ರಾಮನಗರ ಕ್ಷೇತ್ರದಿಂದ ಮಧು ಬಂಗಾರಪ್ಪ ಕಣಕ್ಕೆ..?

11:43 AM, Saturday, June 2nd, 2018
Share
1 Star2 Stars3 Stars4 Stars5 Stars
(No Ratings Yet)
Loading...

madhu-bangarappaರಾಮನಗರ: ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಹೊಂದಾಣಿಕೆಯಾಗಿ ಏಕೈಕ ಅಭ್ಯರ್ಥಿ ನಿಲ್ಲಿಸುವ ಇಂಗಿತ ವ್ಯಕ್ತಪಡಿಸಿವೆ.

ಹೀಗಾಗಿ ಜೆಡಿಎಸ್ ಅಭ್ಯರ್ಥಿಯಾಗಿ ಸೊರಬ ಕ್ಷೇತ್ರದ ಮಾಜಿ ಶಾಸಕ ಮಧುಬಂಗಾರಪ್ಪ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.

ಈಗಾಗಲೇ ಮಧುಬಂಗಾರಪ್ಪ ಅಭ್ಯರ್ಥಿಯಾಗುವ ಬಗ್ಗೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕುಮಾರಸ್ವಾಮಿ ಜೊತೆ ಚರ್ಚೆ ಮಾಡಿದ್ದು, ಇಬ್ಬರೂ ಮುಖಂಡರು ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗುತ್ತಿದೆ.

ರಾಮನಗರ ಹಾಗೂ ಚನ್ನಪಟ್ಟಣ ಎರಡು ಕ್ಷೇತ್ರದಿಂದ ಸಿಎಂ‌ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿ ಗೆದ್ದಿದ್ದರು. ಬಳಿಕ ಚನ್ನಪಟ್ಟಣ ಕ್ಷೇತ್ರ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ಹೆಚ್‌ಡಿಕೆ ರಾಜೀನಾಮೆ ನೀಡಿದ್ದರು. ಹೀಗಾಗಿ 6 ತಿಂಗಳ ಒಳಗೆ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾಗಿರುವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲೆ ಸೊರಬ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋತಿದ್ದರು. ಹೀಗಾಗಿ ಮಧುಬಂಗಾರಪ್ಪ ಗೆಲ್ಲಿಸಿ ಶಿವಮೊಗ್ಗ ಜಿಲ್ಲೆ‌ ಉಸ್ತುವಾರಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English