ಅಕ್ರಮ ಜಾನುವಾರು ಸಾಗಾಟ: ಮೂವರು ಆರೋಪಿಗಳ ಬಂಧನ

11:08 AM, Thursday, November 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

trnsferಮಂಗಳೂರು: ಕೇರಳದ ಕಸಾಯಿಖಾನೆಗೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೆರ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ ಪೊಲೀಸರು ಬಂಧಿಸಿ, 6 ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡಿನ ಬದಿಯಡ್ಕ ಗ್ರಾಮದ ಕಂಗನ್ನಾರಿನ ವಿನಯ್ ಕುಮಾರ್(38), ಕಣ್ಣೂರು ಜಿಲ್ಲೆಯ ತಲ್ಲೇರಿವೆಲ್ ತಾಲೂಕಿನ ಪುನೂರಿನ ಸುನಿಲ್ ಕುಮಾರ್(45), ಕಾಸರಗೋಡು ತಾಲೂಕಿನ ನೆಕ್ಕರಾಜೆ ಗ್ರಾಮದ ಚೆಂಗಳದ ಸುರೇಶ್ ಸಿ.ಎಚ್.(38) ಬಂಧಿತ ಆರೋಪಿಗಳು.

ಆರೋಪಿಗಳು ಯಾವುದೇ ಪರವಾನಿಗೆ ಇಲ್ಲದೆ ಪೆರ್ನೆ ಕಡೆಯಿಂದ ವಿಟ್ಲದ ಕಡೆಗೆ 407 ಗೂಡ್ಸ್ ಟೆಂಪೊದಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಠಾಣಾ ಪಿಎಸ್ಐ ನಂದ ಕುಮಾರ್ ಮತ್ತು ಸಿಬ್ಬಂದಿ ಪೆರ್ನೆ ಹೆದ್ದಾರಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿತರಿಂದ 80 ಸಾವಿರ ರೂ. ಮೌಲ್ಯದ 5 ದನಗಳು ಹಾಗೂ 1 ಕರು, 1.50 ಲಕ್ಷ ರೂ. ಮೌಲ್ಯದ 407 ಗೂಡ್ಸ್ ಟೆಂಪೊ, 25 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನವನ್ನು‌ ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English