ಬೆಂಗಳೂರು: ಮತ್ತೆ ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚೆನ್ನಮನ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಬಿಬಿಎಂಪಿಯ ಇಬ್ಬರು ಹೆಲ್ತ್ ಇನ್ಸ್ಪೆಕ್ಟರ್ಗಳಾದ ಜಗದೀಶ್ ಮತ್ತು ಜೈ ಕುಮಾರ್ ಎಸಿಬಿ ಬಲೆಗೆ ಬಿದ್ದವರು.
ಈ ಇಬ್ಬರು ಹೆಲ್ತ್ ಇನ್ಸ್ಪೆಕ್ಟರ್ಗಳು ಹೋಟೆಲೊಂದರ ಲೈಸನ್ಸ್ ನವೀಕರಣಕ್ಕೆ ಅದರ ಮಾಲೀಕರಿಂದ 40 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ.
ಇಬ್ಬರು ಅಧಿಕಾರಿಗಳ ಡ್ರಾನಲ್ಲಿ ದಾಖಲೆಯಿಲ್ಲದ 4 ಲಕ್ಷ ನಗದು ಪತ್ತೆಯಾಗಿದ್ದು, ಇಬ್ಬರು ಅಧಿಕಾರಿಗಳನ್ನ ಚೆನ್ನಮ್ಮನ ಅಚ್ಚುಕಟ್ಟು ಬಿಬಿಎಂಪಿ ಕಚೇರಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English