳಲು ಕೆಲ ದಿನ ಮಾತ್ರ ಬಾಕಿ ಉಳಿದಿದ್ದು, ಎಲ್ಲ ತಂಡಗಳು ಈಗಾಗಲೇ ಭರ್ಜರಿ ತಯಾರಿಯಲ್ಲಿ ಮಗ್ನವಾಗಿವೆ. ತವರು ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಹ ತಾಲೀಮು ನಡೆಸಿದೆ.
ಈ ಹಿಂದಿನ ಎಲ್ಲ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ರೂ ಇಲ್ಲಿಯವರೆಗೆ ಯಾವುದೇ ಸೀಸನ್ನಲ್ಲಿ ಟ್ರೋಫಿಗೆ ಮಾತ್ರ ಮುತ್ತಿಕ್ಕಿಲ್ಲ. ಹೀಗಾಗಿ ಈ ಸಲ ಎಲ್ಲ ರೀತಿಯ ಸವಾಲುಗಳಿಗೂ ಸಜ್ಜುಗೊಂಡಿರುವ ವಿರಾಟ್ ಕೊಹ್ಲಿ ನೇತೃತ್ವದ ಪಡೆ ಈ ಸಲ ಟೂರ್ನಿ ಕೈವಶ ಮಾಡಿಕೊಳ್ಳಲು ಸಖತ್ ತಯಾರುಗೊಂಡಿದೆ.
ಮೂರು ಮಾದರಿಯ ಕ್ರಿಕೆಟ್ನಲ್ಲೂ ಉತ್ತಮ ಪ್ರದರ್ಶನ ನೀಡಿರುವ ಕ್ಯಾಪ್ಟನ್ ಕೊಹ್ಲಿ, ಕಳೆದ ಟೂರ್ನಿಯಲ್ಲಿ ಮಾತ್ರ ಗಾಯಗೊಂಡು ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಆದರೆ ಈ ಬಾರಿ ಈಗಾಗಲೇ ಬೆಂಗಳೂರಿನಲ್ಲಿ ಅಭ್ಯಾಸದಲ್ಲಿ ತಂಡ ನಿರತವಾಗಿದೆ.
[2]ತಂಡದಲ್ಲಿ ಎಬಿ ಡಿವಿಲಿಯರ್ಸ್, ಬ್ರೆಂಡಂ ಮೆಕ್ಕಲಂ, ಕ್ರೀಸ್ ವೋಕ್ಸ್, ಕ್ವಿಂಟನ್ ಡಿಕಾಕ್ ಸೇರಿದಂತೆ ಪ್ರಮುಖರು ಇರುವುದರಿಂದ ಉತ್ತಮ ಪ್ರದರ್ಶನ ನೀಡುವ ಸಾಧ್ಯತೆ ಇದೆ. ಇನ್ನು ಬೌಲಿಂಗ್ ವಿಭಾಗ ಸಹ ಸದೃಡವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯ ತರಬೇತುದಾರ ಡೇನಿಯಲ್ ವೆಟ್ಟೊರಿ, ಈ ಹಿಂದಿಗಿಂತಲೂ ತಂಡ ಅತ್ಯುತ್ತಮವಾಗಿದ್ದು, ಉತ್ತಮ ಪ್ರದರ್ಶನ ನೀಡುವ ಭರವಸೆ ಇದೆ ಎಂದಿದ್ದಾರೆ.
ಏಪ್ರಿಲ್ 8ರಂದು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್ಸಿಬಿ ತಂಡ ಮೊದಲ ಪಂದ್ಯ ಆಡಲಿದೆ.