ಸ್ಕೂಟರಿಗೆ ಅಪರಿಚಿತ ದ್ವಿಚಕ್ರ ವಾಹನ ಹಿಟ್ ಎಂಡ್ ರನ್, ತಲೆಗೆ ಗಾಯಗೊಂಡಿದ್ದ ಸವಾರ ಸಾವು

2:21 PM, Tuesday, September 1st, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Scooter hit ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಕೆ.ವಿ.ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಹನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

ಸೋಮವಾರ ಸಂಜೆ ನಡೆದ ಹಿಟ್ ಎಂಡ್ ರನ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಆರ್. ಚೌಟ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಮೃತಪಟ್ಟಿದ್ದಾರೆ.

ನಿನ್ನೆ ಸಂಜೆ ವೇಳೆ ಬಿ.ಸಿ.ರೋಡು ಸರ್ಕಲ್ ಬಳಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದ್ದು, ಗಂಭೀರವಾಗಿ ತಲೆಗೆ ಗಾಯಗೊಂಡಿದ್ದ ಬಂಟ್ವಾಳ ಪಲ್ಲಮಜಲು ನಿವಾಸಿ, ಪ್ರಕಾಶ್ ಆರ್. ಚೌಟ ಅವರನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಮೃತಪಟ್ಟಿದ್ದಾರೆ.

ಪಾಣೆಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಅವರು ದ್ವಿಚಕ್ರ ವಾಹನದಲ್ಲಿ ಬರುತ್ತಿರುವ ವೇಳೆ ಹಿಂಬದಿಯಿಂದ ಬಂದ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಮೆಲ್ಕಾರ್ ಟ್ರಾಫಿಕ್ ಎಸ್.ಐ. ರಾಜೇಶ್ ಕೆ.ವಿ ಪರಾರಿಯಾದ ಕಾರಿನ ಬಗ್ಗೆ ಸಿ.ಸಿ.ಕ್ಯಾಮಾರದಲ್ಲಿ ಮಾಹಿತಿ ಪಡೆದು ಮಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English