ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವುದು ಕಷ್ಟಕರವಾಗಿದ್ದರೂ ಕೂಡ ಕಟ್ಟೆ ತೀರುತ್ತೇವೆ: ಮಂಜುನಾಥ್ ಗೌಡ

3:56 PM, Saturday, August 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

shivmoggaಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟುವುದು ಕಷ್ಟಕರವಾಗಿದ್ದರೂ ಕೂಡ ಕಟ್ಟೆ ತೀರುತ್ತೇವೆ ಎಂದು ಜೆಡಿಎಸ್ನ ನೂತನ ಜಿಲ್ಲಾಧ್ಯಕ್ಷ ಡಾ.ಆರ್.ಎಂ. ಮಂಜುನಾಥ್ ಗೌಡ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇಲ್ಲಿ ಜೆಡಿಎಸ್ಗೆ ಉತ್ತಮ ಭವಿಷ್ಯವಿದೆ. ಈ ಹಿಂದೆ ಪಕ್ಷವನ್ನು ಬಿಟ್ಟು ಹೋದವರನ್ನು ಮತ್ತೆ ಕರೆತಂದು ಪಕ್ಷ ಕಟ್ಟುತ್ತೇವೆ ಎಂಬ ಭರವಸೆ ವ್ಯಕ್ತಪಡಿಸಿದರು. ಜೆ.ಹೆಚ್. ಪಟೇಲರ ಕಾಲದಲ್ಲಿ ಜನತಾ ಪಕ್ಷ ನಗರ ಸಭೆ ಹಾಗೂ ಜಿ.ಪಂ.ಗಳಲ್ಲಿ ಉತ್ತಮ ಸಾಧನೆ ಮಾಡಿದ್ದು, ಈಗಲೂ ಕೂಡ ಜಿ.ಪಂ. ಹಾಗೂ ಮಹಾನಗರ ಪಾಲಿಕೆ ಜೆಡಿಎಸ್ ತೆಕ್ಕೆಯಲ್ಲಿವೆ ಎಂದರು.

ಇನ್ನೂ, ಮಹಾನಗರ ಪಾಲಿಕೆ ಚುನಾವಣೆಯ ಪಟ್ಟಿಯನ್ನು ಸಂಜೆ ಬಿಡುಗಡೆ ಮಾಡಲಿದ್ದು, ಈ ಬಾರಿ ಎಂಟಕ್ಕೂ ಹೆಚ್ಚು ಸ್ಥಾನಗಳಿಸುವ ವಿಶ್ವಾಸವಿದೆ ಎಂದರು. ಅಲ್ಲದೇ ಪಾಲಿಕೆಯ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೂಂದಾಣಿಕೆ ಮಾಡಿಕೊಳ್ಳುವುದನ್ನು ಸಿಎಂ ಕುಮಾರಸ್ವಾಮಿ ಸ್ಥಳೀಯ ನಾಯಕರಿಗೆ ಬಿಟ್ಟಿದ್ದಾರೆ ಎಂದು ಹೇಳಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English