ಅಕ್ರಮ ಮರಳು ಅಡ್ಡೆ ಮೇಲೆ ದಾಳಿ: 11ಲಕ್ಷ ರೂ. ಮೌಲ್ಯದ ಸೊತ್ತು ವಶ

10:48 AM, Wednesday, October 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

tempoಮಂಗಳೂರು: ಅಕ್ರಮ ಮರಳು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು, ಟಿಪ್ಪರ್, 2 ನಾಡ ದೋಣಿಗಳ ಸಹಿತ 11,72,500 ರೂ. ಮೌಲ್ಯದ ಸೊತ್ತುಗಳನ್ನು ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಅಜಿಲಮೊಗರು ಎಂಬಲ್ಲಿ ವಶಪಡಿಸಿಕೊಂಡಿದ್ದರೆ.

ಪೊಲೀಸರು ದಾಳಿ ನಡೆಸಿದಾಗ ಮರುಳುಗಾರಿಕೆಗೆಯಲ್ಲಿ ತೊಡಗಿದ್ದವರು ಪರಾರಿಯಾಗಿದ್ದು, ಅಲ್ಲಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಮುಂದಿನ ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ.

ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಸೋನವಣೆ ಹೃಷಿಕೇಶ್ ಭಗವಾನ್, ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್., ಸಿಅಕ್ರಮ ಮರಳು ಅಡ್ಡೆ ಮೇಲೆ ದಾಳಿಬ್ಬಂದಿಯಾದ ಸುಂದರ, ಮಾಧವ, ಬಸವರಾಜ್, ಕಿರಣ್ ಮತ್ತು ಸತ್ಯ ಪ್ರಕಾಶ್ ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English