ಮಂಗಳೂರು :ಕೊಣಾಜೆ ಠಾಣಾ ವ್ಯಾಪ್ತಿಯ ಬೆಳ್ಮ ಗ್ರಾಮದ ಬರುವ ಎಂಬಲ್ಲಿ ಇಂದು ಬೆಳಗಿನ ಜಾವ ಅಣ್ಣನು ತಮ್ಮನಿಂದ ಕೊಲೆಯಾದ ಘಟನೆ ವರದಿಯಾಗಿದೆ. ಪ್ರವೀಣ್ ಡಿಸೋಜಾ ಮೃತ ವ್ಯಕ್ತಿಯಾಗಿದ್ದು, ಈತನ ಸಹೋದರ ನವೀನ್ ಎಂಬಾತ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆ ಮಾಡಿದ್ದಾನೆನ್ನಲಾಗಿದೆ.
ನವೀನ್ ನಗರದ ಕಾಲೇಜ್ ಒಂದರ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದು ನಿತ್ಯ ಬೆಳಗ್ಗೆ 5 ಗಂಟೆಯ ವೇಳೆಗೆ ಕೆಲಸಕ್ಕೆ ತೆರಳುತ್ತಿದ್ದನು ಆದರೆ ಅಣ್ಣ ಪ್ರವೀಣ್ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದು ನಿತ್ಯ ಜಗಳವಾಡುತ್ತಿದ್ದ ಎನ್ನಲಾಗಿದೆ. ಇಂದು ಮುಂಜಾನೆ 4 ಗಂಟೆಯ ಹೊತ್ತಿಗೆ ಅಣ್ಣನಾದ ಪ್ರವೀಣ್ ನವೀನನಿಗೆ ಮಲಗಲು ಬಿಡದೆ ತೊಂದರೆ ಕೊಡುತ್ತಿದ್ದು ಇದರಿಂದ ಕೋಪಗೊಂಡ ನವೀನ್ ಹತ್ತಿರದಲ್ಲೇ ಬಿದ್ದಿದ್ದ ಕಬ್ಬಿಣದ ಸರಳಿನಿಂದ ತಲೆಗೆ ಹೊಡೆದ ಪರಿಣಾಮ ಪ್ರವೀಣ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕೊಲೆಯ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಸಿಬ್ಬಂದಿಯೊಂದಿಗೆ ತೆರಳಿ ಮನೆಯಲ್ಲಿಯೇ ಇದ್ದ ಆರೋಪಿ ನವೀನ್ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
Click this button or press Ctrl+G to toggle between Kannada and English