ಸಂತ್ರಸ್ತರಿಗೆ ಯಾವುದೇ ಸರ್ವೆ ನಡೆಸಲಾಗುತ್ತಿಲ್ಲ: ಜಿಲ್ಲಾಧಿಕಾರಿ ಕುಮಾರ್

10:55 AM, Wednesday, September 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

kumarಮಂಗಳೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಈಗಾಗಲೇ ಭೂಮಿಯನ್ನು ಬಿಟ್ಟು ಕೊಟ್ಟಿರುವ ಸಂತ್ರಸ್ತರ ಭೂಮಿಯಲ್ಲಿ ಮತ್ತೊಮ್ಮೆ ಸರ್ವೆ ನಡೆಸಿದ ವಿಚಾರ ಆತಂಕ ಸೃಷ್ಟಿಸಿತ್ತು. ಸದ್ಯ ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆತಂಕ ನಿವಾರಣೆ ಮಾಡಲಾಯಿತು.

ಪುತ್ತೂರು ತಾಲೂಕಿನ ನೆಲ್ಯಾಡಿ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ಹೆದ್ದಾರಿ ಬದಿಯಲ್ಲಿದ್ದಂತಹ ಹಲವರ ಭೂಮಿಯನ್ನು ಒತ್ತುವರಿ ಮಾಡಲಾಗಿತ್ತು. ಈ ಒತ್ತುವರಿಯ ಸಂತ್ರಸ್ತರಿಗೆ ಪರಿಹಾರವನ್ನೂ ವಿತರಿಸಲಾಗಿತ್ತು. ಇದೆಲ್ಲ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅದೇ ಭಾಗದಲ್ಲಿ ಎಲ್‌ ಆಂಡ್ ಟಿ ಕಂಪನಿಯವರು ಇತೀಚೆಗೆ ಮತ್ತೆ ಸರ್ವೆ ನಡೆಸಿದ್ದು, ಸಂತೋಷ್ ದಳದವರಿಗೆ ಆತಂಕ ಸೃಷ್ಟಿಸಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಸಭೆ ಕರೆದು ವಿಚಾರವನ್ನು ಚರ್ಚಿಸಲಾಯಿತು.

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಹವಾಲು ಆಲಿಸಿದ ಅಪರ ಜಿಲ್ಲಾಧಿಕಾರಿ ಕುಮಾರ್, ಸಂತ್ರಸ್ತರಿಗೆ ಯಾವುದೇ ಸರ್ವೆ ನಡೆಸಲಾಗುತ್ತಿಲ್ಲ. ಎಲ್ ಆಂಡ್ ಟಿ ಕಂಪೆನಿಯವರಯ ಯಾಕೆ ಸರ್ವೆ ಮಾಡಿದ್ದರೆ ಎಂಬ ಬಗ್ಗೆ ವಿಚಾರಿಸಲಾಗುವುದು. ಸಂತ್ರಸ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English