ಮಂಗಳೂರು: ಪ್ರಕರಣವೊಂದರಲ್ಲಿ ಶಿಕ್ಷೆಗೊಳಗಾಗಿ ಎಸ್ಕೇಪ್ ಆಗಿದ್ದ ಆರೋಪಿ ಹತ್ತು ವರ್ಷಗಳ ಬಳಿಕ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ.
ಬಂಟ್ವಾಳ ತಾಲೂಕಿನ ನರಿಂಗಾಣ ತೌಡುಗೋಳಿ ಹೌಸ್ ನಿವಾಸಿ ರಾಜೇಶ್ ನಾಯ್ಕ (48) ಪಣಂಬೂರಿನಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ. ಈತನನ್ನು 10 ವರ್ಷಗಳ ಬಳಿಕ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2007ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಅಪಘಾತವೆಸಗಿದ ವಾಹನ ಚಾಲಕ ರಾಜೇಶ್ ನಾಯ್ಕನಿಗೆ ಎಂಬಾತನಿಗೆ 2008ರ ಎ.4ರಂದು ನ್ಯಾಯಾಲಯವು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಪಿ ರಾಜೇಶ್ ನಾಯ್ಕ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನ ಬಂಧನಕ್ಕೆ ವಾರೆಂಟ್ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯು ತನ್ನ ವಿಳಾಸವನ್ನು ಬದಲಾಯಿಸಿ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Click this button or press Ctrl+G to toggle between Kannada and English