ದೆಹಲಿ : ಕರ್ನಾಟಕ ನೂತನ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರನ್ನು ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆಯವರ ನೇತೃತ್ವದಲ್ಲಿ ಪದಾಧಿಕಾರಿಗಳೊಂದಿಗೆ ಭಾನುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
ದೆಹಲಿ ಕರ್ನಾಟಕ ಸಂಘ ನಡೆದು ಬಂದ ದಾರಿ ಮತ್ತು ಈವರೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಮುಂಬರುವ ಸಂಘದ ಯೋಜನೆಗಳನ್ನು ವಿವರಿಸಿದರು. ಸಂಘವು ರಾಜಧಾನಿಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದು ತಮ್ಮ ಎಲ್ಲಾ ಸಹಕಾರ ನೀಡುವುದಾಗಿ ಮಾನ್ಯ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಜಂಟಿ ಕಾರ್ಯದರ್ಶಿಗಳಾದ ಟಿ.ಪಿ. ಬೆಳ್ಳಿಯಪ್ಪ, ಜಮುನಾ ಸಿ. ಮಠದ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ರಾಧಾಕೃಷ್ಣ, ಶಶಿಕಾಂತ ಪಾಟೀಲ್ ಮತ್ತು ಸಂತೋಷ್ ಜೆ ಹಾಜರಿದ್ದರು
Click this button or press Ctrl+G to toggle between Kannada and English