ಕೋಯಿಕ್ಕೋಡ್‌ನಲ್ಲಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅವಘಡ 11 ಮಂದಿ ಮೃತ, 125 ಮಂದಿ ಆಸ್ಪತ್ರೆಗೆ ದಾಖಲು

11:16 PM, Friday, August 7th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

AirIndia crash ಕೋಯಿಕ್ಕೋಡ್‌:  ಕೇರಳದ ಕೋಯಿಕ್ಕೋಡ್‌ನ ಕರಿಪುರ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡುವ ವೇಳೆ ದುಬೈ–ಕೋಯಿಕ್ಕೋಡ್‌ ನಡುವಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ (ಐಎಕ್ಸ್‌–1344 B737) ಅವಘಡಕ್ಕೀಡಾಗಿದೆ.

ಘಟನೆಯಲ್ಲಿ 11 ಮಂದಿ ಮೃತಪಟ್ಟಿದ್ದು, 126 ಮಂದಿಗೆ ಗಾಯಗಳಾಗಿವೆ. 15 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮಲಪುರಂ ಎಸ್‌ಪಿ ತಿಳಿಸಿ ದ್ದಾರೆ.

ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ತಲುಪಿದ್ದು ರಕ್ಷಣಾ ಕಾರ್ಯಗಳು ನಡೆಯುತ್ತಿವೆ. 125 ಕ್ಕಿಂತಲೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ 7.45ರಲ್ಲಿ ಅಪಘಾತ ಸಂಭವಿಸಿದೆ ಎಂದು ಕೊಂಡೋಟ್ಟಿ ಪೊಲೀಸರು ತಿಳಿಸಿದ್ದಾರೆ. ವಿಮಾನದಲ್ಲಿ ಒಟ್ಟು 190 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು, ನಾಲ್ವರು ಸಿಬ್ಬಂದಿ, 174 ಪ್ರಯಾಣಿಕರ ಜತೆ 10 ಮಕ್ಕಳು ಇದ್ದರು ಎಂದು ಡಿಜಿಸಿಎ ಮಾಹಿತಿ ನೀಡಿದೆ

AirIndia crash ಮೃತ ಐವರ ಪೈಕಿ ಪೈಲಟ್ ಕೂಡ ಒಬ್ಬರಾಗಿದ್ದು, ಅವರನ್ನು ದೀಪಕ್ ವಿ ಸಾಠೆ ಎಂದು ಗುರುತಿಸಲಾಗಿದೆ. ಅವರು ವಿಮಾನ ಹಾರಾಟದಲ್ಲಿ ಅನುಭವಿಯಾಗಿದ್ದರು. ಅಲ್ಲದೇ, ಭಾರತೀಯ ವಾಯುಪಡೆಯಲ್ಲೂ ಅವರು ಕಾರ್ಯನಿರ್ವಹಿಸಿದ್ದರು.

ಸದ್ಯ ದುರಂತಕ್ಕೀಡಾಗಿರುವ ವಿಮಾನವು ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ದುಬೈನಿಂದ ಭಾರತಕ್ಕೆ ಪ್ರಯಾಣಿಕರನ್ನು ಕರೆತರುತ್ತಿತ್ತು.

ದುಬೈನಿಂದ ಕೋಯಿಕ್ಕೋಡ್‌ಗೆ ಮರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ(ಎಎಕ್ಸ್‌ಬಿ 1344, ಬಿ 737) 10ನೇ ರನ್‌ವೇಗೆ ಇಳಿದ ನಂತರ ಚಲಿಸುವುದನ್ನು ಮುಂದುವರೆಸಿದೆ. ರೇನ್‌ವೇ ಅಂತ್ಯಕ್ಕೆ ಬಂದಾಗ ಭಾರಿ ಮಳೆಯ ಕಾರಣ ಕಣಿವೆಯಲ್ಲಿ ಕೆಳಗೆ ಬಿದ್ದು ಎರಡು ತುಂಡುಗಳಾಗಿ ಒಡೆದಿದೆ ಎಂದು ಡಿಜಿಸಿಎ ತಿಳಿಸಿದೆ.

ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿಂದ ಮಾಹಿತಿ ಪಡೆದಿದ್ದಾರೆ. ಕೋಯಿಕ್ಕೋಡ್‌ ಮತ್ತು ಮಲಪ್ಪುರಂನ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ತೆರಳಿದ್ದು, ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ ಎಂದು ಪಿಣರಾಯಿ ವಿಜಯನ್‌ ಅವರು ಪ್ರಧಾನಿ ಮೋದಿ ಅವರಿಗೆ ತಿಳಿಸಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯಚರಣೆಗೆ ಅಗತ್ಯವಿರುವ ಎಲ್ಲ ಸೇವೆಗಳನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ. ಸಚಿವ ಎ.ಸಿ ಮೊಯಿದ್ದೀನ್‌ ಅವರು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

AirIndia crash ಲ್ಯಾಂಡಿಗ್‌ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 174 ಪ್ರಯಾಣಿಕರು, 10 ಮಕ್ಕಳು, ಇಬ್ಬರು ಪೈಲಟ್‌ಗಳು ಮತ್ತು 5 ಕ್ಯಾಬಿನ್ ಸಿಬ್ಬಂದಿ ಇದ್ದರು. ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಮಾಧ್ಯಮ ಡಿಜಿ ರಾಜೀವ್ ಜೈನ್ ತಿಳಿಸಿದ್ದಾರೆ.

ವಿಮಾನ ದುರಂತಕ್ಕೆ ಸಂಬಂಧಿಸಿದ್ದಂತೆ ದುಬೈನಲ್ಲಿರುವ ಭಾರತೀಯ ಕನ್ಸುಲೇಟ್‌ ಜನರಲ್‌ ಟ್ವೀಟ್‌ ಮಾಡಿದ್ದು, ಹೆಲ್ಪ್‌ ಲೈನ್‌ ನಂಬರ್‌ಗಳನ್ನು ಬಿಡುಗಡೆ ಮಾಡಿದ್ದಾರೆ. 056 546 3903, 0543090572, 0543090572, 0543090575 ಸಂಖ್ಯೆಯಲ್ಲಿ ಯಾವುದೇ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಕನ್ಸುಲೇಟ್‌ ಕಚೇರಿ ತಿಳಿಸಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English