ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಲಾರಿ ಪಲ್ಟಿ: ಸಂಚಾರಕ್ಕೆ ಅಡಚಣೆ

3:59 PM, Wednesday, September 26th, 2018
Share
1 Star2 Stars3 Stars4 Stars5 Stars
(No Ratings Yet)
Loading...

belthangadyಬೆಳ್ತಂಗಡಿ: ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬುಧವಾರ ಬೆಳಗಿನ ಜಾವ ಬಾಳೆಕಾಯಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮಗುಚಿ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾದ ಘಟನೆ ನಡೆದಿದೆ.

ಲಾರಿ ತೆರವುಗೊಳಿಸಲು ಚಾರ್ಮಾಡಿ ಹಸನಬ್ಬ ತಂಡ ಸಹಕರಿಸಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ಶಿರಾಡಿ ಘಾಟಿ ಸಂಚಾರಕ್ಕೆ ತೆರವು ಆಗುವವರೆಗೆ ಇಲ್ಲಿ ಕ್ರೇನ್ ಒಂದರ ವ್ಯವಸ್ಥೆ ಮಾಡಿ ಕೊಡಬೇಕೆಂದು ಹಸನಬ್ಬ ಅವರು ಬೇಡಿಕೆ ಇಟ್ಟಿರುವ ಕುರಿತು ಉದಯವಾಣಿಯಲ್ಲಿ ಪ್ರಕಟಿಸಲಾಗಿತ್ತು. ಆದರೆ ಇನ್ನೂ ಕ್ರೇನ್ ವ್ಯವಸ್ಥೆ ಮಾಡಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English