ಉಡುಪಿ : ಬ್ರಹ್ಮಾವರ ತಾಲೂಕು ಕಚೇರಿಯ ಭೂ ಮಾಪನ ಇಲಾಖೆಯ ಸರ್ವೆಯರ್, ಹಂದಾಡಿ ಕಲ್ಬೆಟ್ಟು ನಿವಾಸಿ ಅಶೋಕ ಭೈರವಾಡಗೆ(56) ಎಂಬವರು ಹಿರಿಯ ಅಧಿಕಾರಿಗಳ ಕಿರುಕುಳದ ಬಗ್ಗೆ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು, ಆ.1ರಂದು ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜು.28ರಂದು ‘ಕಚೇರಿಯವರ ಕಿರಿಕಿರಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಮರಣ ಪತ್ರ ಬರೆದು ಅಜ್ಜರಕಾಡು ಪಾರ್ಕ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಮಧ್ಯೆ ಅಶೋಕ್ ಪತ್ನಿ ನೀಡಿದ ದೂರಿನಂತೆ ಅಶೋಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಇಲಾಖೆಯ ಹಿರಿಯ ಅಧಿಕಾರಿ ಗಳಾದ ಸುಬ್ರಹ್ಮಣ್ಯ ಹಾಗೂ ಮಂಜುನಾಥ ಎಂಬವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇವರು ಜು.24ರಂದು ಬ್ರಹ್ಮಾವರ ತಾಲೂಕು ಕಚೇರಿಯ ಭೂಮಾಪನ ಇಲಾಖೆಯಲ್ಲಿ ಸರ್ವೇಯರ್ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದರು.
Click this button or press Ctrl+G to toggle between Kannada and English