ಬೆಂಗಳೂರಲ್ಲಿ ಮಳೆ ಅನಾಹುತ ತಡೆಯಲು ಮುನ್ನೆಚ್ಚರಿಕೆ ಕ್ರಮ: ಡಾ. ಜಿ.ಪರಮೇಶ್ವರ್

1:14 PM, Tuesday, September 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

parameshwarಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚಿಸಲಾಗಿದೆ.‌ ತಗ್ಗು ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ವಲಯವಾರು ತಂಡಗಳು‌ ಕೆಲಸ‌ ಮಾಡುತ್ತಿವೆ ಎಂದು ಹೇಳಿದರು.

ರಸ್ತೆ ಗುಂಡಿ ಮುಚ್ಚಲು ಹೈಕೋರ್ಟ್ ಆದೇಶ‌ ನೀಡಿದ್ದು, ಈ ಕೆಲಸ ತ್ವರಿತವಾಗಿ ನಡೆಯುತ್ತಿದೆ. ಆದರೆ ಮಳೆಯಿಂದ ತೊಂದರೆಯಾಗುತ್ತಿದೆ. ರಾಜಕಾಲುವೆ ಒತ್ತುವರಿಗೆ ಕಠಿಣ ಕ್ರಮ‌ ಕೈಗೊಂಡಿದ್ದು, ಸರ್ವೆ ಮಾಡಲು ಸೂಚನೆ ನೀಡಲಾಗಿದೆ. ಸರ್ವೆ ಮಾಡುವವರ ಕೊರತೆಯಿಂದ ಕಂದಾಯ ಇಲಾಖೆಯಿಂದ ತಾತ್ಕಾಲಿಕವಾಗಿ ಸರ್ವೆ ಮಾಡುವವರನ್ನು ನೇಮಕ‌ ಮಾಡಲಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English