ತಕ್ಷಣ ಪ್ರಸಿದ್ದಿ ಹೊಂದಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ಅರೋಪಿ

3:07 PM, Friday, August 21st, 2020
Share
1 Star2 Stars3 Stars4 Stars5 Stars
(No Ratings Yet)
Loading...

vikash Kumarಮಂಗಳೂರು : ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಇಟ್ಟಿದೆ ಎಂದು ಬೆದರಿಕೆ ಕರೆ ಮಾಡಿದರೆ ಧಿಡೀರನೆ ಪ್ರಸಿದ್ದಿ ಪಡೆಯ ಬಹುದು ಎಂದು ಆರೋಪಿ ಯೋಚಿಸಿದ್ದ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ.

33 ವರ್ಷದ ಕಾರ್ಕಳ ಮುದ್ರಾಡಿ ನಿವಾಸಿ ವಸಂತ್ ಶೇರಿಗಾರ್ ಆರೋಪಿಯಾಗಿದ್ದು ಈತ 8 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾನೆ , ಮೊಬೈಲ್ ಫೋನ್ ಬಳಸುವಲ್ಲಿ ತುಂಬಾ ಪರಿಣಿತರಿದ್ದಾನೆ ಎಂದು ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಶುಕ್ರವಾರ (ಆಗಸ್ಟ್ 21) ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ಘಟನೆಯ ಬಗ್ಗೆ ವಿವರಗಳನ್ನು ತಿಳಿಸಿದ್ದಾರೆ.

“ಆಗಸ್ಟ್ 19 ರಂದು ಕಾರ್ಕಳದ ವ್ಯಕ್ತಿಯೊಬ್ಬರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ್ ರಾವ್ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು, ವಾಸುದೇವ್ ತಕ್ಷಣ ಪ್ರಸ್ತುತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಮಾಹಿತಿ ನೀಡಿದರು. ಪ್ರೋಟೋಕಾಲ್ ಪ್ರಕಾರ, ಸಿಐಎಸ್ಎಫ್ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಲಾಯಿತು.

“ನಂತರ ಇದು ಹುಸಿ ಕರೆ ಎಂದು ಕಂಡುಬಂದಿದೆ.  ಈ ಹಿಂದೆ ವಸಂತ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದನು. ಆತ ಆ ನಂತರದ ದಿನಗಳಲ್ಲಿ ಉಡುಪಿಯ ಹೋಟೆಲ್‌ನಲ್ಲಿ ಕೆಲಸ ಮಾಡಿದ್ದಾಗಿ ತಿಳಿದುಬಂದಿದೆ.

“ಈಗ ಲಾಕ್‌ಡೌನ್ ಕಾರಣ ಮನೆಯಲ್ಲಿದ್ದ. ಅಂತರ್ಜಾಲದಲ್ಲಿ ಬ್ರೌಸ್ ಮಾಡುವ ಮೂಲಕ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರ ದೂರವಾಣಿ ಸಂಖ್ಯೆ ಪಡೆದುಕೊಂಡಿದ್ದಾನೆ, ಜನವರಿಯಲ್ಲಿ ನಡೆದ ಘಟನೆ ಬಗೆಗೆ ಆತನಿಗೆ ಅರಿವಿತ್ತು. ಆದ್ದರಿಂದ, ಪ್ರಚಾರ ಪಡೆಯಲು, ಅವರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದಾನೆ.

“ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಜಾಮೀನು ರಹಿತ ಪ್ರಕರಣದ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳಡಿ ಆತನ ಬಂಧನವಾಗಿದೆ” ಎಂದು ಆಯುಕ್ತರು ಹೇಳಿದ್ದಾರೆ.

“ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದೆನ್ನುವುದು ತಪ್ಪು. ಅದನ್ನು ಸಾಬೀತುಪಡಿಸಲು ನಮ್ಮಲ್ಲಿ ವೈದ್ಯಕೀಯ ಪ್ರಮಾಣಪತ್ರವಿಲ್ಲದಿದ್ದಾಗ ಹಾಗೆನ್ನಲು ಸಾಧ್ಯವಿಲ್ಲ.” ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English