ವಾಜಪೇಯಿ 94ನೇ ಜಯಂತಿ: ಅಜಾತ ಶತ್ರುಗೆ ಪ್ರಧಾನಿ ಮೋದಿ ನಮನ

11:31 AM, Tuesday, December 25th, 2018
Share
1 Star2 Stars3 Stars4 Stars5 Stars
(No Ratings Yet)
Loading...

vajpayeeನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿನ ವಾಜಪೇಯಿ ಸಮಾಧಿಗೆ ರಾಜಕೀಯ ಗಣ್ಯರು ಪುಷ್ಪ ಸಮರ್ಪಣೆ ಮಾಡಿದರು.

ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಮಾಜಿ ಪ್ರಧಾನಿ ಮನಮೋಹನ್ಸಿಂಗ್ ಸೇರಿದಂತೆ ಅನೇಕ ಗಣ್ಯರು ಅಜಾತುಶತ್ರು ಅಟಲ್ ಬಿಹಾರಿ ವಾಜಪೇಯಿ ಸಮಾಧಿ ಬಳಿ ಆಗಮಿಸಿ ಪುಷ್ಪ ಸಮರ್ಪಣೆ ಮಾಡಿದರು. ಈ ಮೂಲಕ ವಾಜಪೇಯಿ ಅವರ ಸ್ಮಾರಕ ಸ್ಥಳ ಲೋಕಾರ್ಪಣೆಗೊಂಡಿತು.

ವಾಜಪೇಯಿ ಅವರ ಸ್ಮರಣಾರ್ಥ ನಿನ್ನೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಾಜಪೇಯಿ ಅವರ ಭಾವಚಿತ್ರದ 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English