ಮಂಜೇಶ್ವರ ನಿವಾಸಿಗಳಿಂದ ಕಣ್ಣೂರು ವಿಮಾನ ನಿಲ್ದಾಣದಲ್ಲಿ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶ

11:54 AM, Thursday, August 13th, 2020
Share
1 Star2 Stars3 Stars4 Stars5 Stars
(No Ratings Yet)
Loading...

goldಕಾಸರಗೋಡು :  ಕಣ್ಣೂರು ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನಾಭರಣ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿಗಳಾದ ಸತ್ತಾರ್ ಮತ್ತು ಸಮೀರ್ ಬಂಧಿತ ಆರೋಪಿಗಳು. ಬಂಧಿತರಿಂದ 45 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇವರು ಶಾರ್ಜಾ ಮತ್ತು ದುಬೈಯಿಂದ ಆಗಮಿಸಿದವರೆನ್ನಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇತ್ತೀಚಿನ ದಿನಗಳಿಂದ ಅಕ್ರಮ ಚಿನ್ನಾಭರಣ ಸಾಗಾಟ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಸ್ಟಮ್ಸ್ ತಪಾಸಣೆ ತೀವ್ರಗೊಳಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English