ಜಿಲ್ಲೆಯಲ್ಲಿ ಭೂ ಕುಸಿತ..ಸಂಪರ್ಕ ಕಳೆದುಕೊಂಡ ಗ್ರಾಮಗಳು!

1:22 PM, Thursday, August 16th, 2018
Share
1 Star2 Stars3 Stars4 Stars5 Stars
(No Ratings Yet)
Loading...

chikmagaluruಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟಕ್ಕೆ ಕೆಲವೆಡೆ ಭೂ ಕುಸಿತವಾಗಿದ್ದು, ಕಳಸ-ಹೊರನಾಡು, ಕೊಪ್ಪ, ಎನ್.ಆರ್.ಪುರ, ಮೇಲ್ಪಾಲ್, ಹೊದಸಾಳು, ಕೆರೆಹಕ್ಲು ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

ನಗರದ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಿದ್ದು 45 ದಿನದಲ್ಲಿ 15 ನೇ ಬಾರಿ ಮುಳುಗಿದೆ. ಹೆಬ್ಬಾಳೆ ಸೇತುವೆ ಕುದುರೆಮುಖ, ಕಳಸದ ಭಾಗದಲ್ಲಿ ಮಳೆ ಆಗುತ್ತಲೇ ಇರುವುದರಿಂದ ಭದ್ರೆಗೆ‌ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕಳಸ-ಹೊರನಾಡು ಸಂಪರ್ಕ ಸೇತುವೆಯನ್ನು ಸಂಪೂರ್ಣ ಮುಳುಗುವಂತೆ ಮಾಡಿದೆ.

ಇನ್ನೂ ಮಳೆಯಿಂದ ಮೂರು ದಿನದಲ್ಲಿ ನಾಲ್ಕೈದು ಕಡೆ ರಸ್ತೆ ಬಿರುಕು ಬಿಟ್ಟಿದ್ದು, ಕೊಪ್ಪ ತಾಲೂಕಿನ ಗುಡ್ಡೆತೋಟದ ರಸ್ತೆಯಲ್ಲಿ ನಾಲ್ಕು ಗ್ರಾಮಗಳಿಗೆ ಸಂಚಾರ ಕಲ್ಪಿಸುವ ಮುಖ್ಯ ರಸ್ತೆ ಕುಸಿತಗೊಂಡಿದೆ. ಇದರಿಮದ ರಸ್ತೆ ಮಾರ್ಗವಿಲ್ಲದೆ ಗ್ರಾಮಗಳು ಪರದಾಡುವಂತಾಗಿದೆ. ಆತಂಕದಲ್ಲಿರುವ ಜನಸಾಮಾನ್ಯರು ಕೂಡಲೇ ರಸ್ತೆ ದುರಸ್ಥಿಗೊಳಿಸುವಂತೆ ಸ್ಥಳಿಯ ಜಿಲ್ಲಾಡಳಿತ ಹಾಗೂ ಶಾಸಕರಿಗೆ ಆಗ್ರಹಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English