[1]ಮಂಗಳೂರು: ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಅವರಿಗೆ ಬಿಜೆಪಿಯಲ್ಲಿ ಟಿಕೆಟ್ ನೀಡದಿರುವುದನ್ನು ಕರ್ನಾಟಕ ರಾಜ್ಯ ಕ್ಷತ್ರಿಯರ ಒಕ್ಕೂಟ ಖಂಡಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜೆ ಕೃಷ್ಣಾನಂದರಾವ್, ಚುನಾವಣೆಗೆ ಕೃಷ್ಣ ಜೆ ಪಾಲೇಮಾರ್ ಅವರಿಗೆ ಟಿಕೆಟ್ ನೀಡದೆ ಬಿಜೆಪಿ ಅನ್ಯಾಯ ಮಾಡಿದೆ. ಚುನಾವಣೆಯ ಮೊದಲು ಕೃಷ್ಣ ಜೆ ಪಾಲೇಮಾರ್ ಅವರಿಗೆ ಸೂಕ್ತ ಸ್ಥಾನದ ಭರವಸೆ ನೀಡಬೇಕು. ಇಲ್ಲದಿದ್ದರೆ ಚುನಾವಣೆಯಲ್ಲಿ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.