ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿ ಪಲ್ಟಿ: ಕ್ಲೀನರ್​ ಸಾವು

4:02 PM, Tuesday, December 18th, 2018
Share
1 Star2 Stars3 Stars4 Stars5 Stars
(No Ratings Yet)
Loading...

tankerಮಂಗಳೂರು: ಮರದ ತುಂಡುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಟ್ರಾಫಿಕ್ ಪೊಲೀಸ್ ನಿಲ್ಲಿಸಲು ಹೋದಾಗ ಲಾರಿ ಪಲ್ಟಿಯಾಗಿ ಲಾರಿಯಲ್ಲಿದ್ದ ಕ್ಲೀನರ್ ಸಾವಿಗೀಡಾದ ಘಟನೆ ಮಂಗಳೂರಿನ ಹೊರವಲಯದ ತೊಕ್ಕೊಟ್ಟು ಜಂಕ್ಷನ್ನಲ್ಲಿ ನಡೆದಿದೆ.

ಟ್ರಾಫಿಕ್ ಪೊಲೀಸ್ ಲಾರಿಯನ್ನು ನಿಲ್ಲಿಸಲು ಸೂಚನೆ ನೀಡಿದಾಗ ಲಾರಿ ಚಾಲಕ ಲಾರಿಯನ್ನು ಬದಿಗೆ ತಂದು ನಿಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಬದಿಯ ಚರಂಡಿಗೆ ಹಾಸಲಾದ ಕಾಂಕ್ರೀಟ್ ಸ್ಲಾಬ್ ಮೇಲೆ ಲಾರಿ ನಿಂತ ಪರಿಣಾಮ ಸ್ಲಾಬ್ ತುಂಡಾಗಿ ಲಾರಿ ಪಲ್ಟಿಯಾಗಿದೆ. ಲಾರಿ ಪಲ್ಟಿಯಾಗುವ ಸಂದರ್ಭದಲ್ಲಿ ಅದೇ ಬದಿಯಲ್ಲಿದ್ದ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದನು. ಈಗ ಮೃತಪಟ್ಟಿದ್ದಾಗಿ ಮಾಹಿತಿ ಲಭ್ಯವಾಗಿದೆ.

ಮೃತ ಕ್ಲೀನರ್ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ನಿವಾಸಿ ವಸಂತ ಕುಮಾರ್ (25) ಎಂದು ತಿಳಿದುಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ವಸಂತ್ ಕುಮಾರ್ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಈ ಘಟನೆಗೆ ಟ್ರಾಫಿಕ್ ಪೊಲೀಸರೇ ಕಾರಣ ಎಂದು ಆಪಾದಿಸಿ ಟ್ರಾಫಿಕ್ ಪೊಲೀಸರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ್ರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English