‘ಸೇವಾ ರತ್ನ’ ಪ್ರಶಸ್ತಿ 2018

1:18 PM, Monday, December 17th, 2018
Share
1 Star2 Stars3 Stars4 Stars5 Stars
(No Ratings Yet)
Loading...

seva-awardಬಂಟ್ವಾಳ: ತುಂಬೆ ಗ್ರಾಮದ ಮಾಣೂರು ನಿವಾಸಿ ಅಬೂಬಕರ್ ಮುಸ್ಲಿಯಾರ್ ಹಾಗೂ ದುಲೈಕಾ ದಂಪತಿಗಳ ಪುತ್ರ ಆಶಿಕ್ ಕುಕ್ಕಾಜೆ ಅವರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೀಸ್ & ಎವರ್ನೆಸ್ ಟ್ರಸ್ಟ್ (ರಿ.) ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ’ಸೇವಾ ರತ್ನ’ ಪ್ರಶಸ್ತಿ 2018 ನ್ನು ಪೀಸ್ & ಎವರ್ನೆಸ್ ಟ್ರಸ್ಟ್ ಅಧ್ಯಕ್ಷ ಅಲ್ತಾಫ್ ಬಿಳಗುಳ ಜೇಸಿ ಭವನದಲ್ಲಿ ನೀಡಿ ಗೌರವಿಸಿದರು.

ಸಾಮಾಜಿಕ ತಾಣಗಳಲ್ಲಿ ಬಡ ರೋಗಿಗಳ, ಅಶಕ್ತರ ಬಗ್ಗೆ ಬರಹಗಳನ್ನು ಬರೆಯುವ ಮೂಲಕ ಬಡ ರೋಗಿಗಳ ಚಿಕಿತ್ಸೆಗೆ ಸಾಮಾಜಿಕ ಜಾಲತಾಣವನ್ನು ಉಪಯೋಗಿಸಿ ಹಣ ಸಂಗ್ರಹಿಸಿ ಅರ್ಹ ರೋಗಿಗಳ ಚಿಕಿತ್ಸೆಗೆ ನೆರವು ನೀಡುವುದರ ಮೂಲಕ ನಿಸ್ವಾರ್ಥವಾಗಿ ಬಡ ರೋಗಿಗಳ ಸೇವೆಯಲ್ಲಿ ತೊಡಗಿರುವ ಆಶಿಕ್ ಕುಕ್ಕಾಜೆ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English