ಜೋಕಟ್ಟೆ ಬಳಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

11:06 AM, Saturday, December 15th, 2018
Share
1 Star2 Stars3 Stars4 Stars5 Stars
(No Ratings Yet)
Loading...

railwayಮಂಗಳೂರು: ಪಡೀಲ್-ಜೋಕಟ್ಟೆ ನಡುವಿನ ರೈಲು ಮಾರ್ಗದಲ್ಲಿ ಶುಕ್ರವಾರ ಮಧ್ಯಾಹ್ನ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.

ಜೋಕಟ್ಟೆ ಸಮೀಪದ ಬಬ್ಬರ್ಯ ದೇವಸ್ಥಾನ ಬಳಿಯ ನಿವಾಸಿ ಕಿಶೋರ್ (46) ಮೃತಪಟ್ಟಿದ್ದಾನೆ.

ವೃತ್ತಿಯಲ್ಲಿ ಪೈಂಟರ್ ಆಗಿದ್ದ ಅವರು ಮಧ್ಯಾಹ್ನ ಊಟ ಮಾಡಿ ರೈಲು ಹಳಿ ದಾಟಲು ಯತ್ನಿಸುತ್ತಿದ್ದಾಗ ಮಂಗಳೂರಿನಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಮತ್ಸಗಂಧಾ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರೈಲು ಅವರನ್ನು ಸುಮಾರು ದೂರಕ್ಕೆ ಎಳೆದೊಯ್ದಿದ್ದು, ತೀವ್ರ ಗಾಯಗೊಂಡ ಕಿಶೋರ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅವರ ಶರ್ಟ್ ಕಿಸೆಯಲ್ಲಿ ವೈದ್ಯರು ನೀಡಿದ ಚೀಟಿಯೊಂದು ಇದ್ದು, ಅದರ ಆಧಾರದಲ್ಲಿ ಮೃತರ ಗುರುತು ಪತ್ತೆ ಸಾಧ್ಯವಾಯಿತು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರು ಇದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English