ಕನ್ನಡದ ಖ್ಯಾತ ನಿರ್ದೇಶಕ ಎಂ.ಎಸ್​ ರಾಜಶೇಖರ್​ ಆಸ್ಪತ್ರೆಗೆ ದಾಖಲು

4:50 PM, Monday, October 29th, 2018
Share
1 Star2 Stars3 Stars4 Stars5 Stars
(No Ratings Yet)
Loading...

hospitalizedಬೆಂಗಳೂರು: ಉಸಿರಾಟದ ತೊಂದರೆಯಿಂದಾಗಿ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಂ.ಎಸ್.ರಾಜಶೇಖರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು ನಗರದ ವಿಕ್ರಂ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರಾಜಶೇಖರ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ಅವರ ಪತ್ನಿ ರಾಣಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇನ್ನು ರಾಜಶೇಖರ್, ಮೇರು ನಟ ಡಾ. ರಾಜ್ಕುಮಾರ್ ಅವರ ಧ್ರುವತಾರೆ ಸೇರಿದಂತೆ ರಥಸಪ್ತಮಿ, ನಂಜುಂಡಿ ಕಲ್ಯಾಣಿ, ಮನ ಮೆಚ್ಚಿದ ಹುಡುಗಿಯಂತಹ ಸಾಕಷ್ಟು ಹಿಟ್ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English