ಯುವ ಮಹಿಳಾ ನ್ಯಾಯವಾದಿ ಶ್ರೀಮತಿ ಗೀತಾ ಡಿ. ನ್ಯಾಯಾಧೀಶರಾಗಿ ಆಯ್ಕೆ

10:17 PM, Saturday, February 24th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಶ್ರೀಮತಿ ಗೀತಾ ಡಿ. ರವರು 2023 ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ. ಸದ್ರಿಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.02.2024 ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತೆ ಶ್ರೀಮತಿ ಗೀತಾ ಡಿ. ಯವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ.

ಸದ್ರಿಯವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ಹೆಸರಾಂತ ವಕೀಲರಾದ ಶ್ರೀ ಮಯೂರ ಕೀರ್ತಿ ಹಾಗೂ ಶ್ರೀ ಶರತ್ ಕುಮಾರ್ ಬಿ. ರವರ ಕಛೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ.

ಗೀತಾ ಡಿ. ರವರು ವಕೀಲರಾದ ಶ್ರೀ ಕಾರ್ತಿಕ್ ಮಚ್ಚಿಲರವನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಶ್ರೀಮತಿ ಗೀತಾ ಡಿ. ರವರು ಶ್ರೀ ಡಿ. ಕೊಂಬೇಗೌಡ ಹಾಗೂ ಶ್ರೀಮತಿ ಕೋಮಲ ರವರ ಪುತ್ರಿಯಾಗಿರುತ್ತಾರೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English