- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿ.ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್

dk shivakumar [1]ಬಂಟ್ವಾಳ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ಶುಕ್ರವಾರ ಸಂಜೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರನ್ನು ಬಸ್ತಿಪಡ್ಪುವಿನ ಮನೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

ಕೆಪಿಸಿಸಿ ಅಧ್ಯಕ್ಷರಾದ ಬಳಿಕದ ದಕ್ಷಿಣಕನ್ನಡದ ಮೊದಲ ಭೇಟಿಯ ಸಂದರ್ಭದಲ್ಲಿ ಪೂಜಾರಿಯವರನ್ನು ಭೇಟಿ‌ಮಾಡಿರುವ ಅವರು, ರಾಜ್ಯದ ರಾಜಕೀಯ ವಿಚಾರಗಳ ಕುರಿತಾಗಿಯೂ ಪೂಜಾರಿಯವರ ಜೊತೆ ಚರ್ಚಿಸಿದರು ಎನ್ನಲಾಗಿದೆ.

ಕೆಪಿಸಿಸಿ ಕಾರ್ಯದರ್ಶಿ ಸಲೀಂ ಆಹಮ್ಮದ್ ಮಾಜಿ ಸಂಸದ ವಿನಯಕುಮಾರ್ ಸೊರಕೆ, ಶಾಸಕ ಯು ಟಿ ಖಾದರ್  , ಜನಾರ್ಧನಪೂಜಾರಿಯವರ ಪುತ್ರ ದೀಪಕ್ ಪೂಜಾರಿ ಈ ಸಂದರ್ಭ ಉಪಸ್ಥಿತರಿದ್ದರು.

dk shivakumar [2]