ಮಂಗಳೂರು: ಕಟ್ಟಡದ ನಿರ್ಮಾಣದ ವೇಳೆ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಅನಿತಾ ಅಯಿಲ್ ಮಿಲ್ಸ್ನ ಕಟ್ಟಡದಲ್ಲಿ ದುರ್ಘಟನೆ ನಡೆದಿದ್ದು, ಮಣ್ಣಿನಡಿ ಐವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಇಬ್ಬರು ಕಾರ್ಮಿಕರ ರಕ್ಷಣೆ ಮಾಡಲಾಗಿದೆ.
ಮೃತಪಟ್ಟ ಕಾರ್ಮಿಕ ಹಾಗೂ ಮಣ್ಣಿನಡಿ ಸಿಲುಕಿದ ಕಾರ್ಮಿಕರೆಲ್ಲರೂ ಉತ್ತರ ಕರ್ನಾಟಕ ಮೂಲದವರೆಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English